AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್

R Ashwin: ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು.

ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್
ಆರ್. ಅಶ್ವಿನ್
ಪೃಥ್ವಿಶಂಕರ
|

Updated on: May 26, 2021 | 3:35 PM

Share

ಟೀಂ ಇಂಡಿಯಾ ಸ್ಪಿನ್ ಬೌಲರ್ ಆರ್ ಅಶ್ವಿನ್ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯಾರಾಗಿರುತ್ತಾರೆ. ಅಲ್ಲದೆ ತಪ್ಪುಗಳ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದಾರೆ. ಈ ಬಾರಿ ಅವರು ತಮ್ಮ ಬಾಲ್ಯವನ್ನು ಕಳೆದ ಅದೇ ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇಬ್ಬರು ಬಾಲಕಿಯರ ಲೈಂಗಿಕ ಶೋಷಣೆ ಆರೋಪದ ಮೇಲೆ ಚೆನ್ನೈನ ಪಿಎಸ್‌ಬಿಬಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ. ಇದರಿಂದ ಅಶ್ವಿನ್ ತುಂಬಾ ಅಸಮಾಧಾನಗೊಂಡಿದ್ದು, ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ತಾವು ಪ್ರಾಥಮಿಕ ವಿಧ್ಯಾಭ್ಯಾಸ ಮಾಡಿದ ಶಾಲೆ ಅಶ್ವಿನ್‌ಗೆ ಬಹಳ ವಿಶೇಷವಾಗಿದೆ. ಅಶ್ವಿನ್ ಕ್ರಿಕೆಟ್ ಪ್ರಯಾಣ ಪ್ರಾರಂಭವಾಗಿದ್ದು ಇದೇ ಶಾಲೆಯಿಂದ. ಇದರೊಂದಿಗೆ ಅವರು ಅದೇ ಶಾಲೆಯಲ್ಲಿ ಓದುತ್ತಿದ್ದ ಪತ್ನಿ ಪ್ರೀತಿಯನ್ನು ಭೇಟಿಯಾಗಿದ್ದು ಇಲ್ಲೆ. ಇಂತಹ ಪರಿಸ್ಥಿತಿಯಲ್ಲಿ, ಈ ಘಟನೆ ಬಗ್ಗೆ ತಿಳಿದ ಅಶ್ವಿನ್, ಟ್ವಿಟ್ಟರ್ನಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ವರದಿಗಳ ಪ್ರಕಾರ, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಶಿಕ್ಷಕನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ದಿ ಸ್ಟಾರ್ ಆಫ್ ಸ್ಪಿನ್ನರ್, ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಶಾಲೆಗಳು, ಅದರಲ್ಲೂ ವಿಶೇಷವಾಗಿ ಪಿಎಸ್‌ಬಿಬಿಯಿಂದ ಬರುವ ಕಥೆಗಳನ್ನು ಕೇಳಿ ನಾನು ಹೃದಯ ವಿದ್ರಾವಕನಾಗಿದ್ದೆ, ಅಲ್ಲಿ ಅಧ್ಯಯನ ಮಾಡುವಾಗ, ಇಷ್ಟು ವರ್ಷಗಳಲ್ಲಿ ನಾನು ಇಂತಹ ಸುದ್ದಿಗಳನ್ನು ಕೇಳಿಲ್ಲ, ಆದರೆ ಈ ಸುದ್ದಿಯಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಎಂದು ನನಗೆ ತಿಳಿದಿದೆ, ಆದರೆ ಈ ಸಮಯದಲ್ಲಿ ಜನರು ಮುಂದೆ ಬಂದು ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ.

ಪಿಎಸ್‌ಬಿಬಿಯ ಹಳೆಯ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿಯೂ ಕಳೆದ ಕೆಲವು ರಾತ್ರಿಗಳಿಂದ ನಾನು ತೊಂದರೆಗೀಡಾಗಿದ್ದೇನೆ ಎಂದು ಅಶ್ವಿನ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು ಮತ್ತು ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕಾಗಿದೆ ಎಂದು ಅಶ್ವಿನ್ ತಮ್ಮ ಆತಂಕವನ್ನು ಹೊರಹಾಕಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!