AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!

Royal Challengers Bangalore: ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Aug 30, 2022 | 8:55 PM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನೆಟ್ ಬೌಲರ್ ಆಗಿದ್ದ ಯುವ ಆಟಗಾರನ ಅದೃಷ್ಟ ಖುಲಾಯಿಸಿದೆ. ಒಂದೇ ಒಂದು ಸೀಸನ್​ ಐಪಿಎಲ್​​ನಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ಯುವ ಸ್ಪಿನ್ನರ್ ಇಝ್ರಾಉಲ್​ ಹಕ್ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶಗಳು ದೊರೆಯುತ್ತಿದೆ. ಅಫ್ಘಾನಿಸ್ತಾನದ 18 ವರ್ಷದ ನವೀದ್  ಐಪಿಎಲ್​ 2022 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಯುವ ಸ್ಪಿನ್ನರ್ ಮೇಲೆ ಹಲವು ಫ್ರಾಂಚೈಸಿಗಳು ಕಣ್ಣಿಟ್ಟಿದ್ದವು.

ಅದರಂತೆ ಈ ಬಾರಿಯ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಸಿಪಿಎಲ್) ಸೇಂಟ್ ಕಿಟ್ಸ್ ಮತ್ತು ಪೇಟ್ರಿಯಾಟ್ಸ್‌ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಬಿಬಿಎಲ್ 2022 ರ ಡ್ರಾಫ್ಟ್ ಆಯ್ಕೆಗಳ ಮೂಲಕ ಅಫ್ಘಾನಿಸ್ತಾನದ ಯುವ ಸ್ಪಿನ್ನರ್​ ಅನ್ನು ಸಿಡ್ನಿ ಸಿಕ್ಸರ್ಸ್​ ತಂಡವು ಖರೀದಿಸಿದೆ. ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್​ನಂತಹ ಸ್ಟಾರ್ ಆಟಗಾರರಿಗೆ ಅಭ್ಯಾಸದ ವೇಳೆ ಸ್ಪಿನ್ ಮೋಡಿದ್ದ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶ ದೊರೆಯಲಾರಂಭಿಸಿದೆ.

ವಿಶೇಷ ಎಂದರೆ ಇಝ್ರಾಉಲ್​ ಹಕ್ ನವೀದ್ ಇನ್ನೂ ಕೂಡ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಅಂದರೆ ಕೇವಲ ಅಫ್ಘಾನಿಸ್ತಾನ್ ಅಂಡರ್ 19 ಟೀಮ್ ಮತ್ತು ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿಯೇ ಹೆಸರು ಮಾಡಿದ್ದಾರೆ. ಇದರ ಫಲವಾಗಿ ಇದೀಗ ಯುವ ಸ್ಪಿನ್ನರ್​ಗೆ ಟಿ20 ಲೀಗ್​ನ ಪ್ರಮುಖ ಫ್ರಾಂಚೈಸಿಗಳು ಮಣೆಹಾಕುತ್ತಿದ್ದಾರೆ. ಹೀಗಾಗಿಯೇ ಮುಂಬರುವ ಐಪಿಎಲ್​ ಹರಾಜಿಗೂ ಇಝ್ರಾಉಲ್​ ಹಕ್ ನವೀದ್ ಹೆಸರು ನೀಡುವುದರಲ್ಲಿ ಅನುಮಾನವೇ ಇಲ್ಲ.

ಇತ್ತ ಈಗಾಗಲೇ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ