AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!

Royal Challengers Bangalore: ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Aug 30, 2022 | 8:55 PM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನೆಟ್ ಬೌಲರ್ ಆಗಿದ್ದ ಯುವ ಆಟಗಾರನ ಅದೃಷ್ಟ ಖುಲಾಯಿಸಿದೆ. ಒಂದೇ ಒಂದು ಸೀಸನ್​ ಐಪಿಎಲ್​​ನಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ಯುವ ಸ್ಪಿನ್ನರ್ ಇಝ್ರಾಉಲ್​ ಹಕ್ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶಗಳು ದೊರೆಯುತ್ತಿದೆ. ಅಫ್ಘಾನಿಸ್ತಾನದ 18 ವರ್ಷದ ನವೀದ್  ಐಪಿಎಲ್​ 2022 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಯುವ ಸ್ಪಿನ್ನರ್ ಮೇಲೆ ಹಲವು ಫ್ರಾಂಚೈಸಿಗಳು ಕಣ್ಣಿಟ್ಟಿದ್ದವು.

ಅದರಂತೆ ಈ ಬಾರಿಯ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಸಿಪಿಎಲ್) ಸೇಂಟ್ ಕಿಟ್ಸ್ ಮತ್ತು ಪೇಟ್ರಿಯಾಟ್ಸ್‌ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಬಿಬಿಎಲ್ 2022 ರ ಡ್ರಾಫ್ಟ್ ಆಯ್ಕೆಗಳ ಮೂಲಕ ಅಫ್ಘಾನಿಸ್ತಾನದ ಯುವ ಸ್ಪಿನ್ನರ್​ ಅನ್ನು ಸಿಡ್ನಿ ಸಿಕ್ಸರ್ಸ್​ ತಂಡವು ಖರೀದಿಸಿದೆ. ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್​ನಂತಹ ಸ್ಟಾರ್ ಆಟಗಾರರಿಗೆ ಅಭ್ಯಾಸದ ವೇಳೆ ಸ್ಪಿನ್ ಮೋಡಿದ್ದ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶ ದೊರೆಯಲಾರಂಭಿಸಿದೆ.

ವಿಶೇಷ ಎಂದರೆ ಇಝ್ರಾಉಲ್​ ಹಕ್ ನವೀದ್ ಇನ್ನೂ ಕೂಡ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಅಂದರೆ ಕೇವಲ ಅಫ್ಘಾನಿಸ್ತಾನ್ ಅಂಡರ್ 19 ಟೀಮ್ ಮತ್ತು ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿಯೇ ಹೆಸರು ಮಾಡಿದ್ದಾರೆ. ಇದರ ಫಲವಾಗಿ ಇದೀಗ ಯುವ ಸ್ಪಿನ್ನರ್​ಗೆ ಟಿ20 ಲೀಗ್​ನ ಪ್ರಮುಖ ಫ್ರಾಂಚೈಸಿಗಳು ಮಣೆಹಾಕುತ್ತಿದ್ದಾರೆ. ಹೀಗಾಗಿಯೇ ಮುಂಬರುವ ಐಪಿಎಲ್​ ಹರಾಜಿಗೂ ಇಝ್ರಾಉಲ್​ ಹಕ್ ನವೀದ್ ಹೆಸರು ನೀಡುವುದರಲ್ಲಿ ಅನುಮಾನವೇ ಇಲ್ಲ.

ಇತ್ತ ಈಗಾಗಲೇ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!