AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ. 75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ […]

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ T20 ಕ್ರಿಕೆಟ್​ ಸೇರ್ಪಡೆ ಆಗಬೇಕು -ರಾಹುಲ್​ ಆಶಯ
KUSHAL V
|

Updated on: Nov 15, 2020 | 8:23 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಡಿಯನ್ ವಾಲ್ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಒಲಿಂಪಿಕ್​ ಕ್ರೀಡಾಕೂಟಕ್ಕೆ ಟಿ20 ಕ್ರಿಕೆಟನ್ನು ಸೇರ್ಪಡೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟಿ20 ಮಾದರಿಯ ಕ್ರಿಕೆಟ್ ಆಟವು ಒಲಿಂಪಿಕ್​ನ ಭಾಗವಾಗಬೇಕು ಎಂದು ಹೇಳಿದ್ದಾರೆ.

75ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಒಲಿಂಪಿಕ್​ನಲ್ಲಿ ಟಿ20 ಮಾದರಿ ಸೇರ್ಪಡೆಗೊಂಡರೆ ಕ್ರಿಕೆಟ್ ಆಟಕ್ಕೆ ಮತ್ತಷ್ಟು ಜನಪ್ರಿಯತೆ ಸಿಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ. 2018ರಲ್ಲಿ ಐಸಿಸಿ ಪ್ರಕಟಿಸಿದ್ದ ಸಮೀಕ್ಷೆಯ ಪ್ರಕಾರ ಶೇಕಡಾ 87ರಷ್ಟು ಅಭಿಮಾನಿಗಳು ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇರಬೇಕು ಎಂದು ಹೇಳಿದ್ದರು. ಈ ಹಿಂದೆ, ಇಂಗ್ಲೆಂಡ್ ಆಟಗಾರ ಇಯಾನ್ ಮಾರ್ಗನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್​ ರೌಂಡರ್ ಕಾರ್ಲಸ್ ಬ್ರಾಥ್ವೈಟ್ ಟಿ20 ಕ್ರಿಕೆಟನ್ನು ಒಲಿಂಪಿಕ್​ನಲ್ಲಿ ಸೇರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕ್ರಿಕೆಟ್ ಆಟವು 1900ರ ಪ್ಯಾರಿಸ್ ಒಲಿಂಪಿಕ್ಸ್​ನ ಭಾಗವಾಗಿತ್ತು. 1988ರ ಕಾಮನ್​ವೆಲ್ತ್ ಕ್ರೀಡಾ ಕೂಟದಲ್ಲಿ, 2010 ಮತ್ತು 2014ರ ಏಷಿಯನ್ ಗೇಮ್ಸ್​ನಲ್ಲಿ ಸಹ ಕ್ರಿಕೆಟ್ ಸ್ಥಾನ ಪಡೆದುಕೊಂಡಿತ್ತು. ಮುಂದೆ, 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಮತ್ತು 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ