AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್

Pro Kabaddi League: ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.

Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್
ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ
TV9 Web
| Edited By: |

Updated on: Jan 02, 2022 | 10:29 PM

Share

ಇಂದು ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಪುಣೇರಿ ಪಲ್ಟನ್ ತಂಡವನ್ನು 11 ಅಂಕಗಳ ಅಂತರದಿಂದ ಸೋಲಿಸಿತು. ಇಂದಿನ ಸೋಲಿನಿಂದಾಗಿ ಕೋಚ್ ಅನುಪ್ ಕುಮಾರ್ ಅವರ ಪುಣೆ ಪಲ್ಟನ್ ಸ್ಥಿತಿ ಹದಗೆಟ್ಟಿದೆ. ಪುಣೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅವರು ಐದು ಪಂದ್ಯಗಳಿಂದ ಕೇವಲ ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಲಿಷ್ಠ ಪ್ರದರ್ಶನ ಆರಂಭವಾಗಿದೆ. ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಮೊದಲಾರ್ಧದಲ್ಲಿ ಹಿನ್ನಡೆ ಕಂಡರೂ ಬೆಂಗಳೂರು ಗೆದ್ದಿತು. ಈ ಋತುವಿನಲ್ಲಿ ದೆಹಲಿ ಮತ್ತು ಬೆಂಗಳೂರು ಎರಡೂ ಉತ್ತಮ ಫಾರ್ಮ್‌ನಲ್ಲಿವೆ. ದೆಹಲಿಯ ನವೀನ್ ಕುಮಾರ್ ಮತ್ತು ಬೆಂಗಳೂರಿನ ಪವನ್ ಶರಾವತ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ನಿನ್ನೆ ಕೊನೆ ಗಳಿಗೆಯಲ್ಲಿ ಪವನ್ ಬೆಂಗಳೂರು ತಂಡಕ್ಕೆ ಸೋಲು ತಪ್ಪಿಸಿದರು ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವಿನ ರೋಚಕ ಕಾದಾಟದಲ್ಲಿ ಕಡೆಯ ನಿಮಿಷ ಬೆಂಗಳೂರಿನ ನಾಯಕ ಪವನ್ ಶೆರವತ್, ಟೈಟಾನ್ಸ್ ನಾಯಕ ರೋಹಿತ್ ಕುಮಾರ್ ಅವರನ್ನು ಹಿಡಿಯುವ ಮೂಲಕ ಪಂದ್ಯವನ್ನು 34-34 ಅಂಕಗಳಿಂದ ಟೈ ಗೊಳಿಸಲು ಯಶಸ್ವಿಯಾದರು. ಪಂದ್ಯದ ಮೊದಲ 10 ನಿಮಿಷಗಳ ಆಟದಲ್ಲಿ ಟೈಟಾನ್ಸ್ ತಂಡವೇ ಮೇಲುಗೈ ಸಾಧಿಸಿತ್ತು. ಆದರೆ ನಂತರ ತಿರುಗೇಟು ನೀಡುತ್ತ ಸಾಗಿದ ಬುಲ್ಸ್ ತಂಡ ಮೊದಲಾರ್ಧದ ಅಂತ್ಯದ ವೇಳೆಗೆ 14-12ರಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ನಾಯಕ ಪವನ್ ಶೆರಾವತ್ ಆರಂಭಿಕ ರೈಡ್‌ಗಳಲ್ಲಿ ವೈಫಲ್ಯ ಕಂಡಿದ್ದು ಬುಲ್ಸ್‌ಗೆ ಹಿನ್ನಡೆಯಾಗಿ ಪರಿಣಮಿಸಿತ್ತು. ಬೆಂಗಳೂರು ಪರ ಚಂದ್ರನ್ ರಂಜಿತ್ 3 ರೈಡ್, 6 ಬೋನಸ್ ಪಾಯಿಂಟ್ ಸೇರಿ ಒಟ್ಟು 9 ಅಂಕಗಳಿಸಿದರೆ, ಟೈಟಾನ್ಸ್ ಪರ ಅಂಕಿತ್ ಬೇನಿವಾಲ್ 10 ರೈಡ್ ಪಾಯಿಂಟ್ ಗಳಿಸಿ ಮಿಂಚಿದರು. ಆದರೆ ಜಿದ್ದಾಜಿದ್ದಿನ ಕಾದಾಟ ಕೊನೆಗೆ ಸಮಬಲ ಸಾಧಿಸಿ ಅಭಿಮಾನಿಗಳಿಗೆ ಕಬಡ್ಡಿ ರಸದೌತಣವನ್ನು ಉಣಬಡಿಸಿತು.

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ