PV Sindhu: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಚಿನ್ನ ಗೆದ್ದಿದ್ದ ಸಿಂಧು ವಿಶ್ವ ಚಾಂಪಿಯನ್‌ಶಿಪ್​ನಿಂದ ಔಟ್..!

PV Sindhu: ಸಿಂಧು 2013 ರಿಂದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದು, ಇದುವರೆಗೆ ಅವರು ಒಂದು ಚಿನ್ನ ಸೇರಿದಂತೆ ಒಟ್ಟು 5 ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಎರಡು ಬಾರಿ ಬೆಳ್ಳಿ ಹಾಗೂ ಎರಡು ಬಾರಿ ಕಂಚಿನ ಪದಕವನ್ನೂ ಗೆದ್ದಿದ್ದಾರೆ.

PV Sindhu: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಚಿನ್ನ ಗೆದ್ದಿದ್ದ ಸಿಂಧು ವಿಶ್ವ ಚಾಂಪಿಯನ್‌ಶಿಪ್​ನಿಂದ ಔಟ್..!
Follow us
| Updated By: ಪೃಥ್ವಿಶಂಕರ

Updated on: Aug 13, 2022 | 10:31 PM

ಇತ್ತೀಚಿಗೆ ಮುಗಿದ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ (CWG 2o22), ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು (PV Sindhu) ದೇಶಕ್ಕಾಗಿ ಸ್ಮರಣೀಯ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು. ಜೊತೆಗೆ ಸಿಂಧು ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಮಹಿಳೆಯರ ಸಿಂಗಲ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆಯನ್ನು ಮಾಡಿದ್ದರು. ಆದರೆ ಸಿಂಧು ಈಗ ಈ ಚಿನ್ನದ ಪದಕದ ಗೆಲುವಿನ ಬಾರವನ್ನು ಹೊರಬೇಕಾಗಿದೆ. ಚಿನ್ನ ಗೆಲ್ಲುವ ಯತ್ನದಲ್ಲಿ, ಗಾಯದ ನಡುವೆಯೂ ಸಿಂಧು ಫೈನಲ್ ಆಡಿದ್ದರು. ಆದರೆ ಈಗ ಈ ಗಾಯವು ಗಂಭೀರವಾಗಿದ್ದು, ಈ ಕಾರಣದಿಂದಾಗಿ ಅವರು ಈ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿದ್ದಾರೆ.

ಗಾಯದ ನಡುವೆಯೂ ಚಿನ್ನ ಗೆದ್ದ ಸಿಂಧು

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್ ಜಪಾನ್‌ನ ರಾಜಧಾನಿ ಟೋಕಿಯೊದಲ್ಲಿ ಆಗಸ್ಟ್ 22 ರಿಂದ ಆಗಸ್ಟ್ 28 ರವರೆಗೆ ನಡೆಯಲಿದ್ದು, ಮಾಜಿ ಮಹಿಳಾ ಸಿಂಗಲ್ಸ್ ಚಾಂಪಿಯನ್ ಸಿಂಧು ಈ ಸ್ಪರ್ಧೆಯಲ್ಲಿ ಬಾಗವಹಿಸಲು ಸಾಧ್ಯವಾಗುವುದಿಲ್ಲ. ಇತ್ತೀಚೆಗಷ್ಟೇ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಳೆ ಸಿಂಧು ಗಾಯಗೊಂಡಿದ್ದರು. ಮಹಿಳಾ ಸಿಂಗಲ್ಸ್‌ನ ಸೆಮಿಫೈನಲ್ ಪಂದ್ಯದ ವೇಳೆ ಸಿಂಧು ಈ ಗಾಯಕ್ಕೆ ಒಳಗಾಗಿದ್ದರು. ಇದರ ಹೊರತಾಗಿಯೂ, ಅವರು ಕಠಿಣ ಪಂದ್ಯದಲ್ಲಿ ಗೆಲುವ ಸಾಧಿಸಿದ್ದರು. ಜೊತೆಗೆ ಆಗಸ್ಟ್ 8 ರಂದು ನಡೆದ ಫೈನಲ್‌ನಲ್ಲಿ ಗಾಯದ ನೋವನ್ನು ಸಹಿಸಿಕೊಂಡು ತನಗೆ ಮತ್ತು ದೇಶಕ್ಕೆ ಸ್ಮರಣೀಯ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ
Image
CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ತೆರಳಿದ್ದ ಪಾಕಿಸ್ತಾನದ ಇಬ್ಬರು ಬಾಕ್ಸರ್​ಗಳು ಬರ್ಮಿಂಗ್‌ಹ್ಯಾಮ್‌ನಿಂದ ನಾಪತ್ತೆ..!
Image
CWG 2022: ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಮೊದಲ ಬಾರಿಗೆ ಪದಕ ಗೆದ್ದ ಭಾರತದ ಸ್ಪರ್ಧಿಗಳಿವರು
Image
CWG 2022: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್​​ನಲ್ಲಿ ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ ನಗದು ಬಹುಮಾನ ಘೋಷಣೆ

ಅಕ್ಟೋಬರ್‌ನಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ

ಸಿಂಧು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅಲ್ಲದೆ ವಿಶ್ವ ಚಾಂಪಿಯನ್‌ಶಿಪ್‌ ಆರಂಭಕ್ಕೂ ಮೊದಲು ಸಿಂದು ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸ್ಪೋರ್ಟ್‌ಸ್ಟಾರ್ ವರದಿ ಹೇಳಿದೆ. ಸಿಂಧು ಅವರ ಎಡ ಹಿಮ್ಮಡಿಯಲ್ಲಿ ಮೂಳೆ ಮುರಿತವಾಗಿದೆ ಎಂದು ಭಾರತದ ಸ್ಟಾರ್ ಷಟ್ಲರ್ ತಂದೆ ಪಿವಿ ರಾಮಣ್ಣ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಈ ಕಾರಣದಿಂದಾಗಿ, ಅವರು ಒಂದು ತಿಂಗಳಿಗಿಂತ ಹೆಚ್ಚು ಕಾಲ ಕೋರ್ಟ್​ನಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಸಿಂಧು, ವಿಶ್ರಾಂತಿ ಮತ್ತು ಚೇತರಿಕೆಯತ್ತ ಗಮನ ಹರಿಸಲಿದ್ದು, ಅಕ್ಟೋಬರ್‌ನಲ್ಲಿ ಕೋರ್ಟ್​ಗೆ ಮರಳುವ ಸಾಧ್ಯತೆ ಇದೆ ಎಂದು ಅವರ ತಂದೆ ತಿಳಿಸಿದ್ದಾರೆ.

ಸೈನಾ ನೆಹ್ವಾಲ್ ಮೇಲೆ ಕಣ್ಣು

ಸಿಂಧು ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಭಾರತೀಯ ಆಟಗಾರ್ತಿಯಾಗಿದ್ದಾರೆ. 2019 ರಲ್ಲಿ, ಸಿಂಧು ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಿಂಧು 2013 ರಿಂದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದು, ಇದುವರೆಗೆ ಅವರು ಒಂದು ಚಿನ್ನ ಸೇರಿದಂತೆ ಒಟ್ಟು 5 ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಎರಡು ಬಾರಿ ಬೆಳ್ಳಿ ಹಾಗೂ ಎರಡು ಬಾರಿ ಕಂಚಿನ ಪದಕವನ್ನೂ ಗೆದ್ದಿದ್ದಾರೆ. ಸಿಂಧು ಈ ಬಾರಿ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದರು. ಇದೀಗ ಅವರ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸೈನಾ ಹೊರತಾಗಿ ಯುವ ಆಟಗಾರ್ತಿ ಮಾಳವಿಕಾ ಬನ್ಸೋಡ್ ಕೂಡ ಮಹಿಳೆಯರ ಸಿಂಗಲ್ಸ್‌ನಲ್ಲಿ ಗೆಲುವಿಗಾಗಿ ಸೆಣಸಾಡಲಿದ್ದಾರೆ.

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​