AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್

R Ashwin: ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು.

ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್
ಆರ್. ಅಶ್ವಿನ್
ಪೃಥ್ವಿಶಂಕರ
|

Updated on: May 26, 2021 | 3:35 PM

Share

ಟೀಂ ಇಂಡಿಯಾ ಸ್ಪಿನ್ ಬೌಲರ್ ಆರ್ ಅಶ್ವಿನ್ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯಾರಾಗಿರುತ್ತಾರೆ. ಅಲ್ಲದೆ ತಪ್ಪುಗಳ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದಾರೆ. ಈ ಬಾರಿ ಅವರು ತಮ್ಮ ಬಾಲ್ಯವನ್ನು ಕಳೆದ ಅದೇ ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇಬ್ಬರು ಬಾಲಕಿಯರ ಲೈಂಗಿಕ ಶೋಷಣೆ ಆರೋಪದ ಮೇಲೆ ಚೆನ್ನೈನ ಪಿಎಸ್‌ಬಿಬಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ. ಇದರಿಂದ ಅಶ್ವಿನ್ ತುಂಬಾ ಅಸಮಾಧಾನಗೊಂಡಿದ್ದು, ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ತಾವು ಪ್ರಾಥಮಿಕ ವಿಧ್ಯಾಭ್ಯಾಸ ಮಾಡಿದ ಶಾಲೆ ಅಶ್ವಿನ್‌ಗೆ ಬಹಳ ವಿಶೇಷವಾಗಿದೆ. ಅಶ್ವಿನ್ ಕ್ರಿಕೆಟ್ ಪ್ರಯಾಣ ಪ್ರಾರಂಭವಾಗಿದ್ದು ಇದೇ ಶಾಲೆಯಿಂದ. ಇದರೊಂದಿಗೆ ಅವರು ಅದೇ ಶಾಲೆಯಲ್ಲಿ ಓದುತ್ತಿದ್ದ ಪತ್ನಿ ಪ್ರೀತಿಯನ್ನು ಭೇಟಿಯಾಗಿದ್ದು ಇಲ್ಲೆ. ಇಂತಹ ಪರಿಸ್ಥಿತಿಯಲ್ಲಿ, ಈ ಘಟನೆ ಬಗ್ಗೆ ತಿಳಿದ ಅಶ್ವಿನ್, ಟ್ವಿಟ್ಟರ್ನಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ವರದಿಗಳ ಪ್ರಕಾರ, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಶಿಕ್ಷಕನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ದಿ ಸ್ಟಾರ್ ಆಫ್ ಸ್ಪಿನ್ನರ್, ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಶಾಲೆಗಳು, ಅದರಲ್ಲೂ ವಿಶೇಷವಾಗಿ ಪಿಎಸ್‌ಬಿಬಿಯಿಂದ ಬರುವ ಕಥೆಗಳನ್ನು ಕೇಳಿ ನಾನು ಹೃದಯ ವಿದ್ರಾವಕನಾಗಿದ್ದೆ, ಅಲ್ಲಿ ಅಧ್ಯಯನ ಮಾಡುವಾಗ, ಇಷ್ಟು ವರ್ಷಗಳಲ್ಲಿ ನಾನು ಇಂತಹ ಸುದ್ದಿಗಳನ್ನು ಕೇಳಿಲ್ಲ, ಆದರೆ ಈ ಸುದ್ದಿಯಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಎಂದು ನನಗೆ ತಿಳಿದಿದೆ, ಆದರೆ ಈ ಸಮಯದಲ್ಲಿ ಜನರು ಮುಂದೆ ಬಂದು ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ.

ಪಿಎಸ್‌ಬಿಬಿಯ ಹಳೆಯ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿಯೂ ಕಳೆದ ಕೆಲವು ರಾತ್ರಿಗಳಿಂದ ನಾನು ತೊಂದರೆಗೀಡಾಗಿದ್ದೇನೆ ಎಂದು ಅಶ್ವಿನ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು ಮತ್ತು ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕಾಗಿದೆ ಎಂದು ಅಶ್ವಿನ್ ತಮ್ಮ ಆತಂಕವನ್ನು ಹೊರಹಾಕಿದ್ದಾರೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?