AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ. 75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ […]

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ
KUSHAL V
|

Updated on: Nov 15, 2020 | 8:23 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ.

75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇರಬೇಕು ಎಂದು ಹೇಳಿದ್ದರು. ಈ ಹಿಂದೆ, ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್​ ರೌಂಡರ್ ಕಾರ್ಲಸ್ ಬ್ರಾಥ್ವೈಟ್ ಟಿ20 ಕ್ರಿಕೆಟನ್ನು ಒಲಿಂಪಿಕ್​ನಲ್ಲಿ ಸೇರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್ ಆಟವು 1900ರ ಪ್ಯಾರಿಸ್ ಒಲಿಂಪಿಕ್ಸ್​ನ ಭಾಗವಾಗಿತ್ತು. 1988ರ ಕಾಮನ್​ವೆಲ್ತ್ ಕ್ರೀಡಾ ಕೂಟದಲ್ಲಿ, 2010 ಮತ್ತು 2014ರ ಏಷಿಯನ್ ಗೇಮ್ಸ್​ನಲ್ಲಿ ಸಹ ಕ್ರಿಕೆಟ್ ಸ್ಥಾನ ಪಡೆದುಕೊಂಡಿತ್ತು. ಮುಂದೆ, 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಮತ್ತು 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow Us
KUSHAL V
KUSHAL V
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ