AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು ಮಣಿಸಿ ಸೆಮೀಸ್​ಗೆ ಲಗ್ಗೆ ಇಟ್ಟ ಬೆಂಗಳೂರು ಗೂಳಿಗಳು

ಹಾಲಿ ಚಾಂಪಿಯನ್‌ ದಬಾಂಗ್‌ ದೆಹಲಿ ತಂಡವನ್ನು ಬೆಂಗಳೂರು ಬುಲ್ಸ್‌ ತಂಡ ಭಾರೀ ಅಂತರದಿಂದ ಮಣಿಸುವ ಮೂಲಕ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

Pro Kabaddi 2022: ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು ಮಣಿಸಿ ಸೆಮೀಸ್​ಗೆ ಲಗ್ಗೆ ಇಟ್ಟ ಬೆಂಗಳೂರು ಗೂಳಿಗಳು
ಡೆಲ್ಲಿ ವಿರುದ್ಧ ಗೆದ್ದ ಬೆಂಗಳೂರು ಬುಲ್ಸ್
TV9 Web
| Edited By: |

Updated on:Dec 13, 2022 | 10:19 PM

Share

ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ತಂಡವನ್ನು ಭಾರಿ ಅಂತರದಿಂದ ಸೋಲಿಸಿ ಬೆಂಗಳುರು ಬುಲ್ಸ್‌ (Bengaluru Bulls) 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ (Pro Kabaddi 2022) ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇಂದು(ಡಿ.13) ಮಂಗಳವಾರ ಮುಂಬೈನಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ56-24 ಅಂಕಗಳಿಂದ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಗುಳಿಗಳು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ.

ಆರಂಭದಿಂದಲೇ ಆರ್ಭಟಿಸಿದ ಬೆಂಗಳೂರು ಗೂಳಿಗಳು, ದಬಾಂಗ್ ಡೆಲ್ಲಿ ತಂಡವನ್ನು ಒಟ್ಟು ನಾಲ್ಕು ಬಾರಿ ಆಲೌಟ್‌ ಮಾಡಿದವು. ರೈಡಿಂಗ್ ಹಾಗೂ ಡಿಫೆಂಡಿಂಗ್​ನಲ್ಲಿ ಆಕ್ರಮಣಕಾರಿ ಆಟವಾಡಿದ ಬೆಂಗಳೂರು ಬುಲ್ಸ್ ಅಂತಿಮವಾಗಿ ದಬಾಂಗ್ ಡೆಲ್ಲಿ ತಂಡವನ್ನು 56-24 ಅಂಕಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ ಪ್ರವೇಶಿಸಿದೆ.

ಬೆಂಗಳೂರು ಬುಲ್ಸ್, ಮೊದಲ ಅವಧಿಯ ಆಟದ ಮುಕ್ತಾಯದ ವೇಳೆಗೆ 31-15ರ ಮುನ್ನಡೆ ಕಂಡುಕೊಂಡಿತ್ತು. ಈ ಅವಧಿಯಲ್ಲಿ ಎರಡು ಬಾರಿ ಡೆಲ್ಲಿ ತಂಡವನ್ನು ಆಲೌಟ್‌ ಮಾಡಿದ್ದ ಬೆಂಗಳೂರು ಬುಲ್ಸ್‌, 2ನೇ ಅವಧಿಯ ಆಟದಲ್ಲೂ ಎರಡು ಬಾರಿ ಆಲೌಟ್‌ ಮಾಡಿತು. ಆ ಮೂಲಕ ಹಾಲಿ ಋತುವಿನಲ್ಲಿ ಡೆಲ್ಲಿ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ಬೆಂಗಳೂರು ಗೆಲುವು ಸಾಧಿಸಿರುವುದು ವಿಶೇಷ.

ರೈಡಿಂಗ್ ವಿಭಾಗದಲ್ಲಿ ಭರತ್ 15 ಅಂಕ ಮತ್ತು ವಿಕಾಸ್ ಖಂಡೋಲ 12 ಗಳಿಸಿ ಮಿಂಚಿದರೆ ಡಿಫೆಂಡಿಂಗ್ ನಲ್ಲಿ ಪೊನ್ ಪಾರ್ಥಿಬನ್ 7 ಅಂಕ ಮತ್ತು ಸೌರಭ್ ನಂದಲ್ 05 ಗಳಿಸಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಡೆಲ್ಲಿ ತಂಡವನ್ನು ಭಾರಿ ಅಂತರದಲ್ಲಿ ಆತ್ಮವಿಶ್ವಾದಲ್ಲಿರುವ ಬೆಂಗಳೂರು ಬುಲ್ಸ್, ಇದೇ ಗುರುವಾರ(ಡಿಸೆಂಬರ್ 15) ನಡೆಯಲಿರುವ ಉಪಾಂತ್ಯ ಕದನದಲ್ಲಿ ಬಲಿಷ್ಠ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಎದುರಿಸಲಿದೆ.

ಮತ್ತೊಂದೆಡೆ ಎರಡನೇ ಎಲಿಮಿನೇಟರ್ ಪಂದ್ಯ ಯುಪಿ ಯೋಧ ಮತ್ತು ತಮಿಳು ತಲೈವಾಸ್ ನಡುವೆ ನಡೆಯುತ್ತಿದ್ದು, ಇದರಲ್ಲಿ ಗೆದ್ದ ತಂಡ ಸೆಮಿಫೈನಲ್ ನಲ್ಲಿ ಪುಣೇರಿ ಪಲ್ಟಾನ್ ತಂಡವನ್ನು ಎದುರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:12 pm, Tue, 13 December 22

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್