AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ. 75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ […]

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ
KUSHAL V
|

Updated on: Nov 15, 2020 | 8:23 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ.

75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇರಬೇಕು ಎಂದು ಹೇಳಿದ್ದರು. ಈ ಹಿಂದೆ, ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್​ ರೌಂಡರ್ ಕಾರ್ಲಸ್ ಬ್ರಾಥ್ವೈಟ್ ಟಿ20 ಕ್ರಿಕೆಟನ್ನು ಒಲಿಂಪಿಕ್​ನಲ್ಲಿ ಸೇರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್ ಆಟವು 1900ರ ಪ್ಯಾರಿಸ್ ಒಲಿಂಪಿಕ್ಸ್​ನ ಭಾಗವಾಗಿತ್ತು. 1988ರ ಕಾಮನ್​ವೆಲ್ತ್ ಕ್ರೀಡಾ ಕೂಟದಲ್ಲಿ, 2010 ಮತ್ತು 2014ರ ಏಷಿಯನ್ ಗೇಮ್ಸ್​ನಲ್ಲಿ ಸಹ ಕ್ರಿಕೆಟ್ ಸ್ಥಾನ ಪಡೆದುಕೊಂಡಿತ್ತು. ಮುಂದೆ, 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಮತ್ತು 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ