AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​

ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​
ಆರ್​ಸಿಬಿಗೆ ಹಳದಿ ಎಮೋಜಿ ನೀಡಿರುವುದು
ರಾಜೇಶ್ ದುಗ್ಗುಮನೆ
|

Updated on:Apr 03, 2021 | 11:17 PM

Share

ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂ ಹಾಗೂ ಚೆನ್ನೈ ಸೂಪರ್​ ಕಿಂಗ್ಸ್​ ಮ್ಯಾಚ್​ ಎಂದರೆ ತುಂಬಾನೇ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ನಾನಾ ಕಾರಣಗಳಿವೆ. ಸಿಎಸ್​ಕೆ ಹಾಗೂ ಆರ್​​​​​​​​​​​​​​ಸಿಬಿ ಅಭಿಮಾನಿಗಳ ನಡುವೆ ಹೊಂದಾಣಿಕೆ ಆದ ದಾಖಲೆಯೇ ಇಲ್ಲ. ಹೀಗಿರುವಾಗಲೇ ಒಂದು ಎಡವಟ್ಟು ನಡೆದು ಹೋಗಿದೆ! ಆರ್​ಸಿಬಿಯವರಿಗೆ ಹಳದಿ ಬಣ್ಣದ ಜರ್ಸಿ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಟ್ರೋಲ್​ ಆಗಿದೆ. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ. ಇದಕ್ಕಾಗಿಯೇ ಎರಡೂ ತಂಡಗಳ ನಡುವಿನ ಮ್ಯಾಚ್​ ಹೈ ವೋಲ್ಟೇಜ್​ ಎನಿಸಿಕೊಳ್ಳುತ್ತದೆ. ಆದರೆ, ಈಗ ಟ್ವಿಟರ್ ಮಾಡಿದ ತಪ್ಪೊಂದು ಭಾರೀ ಚರ್ಚೆಗೆ ಕಾರಣವಾಗಿದೆ.

ಏಪ್ರಿಲ್​ 9ರಿಂದ ಐಪಿಎಲ್​ ಮ್ಯಾಚ್​ ಆರಂಭವಾಗಲಿದೆ. ಪ್ರತಿ ಬಾರಿ ಐಪಿಎಲ್​ ನಡೆಯುವುದಕ್ಕೂ ಮೊದಲು ಟ್ವಿಟರ್​ ಪ್ರತಿ ತಂಡದ ಹ್ಯಾಶ್​ಟ್ಯಾಗ್ ಎದುರು ಆಯಾ ತಂಡದ ಟೀಶರ್ಟ್​ ಎಮೋಜಿ ನೀಡುತ್ತದೆ. ಈ ಬಾರಿ ಆರ್​ಸಿಬಿಗೆ ಕೆಂಪು ಬಣ್ಣದ ಟೀ ಶರ್ಟ್​ ನೀಡುವ ಬದಲು ಹಳದಿ ಬಣ್ಣದ ಟಿ-ಶರ್ಟ್​ ಎಮೋಜಿ ನೀಡಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಈ ಬಗ್ಗೆ ಚೆನ್ನೈ ಸೂಪರ್​ ಕಿಂಗ್ಸ್ ಕೂಡ ಟ್ವೀಟ್​ ಮಾಡಿದೆ. ರಜನಿಕಾಂತ್​ ಹಳೆಯ ಸಿನಿಮಾವೊಂದರ ಫೋಟೋ ಪೋಸ್ಟ್​ ಮಾಡಿದ್ದು, ಅದರಲ್ಲಿ ರಜನಿಕಾಂತ್ ಕೆಂಪು ಬಣ್ಣದ ಸೀರೆ ಮೇಲೆ ಹಳದಿ ಬಣ್ಣ ಚಲ್ಲುತ್ತಿದ್ದಾರೆ.

ಆರ್​ಸಿಬಿ ಕೂಡ ಈ ಬಗ್ಗೆ ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ: IPL 2021: ಕೊರೊನಾ ಕಪಿಮುಷ್ಠಿಯಲ್ಲಿ ಐಪಿಎಲ್​.. ಕೊಲ್ಕತ್ತಾ, ಡೆಲ್ಲಿ ನಂತರ ಚೆನ್ನೈ ಮೇಲೆ ದಾಳಿ ನಡೆಸಿದ ಮಹಾಮಾರಿ!

Published On - 11:12 pm, Sat, 3 April 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ