AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro kabaddi 2021-22: ಬೆಂಗಳೂರು ಬುಲ್ಸ್​ಗೆ ಸೋಲುಣಿಸಿದ ಪಟ್ನಾ ಪೈರೇಟ್ಸ್​

bengaluru bulls vs patna pirates: ಪವನ್ ಕುಮಾರ್ ಶೆಹ್ರಾವತ್ ಮೊದಲಾರ್ಧದಲ್ಲಿ 8 ನಿಮಿಷಕ್ಕೂ ಅಧಿಕ ಸಮಯ ಬೆಂಚ್ ಕಾಯಬೇಕಾಯಿತು. ಅಷ್ಟರಲ್ಲಾಗಲೇ ಮುನ್ನಡೆ ಸಾಧಿಸಿದ ಪಟ್ನಾ ಪೈರೇಟ್ಸ್ ತಂಡವು ಮೊದಲಾರ್ಧದಲ್ಲಿ 20 ಪಾಯಿಂಟ್ ಗಳಿಸಿತು.

Pro kabaddi 2021-22: ಬೆಂಗಳೂರು ಬುಲ್ಸ್​ಗೆ ಸೋಲುಣಿಸಿದ ಪಟ್ನಾ ಪೈರೇಟ್ಸ್​
bengaluru bulls vs patna pirates
TV9 Web
| Edited By: |

Updated on: Jan 16, 2022 | 9:48 PM

Share

ಪ್ರೋ ಕಬಡ್ಡಿ ಲೀಗ್​ನ 59ನೇ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಬೆಂಗಳೂರು ಬುಲ್ಸ್ ಮೊದಲಾರ್ಧವನ್ನು ಪೂರ್ಣಗೊಳಿಸಿದೆ. ಇದಾಗ್ಯೂ ಆಡಿರುವ 11 ಪಂದ್ಯಗಳಲ್ಲಿ 7 ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಬುಲ್ಸ್ ಅಗ್ರಸ್ಥಾನದಲ್ಲಿದೆ. ಇನ್ನು ಭಾರೀ ಕುತೂಹಲಕ್ಕೆ ಕಾರಣವಾಗಿ ಈ ಪಂದ್ಯದಲ್ಲಿ ಆರಂಭದಲ್ಲಿ ಬೆಂಗಳೂರು ಬುಲ್ಸ್ ಮೇಲುಗೈ ಸಾಧಿಸಿತ್ತು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪಟ್ನಾ ಪೈರೇಟ್ಸ್​ ಅತ್ಯುತ್ತಮ ಡಿಫೆನ್ಸ್ ಮೂಲಕ ಗಮನ ಸೆಳೆಯಿತು. ಇತ್ತ ಬೆಂಗಳೂರು ಬುಲ್ಸ್ ಸ್ಟಾರ್ ರೈಡರ್ ಪವನ್ ಕುಮಾರ್ ಶೆಹ್ರಾವತ್ ಆರಂಭದಲ್ಲೇ ಔಟ್ ಆಗಿದ್ದು ಬೆಂಗಳೂರು ತಂಡಕ್ಕೆ ಮುಳುವಾಯಿತು.

ಏಕೆಂದರೆ ಔಟ್ ಆಗಿದ್ದ ಪವನ್ ಕುಮಾರ್ ಶೆಹ್ರಾವತ್ ಮೊದಲಾರ್ಧದಲ್ಲಿ 8 ನಿಮಿಷಕ್ಕೂ ಅಧಿಕ ಸಮಯ ಬೆಂಚ್ ಕಾಯಬೇಕಾಯಿತು. ಅಷ್ಟರಲ್ಲಾಗಲೇ ಮುನ್ನಡೆ ಸಾಧಿಸಿದ ಪಟ್ನಾ ಪೈರೇಟ್ಸ್ ತಂಡವು ಮೊದಲಾರ್ಧದಲ್ಲಿ 20 ಪಾಯಿಂಟ್ ಗಳಿಸಿತು. ಆದರೆ ಬೆಂಗಳೂರು ಬುಲ್ಸ್ ಕಲೆಹಾಕಿದ್ದು ಕೇವಲ 16 ಪಾಯಿಂಟ್ ಮಾತ್ರ.

4 ಪಾಯಿಂಟ್​ಗಳ ಮುನ್ನಡೆಯೊಂದಿಗೆ ದ್ವಿತಿಯಾರ್ಧ ಆರಂಭಿಸಿದ ಪಟ್ನಾ ಪೈರೇಟ್ಸ್ ಮುನ್ನಡೆ ಕಾಯ್ದುಕೊಳ್ಳಲು ಯಶಸ್ವಿಯಾಯಿತು. ಅದರಂತೆ ಪಟ್ನಾ ಪೈರೇಟ್ಸ್ ತಂಡವು ಬೆಂಗಳೂರು ಬುಲ್ಸ್ ಅನ್ನು ಆಲೌಟ್ ಮಾಡುವ ಮೂಲಕ 28-21 ಅಂತರವನ್ನು ಪಡೆದುಕೊಂಡರು. ಅಷ್ಟೇ ಅಲ್ಲದೆ ದ್ವಿತಿಯಾರ್ಧದಲ್ಲೂ ಅತ್ಯುತ್ತಮ ಡಿಫೆನ್ಸ್ ಆಟವನ್ನು ಪ್ರದರ್ಶಿಸಿದ ಪಟ್ನಾ ಪೈರೇಟ್ಸ್​ ಟ್ಯಾಕಲ್​ ಪಾಯಿಂಟ್​ಗಳ ಮೂಲಕ ಗಮನ ಸೆಳೆದರು. ಈ ಮೂಲಕ ಪವನ್ ಕುಮಾರ್ ಶೆಹ್ರಾವತ್ ಅವರನ್ನು ಕಟ್ಟಿಹಾಕಿದ ಪಟ್ನಾ ಪೈರೇಟ್ಸ್​ ಬಿಟ್ಟು ಕೊಟ್ಟಿದ್ದು ಕೇವಲ 10 ಪಾಯಿಂಟ್​. ಅದರಲ್ಲಿ 5 ಪಾಯಿಂಟ್ ಬಂದಿದ್ದು ಬೋನಸ್ ಮೂಲಕ ಎಂಬುದು ವಿಶೇಷ.

ಅಂತಿಮವಾಗಿ 38-31 ಪಾಯಿಂಟ್​ಗಳೊಂದಿಗೆ ಪಟ್ನಾ ಪೈರೇಟ್ಸ್​ ತಂಡವು 7 ಪಾಯಿಂಟ್​ಗಳ ಅಂತರದಿಂದ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್​ ಟೇಬಲ್​ನಲ್ಲಿ 2ನೇ ಸ್ಥಾನಕ್ಕೇರಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ