Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್‌ನ ಎರಡನೇ ದಿನದ ಆಟದಲ್ಲಿ ಈಗಾಗಲೇ ಟೀಮ್ ಇಂಡಿಯಾ ಅಬ್ಬರಿಸಿದೆ. ಇನ್ನು ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತಮ್ಮ ತಂಡದ ಜರ್ಸಿಯನ್ನು ಒಣಗಿಸುವುದರಲ್ಲಿ ಬ್ಯೂಸಿಯಾಗಿದ್ದರು. ಈ ಬಗ್ಗೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್
ಆರ್ ಅಶ್ವಿನ್
Follow us
|

Updated on: Sep 21, 2024 | 12:40 PM

ಕ್ರಿಕೆಟ್ ಎಂದರೆ ಯಾರಿಗೆ ತಾನೇ ಇಷ್ಟ ಹೇಳಿ, ಪಂದ್ಯ ಆರಂಭವಾಗುತ್ತಿದೆ ಎಂದರೆ ಸಾಕು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ನೋಡಲು ಕಾತುರತೆಯಿಂದ ಕಾಯುತ್ತಿರುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಮೈದಾನದಲ್ಲಿ ಆಟಗಾರರು ಕಿತ್ತಾಡಿಕೊಳ್ಳುವ ಹಾಗೂ ತಮಾಷೆಯೆನಿಸುವ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಜರ್ಸಿಯನ್ನು ಒಣಗಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಬ್ಬರಿಸಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಆರ್ ಅಶ್ವಿನ್ ಅವರು ಸಂಕಷ್ಟದಿಂದ ಪಾರು ಮಾಡಿದ್ದಾರೆ. ಈಗಾಗಲೇ ಆರ್​ ಅಶ್ವಿನ್102 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ನಡುವೆ ಆರ್ ಅಶ್ವಿನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಮೈದಾನದಲ್ಲಿ ಸಮವಸ್ತ್ರ ಒಣಗಿಸುವ ವಿಡಿಯೋ ಇದಾಗಿದೆ.

Russhi ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಅಶ್ವಿನ್ ಅಣ್ಣ ಏನು ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅನುಭವಿ ಆಲ್‌ರೌಂಡರ್ ಒದ್ದೆ ಬಟ್ಟೆಯನ್ನು ಮೈದಾನದಲ್ಲಿ ಬಿಡಿಸುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಅಭಿಮಾನಿಯೊಬ್ಬರು ಆರ್ ಅಶ್ವಿನ್ ಅವರನ್ನು ಹುರಿದುಂಬಿಸುತ್ತಿದ್ದಾರೆ.

ಇದನ್ನೂ ಓದಿ: ಬಡವರ ಅಕ್ಕಿ ಬಡವರಿಗೆ ಹೋಗ್ಬೇಕು ಅಷ್ಟೆ, ಅನ್ನ ಭಾಗ್ಯ ಅಕ್ಕಿ ಕಳ್ಳ ಮಾರಾಟ ಮಾಡುವಂತಿಲ್ಲ ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್​

ಈ ವಿಡಿಯೋವೊಂದು ಏಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಇದರಲ್ಲಿ ಏನೂ ತಪ್ಪಿಲ್ಲ, ಬಟ್ಟೆಗಳನ್ನು ನೆಲದ ಮೇಲೆ ಒಣಗಿಸುತ್ತಿರುವುದು ಎಂದು ಹೇಳಿದ್ದಾರೆ. ಇನ್ನೊಬ್ಬರು ‘ಆರ್ ಅಶ್ವಿನ್ ಅಣ್ಣ ಏನು ಮಾಡುತ್ತಿದ್ದಾರೆ ಎಂದು ತಮಾಷೆಯಾಗಿಯೇ ಕಾಮೆಂಟ್ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು