AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​

ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​
ಆರ್​ಸಿಬಿಗೆ ಹಳದಿ ಎಮೋಜಿ ನೀಡಿರುವುದು
ರಾಜೇಶ್ ದುಗ್ಗುಮನೆ
|

Updated on:Apr 03, 2021 | 11:17 PM

Share

ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂ ಹಾಗೂ ಚೆನ್ನೈ ಸೂಪರ್​ ಕಿಂಗ್ಸ್​ ಮ್ಯಾಚ್​ ಎಂದರೆ ತುಂಬಾನೇ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ನಾನಾ ಕಾರಣಗಳಿವೆ. ಸಿಎಸ್​ಕೆ ಹಾಗೂ ಆರ್​​​​​​​​​​​​​​ಸಿಬಿ ಅಭಿಮಾನಿಗಳ ನಡುವೆ ಹೊಂದಾಣಿಕೆ ಆದ ದಾಖಲೆಯೇ ಇಲ್ಲ. ಹೀಗಿರುವಾಗಲೇ ಒಂದು ಎಡವಟ್ಟು ನಡೆದು ಹೋಗಿದೆ! ಆರ್​ಸಿಬಿಯವರಿಗೆ ಹಳದಿ ಬಣ್ಣದ ಜರ್ಸಿ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಟ್ರೋಲ್​ ಆಗಿದೆ. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ. ಇದಕ್ಕಾಗಿಯೇ ಎರಡೂ ತಂಡಗಳ ನಡುವಿನ ಮ್ಯಾಚ್​ ಹೈ ವೋಲ್ಟೇಜ್​ ಎನಿಸಿಕೊಳ್ಳುತ್ತದೆ. ಆದರೆ, ಈಗ ಟ್ವಿಟರ್ ಮಾಡಿದ ತಪ್ಪೊಂದು ಭಾರೀ ಚರ್ಚೆಗೆ ಕಾರಣವಾಗಿದೆ.

ಏಪ್ರಿಲ್​ 9ರಿಂದ ಐಪಿಎಲ್​ ಮ್ಯಾಚ್​ ಆರಂಭವಾಗಲಿದೆ. ಪ್ರತಿ ಬಾರಿ ಐಪಿಎಲ್​ ನಡೆಯುವುದಕ್ಕೂ ಮೊದಲು ಟ್ವಿಟರ್​ ಪ್ರತಿ ತಂಡದ ಹ್ಯಾಶ್​ಟ್ಯಾಗ್ ಎದುರು ಆಯಾ ತಂಡದ ಟೀಶರ್ಟ್​ ಎಮೋಜಿ ನೀಡುತ್ತದೆ. ಈ ಬಾರಿ ಆರ್​ಸಿಬಿಗೆ ಕೆಂಪು ಬಣ್ಣದ ಟೀ ಶರ್ಟ್​ ನೀಡುವ ಬದಲು ಹಳದಿ ಬಣ್ಣದ ಟಿ-ಶರ್ಟ್​ ಎಮೋಜಿ ನೀಡಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಈ ಬಗ್ಗೆ ಚೆನ್ನೈ ಸೂಪರ್​ ಕಿಂಗ್ಸ್ ಕೂಡ ಟ್ವೀಟ್​ ಮಾಡಿದೆ. ರಜನಿಕಾಂತ್​ ಹಳೆಯ ಸಿನಿಮಾವೊಂದರ ಫೋಟೋ ಪೋಸ್ಟ್​ ಮಾಡಿದ್ದು, ಅದರಲ್ಲಿ ರಜನಿಕಾಂತ್ ಕೆಂಪು ಬಣ್ಣದ ಸೀರೆ ಮೇಲೆ ಹಳದಿ ಬಣ್ಣ ಚಲ್ಲುತ್ತಿದ್ದಾರೆ.

ಆರ್​ಸಿಬಿ ಕೂಡ ಈ ಬಗ್ಗೆ ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ: IPL 2021: ಕೊರೊನಾ ಕಪಿಮುಷ್ಠಿಯಲ್ಲಿ ಐಪಿಎಲ್​.. ಕೊಲ್ಕತ್ತಾ, ಡೆಲ್ಲಿ ನಂತರ ಚೆನ್ನೈ ಮೇಲೆ ದಾಳಿ ನಡೆಸಿದ ಮಹಾಮಾರಿ!

Published On - 11:12 pm, Sat, 3 April 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು