AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್

Pro Kabaddi League: ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.

Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್
ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ
TV9 Web
| Updated By: ಪೃಥ್ವಿಶಂಕರ|

Updated on: Jan 02, 2022 | 10:29 PM

Share

ಇಂದು ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಪುಣೇರಿ ಪಲ್ಟನ್ ತಂಡವನ್ನು 11 ಅಂಕಗಳ ಅಂತರದಿಂದ ಸೋಲಿಸಿತು. ಇಂದಿನ ಸೋಲಿನಿಂದಾಗಿ ಕೋಚ್ ಅನುಪ್ ಕುಮಾರ್ ಅವರ ಪುಣೆ ಪಲ್ಟನ್ ಸ್ಥಿತಿ ಹದಗೆಟ್ಟಿದೆ. ಪುಣೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅವರು ಐದು ಪಂದ್ಯಗಳಿಂದ ಕೇವಲ ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಲಿಷ್ಠ ಪ್ರದರ್ಶನ ಆರಂಭವಾಗಿದೆ. ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಮೊದಲಾರ್ಧದಲ್ಲಿ ಹಿನ್ನಡೆ ಕಂಡರೂ ಬೆಂಗಳೂರು ಗೆದ್ದಿತು. ಈ ಋತುವಿನಲ್ಲಿ ದೆಹಲಿ ಮತ್ತು ಬೆಂಗಳೂರು ಎರಡೂ ಉತ್ತಮ ಫಾರ್ಮ್‌ನಲ್ಲಿವೆ. ದೆಹಲಿಯ ನವೀನ್ ಕುಮಾರ್ ಮತ್ತು ಬೆಂಗಳೂರಿನ ಪವನ್ ಶರಾವತ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ನಿನ್ನೆ ಕೊನೆ ಗಳಿಗೆಯಲ್ಲಿ ಪವನ್ ಬೆಂಗಳೂರು ತಂಡಕ್ಕೆ ಸೋಲು ತಪ್ಪಿಸಿದರು ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವಿನ ರೋಚಕ ಕಾದಾಟದಲ್ಲಿ ಕಡೆಯ ನಿಮಿಷ ಬೆಂಗಳೂರಿನ ನಾಯಕ ಪವನ್ ಶೆರವತ್, ಟೈಟಾನ್ಸ್ ನಾಯಕ ರೋಹಿತ್ ಕುಮಾರ್ ಅವರನ್ನು ಹಿಡಿಯುವ ಮೂಲಕ ಪಂದ್ಯವನ್ನು 34-34 ಅಂಕಗಳಿಂದ ಟೈ ಗೊಳಿಸಲು ಯಶಸ್ವಿಯಾದರು. ಪಂದ್ಯದ ಮೊದಲ 10 ನಿಮಿಷಗಳ ಆಟದಲ್ಲಿ ಟೈಟಾನ್ಸ್ ತಂಡವೇ ಮೇಲುಗೈ ಸಾಧಿಸಿತ್ತು. ಆದರೆ ನಂತರ ತಿರುಗೇಟು ನೀಡುತ್ತ ಸಾಗಿದ ಬುಲ್ಸ್ ತಂಡ ಮೊದಲಾರ್ಧದ ಅಂತ್ಯದ ವೇಳೆಗೆ 14-12ರಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ನಾಯಕ ಪವನ್ ಶೆರಾವತ್ ಆರಂಭಿಕ ರೈಡ್‌ಗಳಲ್ಲಿ ವೈಫಲ್ಯ ಕಂಡಿದ್ದು ಬುಲ್ಸ್‌ಗೆ ಹಿನ್ನಡೆಯಾಗಿ ಪರಿಣಮಿಸಿತ್ತು. ಬೆಂಗಳೂರು ಪರ ಚಂದ್ರನ್ ರಂಜಿತ್ 3 ರೈಡ್, 6 ಬೋನಸ್ ಪಾಯಿಂಟ್ ಸೇರಿ ಒಟ್ಟು 9 ಅಂಕಗಳಿಸಿದರೆ, ಟೈಟಾನ್ಸ್ ಪರ ಅಂಕಿತ್ ಬೇನಿವಾಲ್ 10 ರೈಡ್ ಪಾಯಿಂಟ್ ಗಳಿಸಿ ಮಿಂಚಿದರು. ಆದರೆ ಜಿದ್ದಾಜಿದ್ದಿನ ಕಾದಾಟ ಕೊನೆಗೆ ಸಮಬಲ ಸಾಧಿಸಿ ಅಭಿಮಾನಿಗಳಿಗೆ ಕಬಡ್ಡಿ ರಸದೌತಣವನ್ನು ಉಣಬಡಿಸಿತು.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್