AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು?

WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​​ಗಳಲ್ಲಿ 154 ರನ್​ ಕಲೆಹಾಕಿದರೆ, ಆರ್​ಸಿಬಿ 20 ಓವರ್​​ಗಳಲ್ಲಿ 157 ರನ್ ಬಾರಿಸಿ 3 ವಿಕೆಟ್​​​ಗಳ ರೋಚಕ ಜಯ ಸಾಧಿಸಿದೆ.

RCB ಅಂದ್ರೆನೇ ಥ್ರಿಲ್ಲರ್... ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು?
Smriti Mandhana
ಝಾಹಿರ್ ಯೂಸುಫ್
|

Updated on: Jan 10, 2026 | 9:31 AM

Share

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ನಾಟ್ ಸ್ಕೀವರ್ ಬ್ರಂಟ್ ಎಸೆದ ಅಂತಿಮ ಓವರ್​ನಲ್ಲಿ 6,4,6,4 ಬಾರಿಸುವ ಮೂಲಕ ನಡಿನ್ ಡಿ ಕ್ಲರ್ಕ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ, ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯವೇ ರೋಮಾಂಚಕರಿಯಾಗಿತ್ತು. ಈ ರೋಚಕ ಪಂದ್ಯದಲ್ಲಿ ಗೆದ್ದಿರುವುದು ಖುಷಿ ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂದ್ರೆನೇ ಥ್ರಿಲ್ಲರ್. ಆರ್​ಸಿಬಿ ತಂಡ ರೋಚಕ ಪಂದ್ಯಗಳಿಗೆ ಹೆಸರುವಾಸಿ. ಇದೀಗ ರೋಚಕವಾಗಿ ಪಂದ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಕ್ಕೆ ತುಂಬಾ ಸಂತೋಷವಾಯಿತು.

ಈ ಪಂದ್ಯದ ಗೆಲುವಿನ ಶ್ರೇಯಸ್ಸು ನಡಿನ್ ಡಿ ಕ್ಲರ್ಕ್​ಗೆ ಸಲ್ಲಬೇಕು. ಏಕೆಂದರೆ ಅವರು ಅದ್ಭುತವಾಗಿ ಆಡಿದರು. ಹಾಗೆಯೇ ಉಳಿದ ಆಟಗಾರ್ತಿಯರೂ ಕೂಡ ಈ ಪಂದ್ಯದಲ್ಲಿ ಸಾಕಷ್ಟು ಸಕಾರಾತ್ಮಕವಾಗಿದ್ದರು. ಈ ಪಾಸಿಟಿವ್ ಗೆಲುವು – ಸೋಲುಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಈ ಸಕರಾತ್ಮಕತೆಯ ನಡುವೆ ನಡಿನ್ ಡಿ ಕ್ಲರ್ಕ್ ಪ್ರದರ್ಶನ ಅದ್ಭುತ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ನಮಗಾಗಿ ಎಲ್ಲಾ ಜವಾಬ್ದಾರಿ ನಿಭಾಯಿಸಿದರು. ಇದಕ್ಕೂ ಮುನ್ನ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಅವರು ಟೀಮ್ ಇಂಡಿಯಾ ವಿರುದ್ಧ ಆಡಿದ ಇನಿಂಗ್ಸ್ ನಾವು ನೋಡಿದ್ದೇವೆ.  ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೂಡ ಅಂತಹದ್ದೇ ಇನಿಂಗ್ಸ್ ಆಡಿದ್ದಾರೆ.

ಇದನ್ನೂ ಓದಿ: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​

ಒಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಪಂದ್ಯದಲ್ಲೇ ಜಯ ಸಾಧಿಸಿರುವುದು ಖುಷಿ ನೀಡಿದೆ. ಈ ಪಾಸಿಟಿವ್ ವೈಬ್ ಮುಂದಿನ ಪಂದ್ಯಗಳಲ್ಲೂ ಮುಂದುವರೆಯುವ ನಿರೀಕ್ಷೆಯಿದೆ ಎಂದು ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹೇಳಿದ್ದಾರೆ.

Follow Us
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ