AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ. 75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ […]

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ
KUSHAL V
|

Updated on: Nov 15, 2020 | 8:23 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ.

75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇರಬೇಕು ಎಂದು ಹೇಳಿದ್ದರು. ಈ ಹಿಂದೆ, ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್​ ರೌಂಡರ್ ಕಾರ್ಲಸ್ ಬ್ರಾಥ್ವೈಟ್ ಟಿ20 ಕ್ರಿಕೆಟನ್ನು ಒಲಿಂಪಿಕ್​ನಲ್ಲಿ ಸೇರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್ ಆಟವು 1900ರ ಪ್ಯಾರಿಸ್ ಒಲಿಂಪಿಕ್ಸ್​ನ ಭಾಗವಾಗಿತ್ತು. 1988ರ ಕಾಮನ್​ವೆಲ್ತ್ ಕ್ರೀಡಾ ಕೂಟದಲ್ಲಿ, 2010 ಮತ್ತು 2014ರ ಏಷಿಯನ್ ಗೇಮ್ಸ್​ನಲ್ಲಿ ಸಹ ಕ್ರಿಕೆಟ್ ಸ್ಥಾನ ಪಡೆದುಕೊಂಡಿತ್ತು. ಮುಂದೆ, 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಮತ್ತು 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ