AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ. […]

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!
KUSHAL V
|

Updated on: Jul 19, 2020 | 11:19 AM

Share

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ.

ನಾನು ಆಟ ಮುಗಿಸಿದ ನಂತರ ನನ್ನ ಮುಂದೆ ಕೆಲವು ಆಯ್ಕೆಗಳಿದ್ದವು. ಆದ್ರೆ ಏನನ್ನ ಆಯ್ಕೆ ಮಾಡಿಕೊಳ್ಳಬೇಕು ಅನ್ನೋದ್ರ ಬಗ್ಗೆ ಖಚಿತ ನಿಲುವಿರಲಿಲ್ಲ. ಆದ್ರೆ ನನ್ನ ವೃತ್ತಿಜೀವನದ ಅಂತ್ಯಕ್ಕೆ ಬರುವಾಗ ಕಪಿಲ್ ದೇವ್ ನನಗೆ ಈ ಸಲಹೆಯನ್ನು ನೀಡಿದ್ದರು ಎಂದು ದ್ರಾವಿಡ್ ಹಂಚಿಕೊಂಡಿದ್ದಾರೆ.

ಕಪಿಲ್​ ದೇವ್​ ನೀಡಿದ ಸಲಹೆ ಏನೆಂದರೆ, ರಾಹುಲ್ ಯಾವುದೇ ಕೆಲಸಕ್ಕೆ ಮೊದಲು ನೇರವಾಗಿ ಧುಮುಕಬೇಡಿ. ಒಂದಷ್ಟು ವರ್ಷ ಬೇರೆ ಬೇರೆ ವಿಭಾಗಗಳಲ್ಲಿ ನಿಮ್ಮನ್ನ ತೊಡಗಿಸಿಕೊಳ್ಳಿ. ಆ ನಂತರ ನಿಮಗೇನು ಇಷ್ಟವಾಗುತ್ತೋ ಅದನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕಪಿಲ್ ದೇವ್ ಸಲಹೆ ನೀಡಿದ್ರು. ನಿಜಕ್ಕೂ ಕಪಿಲ್ ಪಾಜಿ ನೀಡಿದ ಸಲಹೆ ಒಳ್ಳೆಯದಾಗಿತ್ತು ಎಂದಿದ್ದಾರೆ Jammy.

ನನಗೆ ಹೆಚ್ಚು ತೃಪ್ತಿಯನ್ನು ನೀಡಿದ ವಿಷಯವೆಂದರೆ ನಿಜವಾಗಿಯೂ ನಾನು ಮತ್ತೆ ಆಟದಲ್ಲಿ ತೊಡಗಿಸಿಕೊಳ್ಳುವುದು. ಆಟಗಾರರೊಂದಿಗೆ ಸಂಪರ್ಕದಲ್ಲಿರೋದು. ನಾನು ಕೋಚಿಂಗ್ ವಿಭಾಗವನ್ನ ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ, ಭಾರತ A ಮತ್ತು ಅಂಡರ್ 19 ತಂಡಕ್ಕೆ ಕೋಚ್ ಆಗೋ ಅವಕಾಶ ಬಂದಾಗ ಖುಷಿಯಿಂದ ಅದನ್ನ ಒಪ್ಪಿಕೊಂಡೆ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!