AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ. 75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ […]

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ
KUSHAL V
|

Updated on: Nov 15, 2020 | 8:23 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ.

75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇರಬೇಕು ಎಂದು ಹೇಳಿದ್ದರು. ಈ ಹಿಂದೆ, ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್​ ರೌಂಡರ್ ಕಾರ್ಲಸ್ ಬ್ರಾಥ್ವೈಟ್ ಟಿ20 ಕ್ರಿಕೆಟನ್ನು ಒಲಿಂಪಿಕ್​ನಲ್ಲಿ ಸೇರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್ ಆಟವು 1900ರ ಪ್ಯಾರಿಸ್ ಒಲಿಂಪಿಕ್ಸ್​ನ ಭಾಗವಾಗಿತ್ತು. 1988ರ ಕಾಮನ್​ವೆಲ್ತ್ ಕ್ರೀಡಾ ಕೂಟದಲ್ಲಿ, 2010 ಮತ್ತು 2014ರ ಏಷಿಯನ್ ಗೇಮ್ಸ್​ನಲ್ಲಿ ಸಹ ಕ್ರಿಕೆಟ್ ಸ್ಥಾನ ಪಡೆದುಕೊಂಡಿತ್ತು. ಮುಂದೆ, 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಮತ್ತು 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್