Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು ಮಣಿಸಿ ಸೆಮೀಸ್​ಗೆ ಲಗ್ಗೆ ಇಟ್ಟ ಬೆಂಗಳೂರು ಗೂಳಿಗಳು

ಹಾಲಿ ಚಾಂಪಿಯನ್‌ ದಬಾಂಗ್‌ ದೆಹಲಿ ತಂಡವನ್ನು ಬೆಂಗಳೂರು ಬುಲ್ಸ್‌ ತಂಡ ಭಾರೀ ಅಂತರದಿಂದ ಮಣಿಸುವ ಮೂಲಕ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

Pro Kabaddi 2022: ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು ಮಣಿಸಿ ಸೆಮೀಸ್​ಗೆ ಲಗ್ಗೆ ಇಟ್ಟ ಬೆಂಗಳೂರು ಗೂಳಿಗಳು
ಡೆಲ್ಲಿ ವಿರುದ್ಧ ಗೆದ್ದ ಬೆಂಗಳೂರು ಬುಲ್ಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2022 | 10:19 PM

ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ತಂಡವನ್ನು ಭಾರಿ ಅಂತರದಿಂದ ಸೋಲಿಸಿ ಬೆಂಗಳುರು ಬುಲ್ಸ್‌ (Bengaluru Bulls) 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ (Pro Kabaddi 2022) ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇಂದು(ಡಿ.13) ಮಂಗಳವಾರ ಮುಂಬೈನಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ56-24 ಅಂಕಗಳಿಂದ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಗುಳಿಗಳು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ.

ಆರಂಭದಿಂದಲೇ ಆರ್ಭಟಿಸಿದ ಬೆಂಗಳೂರು ಗೂಳಿಗಳು, ದಬಾಂಗ್ ಡೆಲ್ಲಿ ತಂಡವನ್ನು ಒಟ್ಟು ನಾಲ್ಕು ಬಾರಿ ಆಲೌಟ್‌ ಮಾಡಿದವು. ರೈಡಿಂಗ್ ಹಾಗೂ ಡಿಫೆಂಡಿಂಗ್​ನಲ್ಲಿ ಆಕ್ರಮಣಕಾರಿ ಆಟವಾಡಿದ ಬೆಂಗಳೂರು ಬುಲ್ಸ್ ಅಂತಿಮವಾಗಿ ದಬಾಂಗ್ ಡೆಲ್ಲಿ ತಂಡವನ್ನು 56-24 ಅಂಕಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ ಪ್ರವೇಶಿಸಿದೆ.

ಬೆಂಗಳೂರು ಬುಲ್ಸ್, ಮೊದಲ ಅವಧಿಯ ಆಟದ ಮುಕ್ತಾಯದ ವೇಳೆಗೆ 31-15ರ ಮುನ್ನಡೆ ಕಂಡುಕೊಂಡಿತ್ತು. ಈ ಅವಧಿಯಲ್ಲಿ ಎರಡು ಬಾರಿ ಡೆಲ್ಲಿ ತಂಡವನ್ನು ಆಲೌಟ್‌ ಮಾಡಿದ್ದ ಬೆಂಗಳೂರು ಬುಲ್ಸ್‌, 2ನೇ ಅವಧಿಯ ಆಟದಲ್ಲೂ ಎರಡು ಬಾರಿ ಆಲೌಟ್‌ ಮಾಡಿತು. ಆ ಮೂಲಕ ಹಾಲಿ ಋತುವಿನಲ್ಲಿ ಡೆಲ್ಲಿ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ಬೆಂಗಳೂರು ಗೆಲುವು ಸಾಧಿಸಿರುವುದು ವಿಶೇಷ.

ರೈಡಿಂಗ್ ವಿಭಾಗದಲ್ಲಿ ಭರತ್ 15 ಅಂಕ ಮತ್ತು ವಿಕಾಸ್ ಖಂಡೋಲ 12 ಗಳಿಸಿ ಮಿಂಚಿದರೆ ಡಿಫೆಂಡಿಂಗ್ ನಲ್ಲಿ ಪೊನ್ ಪಾರ್ಥಿಬನ್ 7 ಅಂಕ ಮತ್ತು ಸೌರಭ್ ನಂದಲ್ 05 ಗಳಿಸಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಡೆಲ್ಲಿ ತಂಡವನ್ನು ಭಾರಿ ಅಂತರದಲ್ಲಿ ಆತ್ಮವಿಶ್ವಾದಲ್ಲಿರುವ ಬೆಂಗಳೂರು ಬುಲ್ಸ್, ಇದೇ ಗುರುವಾರ(ಡಿಸೆಂಬರ್ 15) ನಡೆಯಲಿರುವ ಉಪಾಂತ್ಯ ಕದನದಲ್ಲಿ ಬಲಿಷ್ಠ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಎದುರಿಸಲಿದೆ.

ಮತ್ತೊಂದೆಡೆ ಎರಡನೇ ಎಲಿಮಿನೇಟರ್ ಪಂದ್ಯ ಯುಪಿ ಯೋಧ ಮತ್ತು ತಮಿಳು ತಲೈವಾಸ್ ನಡುವೆ ನಡೆಯುತ್ತಿದ್ದು, ಇದರಲ್ಲಿ ಗೆದ್ದ ತಂಡ ಸೆಮಿಫೈನಲ್ ನಲ್ಲಿ ಪುಣೇರಿ ಪಲ್ಟಾನ್ ತಂಡವನ್ನು ಎದುರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:12 pm, Tue, 13 December 22

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ