AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ. […]

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!
KUSHAL V
|

Updated on: Jul 19, 2020 | 11:19 AM

Share

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ.

ನಾನು ಆಟ ಮುಗಿಸಿದ ನಂತರ ನನ್ನ ಮುಂದೆ ಕೆಲವು ಆಯ್ಕೆಗಳಿದ್ದವು. ಆದ್ರೆ ಏನನ್ನ ಆಯ್ಕೆ ಮಾಡಿಕೊಳ್ಳಬೇಕು ಅನ್ನೋದ್ರ ಬಗ್ಗೆ ಖಚಿತ ನಿಲುವಿರಲಿಲ್ಲ. ಆದ್ರೆ ನನ್ನ ವೃತ್ತಿಜೀವನದ ಅಂತ್ಯಕ್ಕೆ ಬರುವಾಗ ಕಪಿಲ್ ದೇವ್ ನನಗೆ ಈ ಸಲಹೆಯನ್ನು ನೀಡಿದ್ದರು ಎಂದು ದ್ರಾವಿಡ್ ಹಂಚಿಕೊಂಡಿದ್ದಾರೆ.

ಕಪಿಲ್​ ದೇವ್​ ನೀಡಿದ ಸಲಹೆ ಏನೆಂದರೆ, ರಾಹುಲ್ ಯಾವುದೇ ಕೆಲಸಕ್ಕೆ ಮೊದಲು ನೇರವಾಗಿ ಧುಮುಕಬೇಡಿ. ಒಂದಷ್ಟು ವರ್ಷ ಬೇರೆ ಬೇರೆ ವಿಭಾಗಗಳಲ್ಲಿ ನಿಮ್ಮನ್ನ ತೊಡಗಿಸಿಕೊಳ್ಳಿ. ಆ ನಂತರ ನಿಮಗೇನು ಇಷ್ಟವಾಗುತ್ತೋ ಅದನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕಪಿಲ್ ದೇವ್ ಸಲಹೆ ನೀಡಿದ್ರು. ನಿಜಕ್ಕೂ ಕಪಿಲ್ ಪಾಜಿ ನೀಡಿದ ಸಲಹೆ ಒಳ್ಳೆಯದಾಗಿತ್ತು ಎಂದಿದ್ದಾರೆ Jammy.

ನನಗೆ ಹೆಚ್ಚು ತೃಪ್ತಿಯನ್ನು ನೀಡಿದ ವಿಷಯವೆಂದರೆ ನಿಜವಾಗಿಯೂ ನಾನು ಮತ್ತೆ ಆಟದಲ್ಲಿ ತೊಡಗಿಸಿಕೊಳ್ಳುವುದು. ಆಟಗಾರರೊಂದಿಗೆ ಸಂಪರ್ಕದಲ್ಲಿರೋದು. ನಾನು ಕೋಚಿಂಗ್ ವಿಭಾಗವನ್ನ ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ, ಭಾರತ A ಮತ್ತು ಅಂಡರ್ 19 ತಂಡಕ್ಕೆ ಕೋಚ್ ಆಗೋ ಅವಕಾಶ ಬಂದಾಗ ಖುಷಿಯಿಂದ ಅದನ್ನ ಒಪ್ಪಿಕೊಂಡೆ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್