AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Bulls: ಭರ್ಜರಿ ಜಯದೊಂದಿಗೆ ಸೆಮಿಫೈನಲ್​ಗೆ ನುಗ್ಗಿದ ಬೆಂಗಳೂರು ಬುಲ್ಸ್

Pro Kabaddi League 2022: ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 11 ಪಾಯಿಂಟ್ ಕಲೆಹಾಕಿದರೆ, ಚಂದ್ರನ್ ರಂಜಿತ್ 7 ರೈಡಿಂಗ್ ಪಾಯಿಂಟ್ ಪಡೆದುಕೊಂಡರು.

Bengaluru Bulls: ಭರ್ಜರಿ ಜಯದೊಂದಿಗೆ ಸೆಮಿಫೈನಲ್​ಗೆ ನುಗ್ಗಿದ ಬೆಂಗಳೂರು ಬುಲ್ಸ್
Bengaluru Bulls
TV9 Web
| Edited By: |

Updated on: Feb 21, 2022 | 9:57 PM

Share

ಪ್ರೋ ಕಬಡ್ಡಿ ಲೀಗ್​ನ ಎಲಿಮಿನೇಟರ್​ ಪಂದ್ಯಗಳು ಮುಗಿದಿವೆ. ಪುಣೇರಿ ಪಲ್ಟನ್ ವಿರುದ್ದ ಯುಪಿ ಯೋಧಾ ಗೆದ್ದರೆ, ಗುಜರಾತ್ ಜೈಂಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್ ತಂಡವು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ ಜೈಂಟ್ಸ್​ ನಡುವಣ ಪಂದ್ಯವು ಆರಂಭದಲ್ಲೇ ಒನ್​ಸೈಡ್ ಪಂದ್ಯವಾಗಿ ಮಾರ್ಪಟ್ಟಿತು. ಬೆಂಗಳೂರು ಬುಲ್ಸ್​ ಸ್ಟಾರ್ ರೈಡರ್ ಪವನ್ ಕುಮಾರ್ ಶೆಹ್ರಾವತ್ ಅವರ ಭರ್ಜರಿ ಪ್ರದರ್ಶನದ ಮುಂದೆ ಗುಜರಾತ್ ಆಟಗಾರರು ಮಂಕಾದಂತೆ ಕಂಡು ಬಂದರು.

ಆರಂಭಿಕ ರೈಡ್ ಮೂಲಕವೇ ಪವನ್ ಕುಮಾರ್ ಶೆಹ್ರಾವತ್ ಹಾಗೂ ಚಂದ್ರನ್ ರಂಜಿತ್ ಬೆಂಗಳೂರು ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳನ್ನು ತಂದುಕೊಟ್ಟರು. ಮತ್ತೊಂದೆಡೆ ರಾಕೇಶ್ ಉತ್ತಮ ರೈಡ್ ಮಾಡಿದ್ರೂ ಸೌರಭ್ ನಂದಾಲ್ ಹಾಗೂ ಮಹೇಂದ್ರ ಸಿಂಗ್ ಟ್ಯಾಕಲ್​ ಬಗ್ಗೆ ಎಚ್ಚರಿಕೆವಹಿಸಬೇಕಾಯಿತು. ಪರಿಣಾಮ ಮೊದಲಾರ್ಧ ಮುಕ್ತಾಯದ ವೇಳೆಗೆ ಬೆಂಗಳೂರು ಬುಲ್ಸ್ 24 ಅಂಕ ಪಡೆದರೆ, ಗುಜರಾತ್ ಜೈಂಟ್ಸ್ 17 ಅಂಕಗಳಿಸಲಷ್ಟೇ ಶಕ್ತರಾದರು.

ಇನ್ನು 6 ಅಂಕಗಳ ಮುನ್ನಡೆಯೊಂದಿಗೆ ದ್ವಿತಿಯಾರ್ಧ ಆರಂಭಿಸಿದ ಬೆಂಗಳೂರು ಬುಲ್ಸ್ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಅದರಂತೆ ಗುಜರಾತ್ ತಂಡವು 28 ಅಂಕಗಳಿಸುವಷ್ಟರಲ್ಲಿ ಬೆಂಗಳೂರು ಬುಲ್ಸ್ ತಂಡದ ಪಾಯಿಂಟ್​ 40ರ ಗಡಿ ದಾಟಿತು. ಅಂತಿಮ 1 ನಿಮಿಷಗಳ ಆಟ ಬಾಕಿಯಿರುವಾಗ ಬೆಂಗಳೂರು ಬುಲ್ಸ್ ತಂಡವು 49 ಅಂಕ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿಕೊಂಡಿತು.

ಅದರಂತೆ ಅಂತಿಮವಾಗಿ ಬೆಂಗಳೂರು ಬುಲ್ಸ್ ತಂಡವು 49 ಅಂಕಗಳಿಸಿದರೆ, ಗುಜರಾತ್ ಜೈಂಟ್ಸ್ ತಂಡವು 29 ಅಂಕಗಳಿಸುವ ಮೂಲಕ 20 ಅಂಕಗಳ ಅಂತರದಿಂದ ಸೋಲೋಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್ ತಂಡವು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 11 ಪಾಯಿಂಟ್ ಕಲೆಹಾಕಿದರೆ, ಚಂದ್ರನ್ ರಂಜಿತ್ 7 ರೈಡಿಂಗ್ ಪಾಯಿಂಟ್ ಪಡೆದುಕೊಂಡರು. ಇನ್ನು ಟ್ಯಾಕಲ್ ಮೂಲಕ ಮಹೇಂದ್ರ ಸಿಂಗ್ 5 ಪಾಯಿಂಟ್ ಕಲೆಹಾಕಿ ಗೆಲುವಿನ ರೂವಾರಿ ಎನಿಸಿಕೊಂಡರು. ಮತ್ತೊಂದು ಪಂದ್ಯದಲ್ಲಿ ಪುಣೇರಿ ಪಲ್ಟನ್ (31) ವಿರುದ್ದ ಯುಪಿ ಯೋಧಾ 42 ಅಂಕ ಪಡೆಯುವ ಮೂಲಕ 11 ಅಂಕಗಳ ಅಂತರದಿಂದ ಗೆದ್ದು ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಬುಧವಾರ ನಡೆಯಲಿರುವ ಸೆಮಿಫೈನಲ್​ನಲ್ಲಿ ಪಟ್ನಾ ಪೈರೇಟ್ಸ್ ಹಾಗೂ ಯುಪಿ ಯೋಧಾ ಮುಖಾಮುಖಿಯಾಗಲಿದೆ. ಹಾಗೆಯೇ 2ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ಡೆಲ್ಲಿ ಸೆಣಸಲಿದೆ. ಫೈನಲ್ ಪಂದ್ಯವು ಫೆಬ್ರವರಿ 25 ರಂದು ನಡೆಯಲಿದೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Pro Kabaddi League Playoffs: Bengaluru Bulls Enters Semi Final)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್