AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Semifinal: ಪಡಿಕ್ಕಲ್ ದ್ವಿಶತಕ, ಸ್ಮರಣ್ ಶತಕ; 700 ರನ್​ಗಳ ಗಡಿಯಂಚಿನಲ್ಲಿ ಕರ್ನಾಟಕ

Ranji Trophy Semifinal 2026: ಲಕ್ನೋದಲ್ಲಿ ನಡೆದ ರಣಜಿ ಸೆಮಿಫೈನಲ್‌ನಲ್ಲಿ ಕರ್ನಾಟಕ ತಂಡ ಉತ್ತರಾಖಂಡ್ ವಿರುದ್ಧ ಎರಡನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್‌ಗೆ 689 ರನ್ ಗಳಿಸಿ ಬೃಹತ್ ಮುನ್ನಡೆ ಸಾಧಿಸಿದೆ. ನಾಯಕ ದೇವದತ್ ಪಡಿಕ್ಕಲ್ ತಮ್ಮ ಚೊಚ್ಚಲ ಪ್ರಥಮ ದರ್ಜೆ ದ್ವಿಶತಕ (232) ಸಿಡಿಸಿ ಮಿಂಚಿದರೆ, ಸ್ಮರಣ್ ರವಿಚಂದ್ರನ್ ಅಜೇಯ ಶತಕ ಬಾರಿಸಿದರು. ಕೆಎಲ್ ರಾಹುಲ್ (141) ಮತ್ತು ಕರುಣ್ ನಾಯರ್ (60) ಸಹ ಅಮೂಲ್ಯ ಕೊಡುಗೆ ನೀಡಿದರು.

Ranji Trophy Semifinal: ಪಡಿಕ್ಕಲ್ ದ್ವಿಶತಕ, ಸ್ಮರಣ್ ಶತಕ; 700 ರನ್​ಗಳ ಗಡಿಯಂಚಿನಲ್ಲಿ ಕರ್ನಾಟಕ
Padikkal, Smaran
ಪೃಥ್ವಿಶಂಕರ
|

Updated on: Feb 16, 2026 | 6:10 PM

Share

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ (Ranji Trophy Semi-final) ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ( Karnataka vs Uttarakhand) ತಂಡ ಬೃಹತ್ ಮೊತ್ತ ಕಲೆಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 689 ರನ್ ಕಲೆಹಾಕಿದೆ. ತಂಡದ ಪರ ಎರಡನೇ ದಿನದಾಟದಲ್ಲಿ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ದ್ವಿಶತಕ ಸಿಡಿಸಿದರೆ, ಸ್ಮರಣ್ ರವಿಚಂದ್ರನ್ (Smaran Ravichandran) ಅಜೇಯ ಶತಕ ಸಿಡಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಸ್ಮರಣ್​ಗೆ ಸಾಥ್ ನೀಡಿರುವ ವಿದ್ಯಾದರ್ ಪಾಟೀಲ್ ಕೂಡ ಅಜೇಯ 35 ರನ್ ಬಾರಿಸಿದ್ದಾರೆ.

ರಾಹುಲ್, ಪಡಿಕ್ಕಲ್ ಶತಕ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ಮೊದಲ ದಿನದಾಟದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 355 ರನ್ ಕಲೆಹಾಕಿತ್ತು. ಮೊದಲ ದಿನದಾಟದಲ್ಲಿ ಆರಂಭಿಕ ಕೆಎಲ್ ರಾಹುಲ್ 141 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ದೇವದತ್ ಪಡಿಕ್ಕಲ್ 148 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಎರಡನೇ ದಿನದಾಟದಲ್ಲಿ ಅನುಭವಿ ಕರುಣ್ ನಾಯರ್ 60 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ದೇವದತ್ ಪಡಿಕ್ಕಲ್ ತಮ್ಮ ವೃತ್ತಿಜೀವನದ ಮೊದಲ ದ್ವಿಶತಕ ಬಾರಿಸಿದರು.

ದ್ವಿಶತಕ ಬಾರಿಸಿದ ಪಡಿಕ್ಕಲ್

ತಮ್ಮ ಇನ್ನಿಂಗ್ಸ್​ನಲ್ಲಿ 330 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 29 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 232 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದು ಪಡಿಕ್ಕಲ್ ಅವರ ಪ್ರಥಮ ದರ್ಜೆ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಮಾತ್ರವಲ್ಲದೆ, ಅವರ ಮೊದಲ ದ್ವಿಶತಕವೂ ಆಗಿದೆ. ಇದಕ್ಕೂ ಮೊದಲು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ದೇವದತ್ ಪಡಿಕ್ಕಲ್ ಅವರ ಅತ್ಯಧಿಕ ಸ್ಕೋರ್ 193 ರನ್‌ಗಳಾಗಿತ್ತು.

Ranji Trophy Semifinal: ಸ್ಮರಣ್ ಶತಕ; ಬೃಹತ್​ ಮೊತ್ತದತ್ತ ಕರ್ನಾಟಕ

ಸ್ಮರಣ್ ಶತಕ

ಆ ಬಳಿಕ ತಂಡದ ಇನ್ನಿಂಗ್ಸ್ ಮುಂದುವರೆಸಿದ ಸ್ಮರಣ್ ರವಿಚಂದ್ರನ್ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ಬದುಕಿನ 5ನೇ ಶತಕ ಸಿಡಿಸಿ ತಂಡವನ್ನು 600 ರನ್​ಗಳ ಗಡಿ ದಾಟಿಸಿದರು. ಇದು ಈ ಆವೃತ್ತಿಯಲ್ಲಿ ಸ್ಮರಣ್ ಅವರ ಮೂರನೇ ಶತಕವಾಗಿದ್ದು, ಎರಡು ದ್ವಿಶತಕಗಳನ್ನು ಬಾರಿಸಿದ್ದಾರೆ. ಸ್ಮರಣ್​ಗೆ ಸಾಥ್ ನೀಡಿದ ಕೆ. ಕೃಷ್ಣ ಕೂಡ ತಂಡಕ್ಕೆ 60 ರನ್​ಗಳ ಕಾಣಿಕೆ ನೀಡಿದರು. ಕೃಷ್ಣ ಔಟಾದ ಬಳಿಕ ಬಂದ ವಿದ್ಯಾದರ್ ಪಾಟೀಲ್ ಕೂಡ ಸ್ಮರಣ್​ ಜೊತೆ ಉತ್ತಮ ಜೊತೆಯಾಟ ಕಟ್ಟಿದರು. ಈ ಜೋಡಿ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದು ತಂಡವನ್ನು 689 ರನ್​ಗಳಿಗೆ ಕೊಂಡೊಯ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ