‘ಭಾರತದಲ್ಲಿ ಫಿಫಾ ವಿಶ್ವಕಪ್‌, ನಮ್ಮ ತಂಡವೂ ಅಖಾಡಕ್ಕೆ’; ಪ್ರಧಾನಿ ನರೇಂದ್ರ ಮೋದಿ ಹೇಳಿಕೆ

Narendra Modi: ಮುಂದೊಂದು ದಿನ ಭಾರತದಲ್ಲಿಯೇ ಫಿಫಾ ವಿಶ್ವಕಪ್ ಆಯೋಜನೆಯಾಗಲಿದೆ. ಹಾಗೆಯೇ ಈ ವಿಶ್ವಕಪ್​ನಲ್ಲಿ ನಮ್ಮ ತಂಡವೂ ಆಡಲಿದೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.

‘ಭಾರತದಲ್ಲಿ ಫಿಫಾ ವಿಶ್ವಕಪ್‌, ನಮ್ಮ ತಂಡವೂ ಅಖಾಡಕ್ಕೆ’; ಪ್ರಧಾನಿ ನರೇಂದ್ರ ಮೋದಿ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: ಪೃಥ್ವಿಶಂಕರ

Updated on:Dec 21, 2022 | 11:36 AM

ಕಳೆದ ಭಾನುವಾರ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ (Fifa World Cup 2022) ಫೈನಲ್​ನಲ್ಲಿ ಫ್ರಾನ್ಸ್ ತಂಡವನ್ನು ಪೆನಾಲ್ಟಿ ಶೂಟೌಟ್​ನಲ್ಲಿ ಮಣಿಸುವುದರೊಂದಿಗೆ ಅರ್ಜೇಂಟಿನಾ ತಂಡ (Argentina defeated France) ಮೂರನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು. ಅರ್ಜೇಂಟಿನಾದ ಈ ಗೆಲುವನ್ನು ಇಡೀ ವಿಶ್ವವೇ ತಮ್ಮ ಗೆಲುವಂತೆ ಸಂಭ್ರಮಿಸುತ್ತಿದೆ. ಅದರಲ್ಲೂ ಕ್ರಿಕೆಟ್ ಧರ್ಮ ರಾಷ್ಟ್ರ ಎಂದೇ ಕರೆಸಿಕೊಳ್ಳುವ ಭಾರತದಲ್ಲೂ ಈ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ವಾಸ್ತವವಾಗಿ ಭಾರತದಲ್ಲಿ ಫುಟ್ಬಾಲ್ ಆಟದ ಕ್ರೇಜ್ ಅಷ್ಟಾಗಿ ಇಲ್ಲ. ಕೆಲವೊಂದು ರಾಜ್ಯಗಳನ್ನು ಬಿಟ್ಟರೆ ಭಾರತದಲ್ಲಿ ಭಾಗಶಃ ಕ್ರಿಕೆಟ್​ಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಆದರೆ ಈ ವಿಶ್ವಕಪ್​ ಮೇಲೆ ಭಾರತೀಯರು ತೋರಿರುವ ಆಸಕ್ತಿಯನ್ನು ಮನಗಂಡಿರುವ ಪ್ರಧಾನಿ ಮೋದಿಯವರು (Prime Minister Narendra Modi) ಮುಂದೊಂದು ದಿನ ಭಾರತದಲ್ಲಿಯೇ ಫಿಫಾ ವಿಶ್ವಕಪ್ ಆಯೋಜನೆಯಾಗಲಿದೆ ಎಂದಿದ್ದಾರೆ. ಹಾಗೆಯೇ ಈ ವಿಶ್ವಕಪ್​ನಲ್ಲಿ ನಮ್ಮ ತಂಡವೂ ಆಡಲಿದೆ ಎಂದಿದ್ದಾರೆ.

ಭವಿಷ್ಯದಲ್ಲಿ ಫಿಫಾ ವಿಶ್ವಕಪ್‌ಗೆ ಆತಿಥ್ಯ

ವಾಸ್ತವವಾಗಿ ಭಾರತವು ಇನ್ನೂ ಒಂದೇ ಒಂದು ಫಿಫಾ ವಿಶ್ವಕಪ್ ಪಂದ್ಯವನ್ನು ಆಡಿಲ್ಲ ಅಥವಾ ಆಯೋಜಿಸಿಲ್ಲ. ಆದರೆ ಮುಂದೊಂದು ದಿನ ಭಾರತವು ಭವಿಷ್ಯದಲ್ಲಿ ಫಿಫಾ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತದೆ ಮತ್ತು ಭಾಗವಹಿಸುತ್ತದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫಿಫಾ ವಿಶ್ವಕಪ್ ಟ್ರೋಫಿ ಅನಾವರಣಗೊಳಿಸಿದ ದೀಪಿಕಾ; ಕಾರ್ಯಕ್ರಮ ನೀಡಿದ ನೋರಾ ಫತೇಹಿ; ಫೋಟೋ

ಶಿಲ್ಲಾಂಗ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಈ ಬಗ್ಗೆ ವಿಶ್ವಾಸ ಹೊರಹಾಕಿದ್ದಾರೆ. ಭಾರತವು ಇದುವರೆಗೆ ಎರಡು ಅಂಡರ್-17 ರ ಎರಡು ಫಿಫಾ ವಿಶ್ವಕಪ್‌ಗಳನ್ನು ಆಯೋಜಿಸಿದೆ. ಭಾರತ 2018 ರಲ್ಲಿ ಬಾಲಕರ 17 ವರ್ಷದೊಳಗಿನವರ ಫಿಫಾ ವಿಶ್ವಕಪ್ ಅನ್ನು ಆಯೋಜಿಸಿದ್ದರೆ, ಈ ವರ್ಷ ಬಾಲಕಿಯರ ಅಂಡರ್ -17 ವಿಶ್ವಕಪ್ ಅನ್ನು ಆಯೋಜಿಸಲಾಗಿತ್ತು.

ಭಾರತ ಆತಿಥ್ಯ ವಹಿಸಲಿದೆ

ಭಾನುವಾರ ಶಿಲ್ಲಾಂಗ್‌ನಲ್ಲಿ ನಡೆದ ರ್ಯಾಲಿಯಲ್ಲಿ ಈ ಬಗ್ಗೆ ಮಾತನಾಡಿದ ಮೋದಿ, “ನಾನು ಇಂದು ಶಿಲ್ಲಾಂಗ್‌ಗೆ ಹೇಳಲು ಬಯಸುತ್ತೇನೆ, ನಮ್ಮ ಕಣ್ಣುಗಳು ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ ಮೇಲೆ ಇದ್ದರೂ, ಮೈದಾನದಲ್ಲಿ ವಿದೇಶಿ ತಂಡಗಳಿವೆ. ಆದರೆ ನಮ್ಮ ಯುವ ಶಕ್ತಿಯ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಆದ್ದರಿಂದ ಭಾರತದಲ್ಲಿ ನಾವು ಅದೇ ರೀತಿ ಆಚರಿಸುವ ಮತ್ತು ತ್ರಿವರ್ಣ ಧ್ವಜಕ್ಕೆ ಮೆರಗು ನೀಡುವ ದಿನ ದೂರವಿಲ್ಲ ಎಂದು ನಾನು ಸಂಪೂರ್ಣ ವಿಶ್ವಾಸದಿಂದ ಹೇಳಬಲ್ಲೆ’’ ಎಂದಿದ್ದಾರೆ.

ಅರ್ಜೆಂಟೀನಾಗೆ ವಿಶ್ವಕಪ್

ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಭಾನುವಾರ ಮುಕ್ತಾಯಗೊಂಡಿದೆ. ಅರ್ಜೆಂಟೀನಾ ರೋಚಕ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು ಮಣಿಸಿ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ 36 ವರ್ಷಗಳ ವಿಶ್ವಕಪ್ ಗೆಲ್ಲುವ ಬರ ನೀಗಿಸಿದೆ.

ಮೊದಲಾರ್ಧದಲ್ಲಿ ಅರ್ಜೆಂಟೀನಾ ಎರಡು ಗೋಲು ಗಳಿಸಿ ಮುನ್ನಡೆ ಸಾಧಿಸಿತು. ಇದರ ನಂತರ, ಎಂಬಪ್ಪೆ 80 ಮತ್ತು 81 ನೇ ನಿಮಿಷಗಳಲ್ಲಿ ಗೋಲು ಗಳಿಸುವ ಮೂಲಕ ಸ್ಕೋರ್ ಅನ್ನು ಸಮಗೊಳಿಸಿದರು. ಹೀಗಾಗಿ ಪಂದ್ಯವು ಹೆಚ್ಚುವರಿ ಸಮಯಕ್ಕೆ ಹೋಯಿತು. ಅಲ್ಲಿ ಮೆಸ್ಸಿ ಒಂದು ಗೋಲು ಗಳಿಸಿದರೆ, ನಂತರ ಎಂಬಪ್ಪೆ ಕೂಡ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಿ ಸ್ಕೋರ್ ಅನ್ನು 3-3 ರಿಂದ ಸಮಬಲಗೊಳಿಸಿದರು. ಅಂತಿಮವಾಗಿ ಪೆನಾಲ್ಟಿ ಶೂಟೌಟ್​ನಲ್ಲಿ ಅರ್ಜೆಂಟೀನಾ ಗೆಲುವು ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 21 December 22

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ