AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Bulls: ರಣ ರೋಚಕ ಪಂದ್ಯದಲ್ಲಿ ಬೆಂಗಾಲ್​ಗೆ ಸೋಲುಣಿಸಿದ ಬೆಂಗಳೂರು ಬುಲ್ಸ್

Pro Kabaddi League 2021: ದ್ವಿತಿಯಾರ್ಧದಲ್ಲಿ ಕಂಬ್ಯಾಕ್ ಮಾಡಿದ ಬೆಂಗಳೂರು ಬುಲ್ಸ್ ಅತ್ಯುತ್ತಮ ರೈಡಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ನಾಯಕ ಪವನ್​ ಕುಮಾರ್​ಗೆ ಸಾಥ್ ನೀಡಿದ ಚಂದ್ರನ್ ರಂಜಿತ್ ಕೂಡ ಉತ್ತಮ ರೈಡಿಂಗ್ ಮಾಡಿದರು.

Bengaluru Bulls: ರಣ ರೋಚಕ ಪಂದ್ಯದಲ್ಲಿ ಬೆಂಗಾಲ್​ಗೆ ಸೋಲುಣಿಸಿದ ಬೆಂಗಳೂರು ಬುಲ್ಸ್
bengaluru bulls
TV9 Web
| Edited By: |

Updated on:Dec 26, 2021 | 10:27 PM

Share

ಪ್ರೋ ಕಬಡ್ಡಿ ಲೀಗ್ ಸೀಸನ್ 8ನಲ್ಲಿನ ತನ್ನ 3ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಬೆಂಗಾಲ್ ವಾರಿಯರ್ಸ್ ವಿರುದ್ದ ರೋಚಕ ಜಯ ಸಾಧಿಸಿದೆ. ನಾಯಕ ಪವನ್ ಶೆರಾವತ್ (Pavan Sehrawat) ಅವರ ಅದ್ಭುತ ಪ್ರದರ್ಶನದಿಂದಾಗಿ ಬೆಂಗಳೂರು ತಂಡವು ಕೇವಲ 1 ಅಂಕಗಳಿಂದ ಜಯ ಸಾಧಿಸಿತು. ಕೊನೆಯ ಕ್ಷಣದವರೆಗೂ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯವು ಅತ್ಯುತ್ತಮ ಹೋರಾಟಕ್ಕೆ ಸಾಕ್ಷಿಯಾಗಿತ್ತು.

ಮೊದಲಾರ್ಧದಲ್ಲೇ ಉಭಯ ತಂಡಗಳು ಭರ್ಜರಿ ಪೈಪೋಟಿ ನಡೆಸಿತ್ತು. ಅದರಂತೆ ಹಾಫ್​ ಟೈಮ್ ವೇಳೆ 18-17 ಅಂತರವನ್ನು ಕಾಯ್ದುಕೊಂಡಿತು. ಮೊದಲಾರ್ಧದಲ್ಲಿ ಬೆಂಗಳೂರು ಬುಲ್ಸ್​ ರೈಡರ್ ಪವನ್ ಶೆಹ್ರಾವತ್ 8 ಪಾಯಿಂಟ್ಸ್ ಗಳಿಸಿದರೆ, ಬೆಂಗಾಲ್ ರೈಡರ್ ಮಣಿಂದರ್ ಸಿಂಗ್ 11 ಪಾಯಿಂಟ್ಸ್ ಪಡೆದಿದ್ದರು.

ಆದರೆ ದ್ವಿತಿಯಾರ್ಧದಲ್ಲಿ ಕಂಬ್ಯಾಕ್ ಮಾಡಿದ ಬೆಂಗಳೂರು ಬುಲ್ಸ್ ಅತ್ಯುತ್ತಮ ರೈಡಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ನಾಯಕ ಪವನ್​ ಕುಮಾರ್​ಗೆ ಸಾಥ್ ನೀಡಿದ ಚಂದ್ರನ್ ರಂಜಿತ್ ಕೂಡ ಉತ್ತಮ ರೈಡಿಂಗ್ ಮಾಡಿದರು. ಪರಿಣಾಮ ಪಂದ್ಯದ ಮುಕ್ತಾಯಕ್ಕೆ ಕೇವಲ 40 ಸೆಕೆಂಡ್​ಗಳಿರುವಾಗ ಉಭಯ ತಂಡಗಳು 34 ರ ಸಮಬಲ ಸಾಧಿಸಿತು. ಈ ವೇಳೆ ದಕ್ಷಿಣ ಕೊರಿಯಾದ ಡೋಂಗ್ ಗಿಯೋನ್ ಲೀ ಅತ್ಯಮೂಲ್ಯ 2 ಪಾಯಿಂಟ್ ತಂದುಕೊಡುವ ಮೂಲಕ ಬೆಂಗಳೂರು ಬುಲ್ಸ್ ಅಂಕವನ್ನು 36 ಕ್ಕೇರಿಸಿದರು.

ಅಂತಿಮ ಕ್ಷಣದಲ್ಲಿ ಬುದ್ದಿವಂತಿಕೆಯ ಆಟ ಪ್ರದರ್ಶಿಸಿದ ಬೆಂಗಳೂರು ಬುಲ್ಸ್ ತಂಡವು 36-35 ಅಂಕಗಳಿಂದ ರೋಚಕ ಜಯ ತನ್ನದಾಗಿಸಿಕೊಂಡಿತು. ಈ ಪಂದ್ಯದಲ್ಲಿ ಬೆಂಗಳೂರು ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ 15 ಅಂಕಗಳಿಸಿದರೆ, ಚಂದ್ರನ್ ರಂಜಿತ್ 6 ಅಂಕ ತಂದುಕೊಟ್ಟರು. ಇನ್ನು ಹಾಲಿ ಚಾಂಪಿಯನ್ಸ್ ಬೆಂಗಾಲ್ ವಾರಿಯರ್ಸ್ ತಂಡದ ನಾಯಕ ಮಣಿಂದರ್ ಸಿಂಗ್ 17 ಅಂಕ ಗಳಿಸಿ ಅದ್ಭುತ ಪ್ರದರ್ಶನ ನೀಡಿದರೂ ಇತರೆ ತಂಡಕ್ಕೆ ಜಯ ದಕ್ಕಿಸಿಕೊಡಲು ಸಾಧ್ಯವಾಗಲಿಲ್ಲ. ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್​ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

Published On - 10:27 pm, Sun, 26 December 21

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್