AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!

Royal Challengers Bangalore: ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಆಡುತ್ತಿರುವ RCB ತಂಡದ ನೆಟ್ ಬೌಲರ್..!
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Aug 30, 2022 | 8:55 PM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನೆಟ್ ಬೌಲರ್ ಆಗಿದ್ದ ಯುವ ಆಟಗಾರನ ಅದೃಷ್ಟ ಖುಲಾಯಿಸಿದೆ. ಒಂದೇ ಒಂದು ಸೀಸನ್​ ಐಪಿಎಲ್​​ನಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ಯುವ ಸ್ಪಿನ್ನರ್ ಇಝ್ರಾಉಲ್​ ಹಕ್ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶಗಳು ದೊರೆಯುತ್ತಿದೆ. ಅಫ್ಘಾನಿಸ್ತಾನದ 18 ವರ್ಷದ ನವೀದ್  ಐಪಿಎಲ್​ 2022 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಯುವ ಸ್ಪಿನ್ನರ್ ಮೇಲೆ ಹಲವು ಫ್ರಾಂಚೈಸಿಗಳು ಕಣ್ಣಿಟ್ಟಿದ್ದವು.

ಅದರಂತೆ ಈ ಬಾರಿಯ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಸಿಪಿಎಲ್) ಸೇಂಟ್ ಕಿಟ್ಸ್ ಮತ್ತು ಪೇಟ್ರಿಯಾಟ್ಸ್‌ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್​ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಬಿಬಿಎಲ್ 2022 ರ ಡ್ರಾಫ್ಟ್ ಆಯ್ಕೆಗಳ ಮೂಲಕ ಅಫ್ಘಾನಿಸ್ತಾನದ ಯುವ ಸ್ಪಿನ್ನರ್​ ಅನ್ನು ಸಿಡ್ನಿ ಸಿಕ್ಸರ್ಸ್​ ತಂಡವು ಖರೀದಿಸಿದೆ. ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್​ನಂತಹ ಸ್ಟಾರ್ ಆಟಗಾರರಿಗೆ ಅಭ್ಯಾಸದ ವೇಳೆ ಸ್ಪಿನ್ ಮೋಡಿದ್ದ ನವೀದ್​ಗೆ ಇದೀಗ ಬ್ಯಾಕ್ ಟು ಬ್ಯಾಕ್ ಅವಕಾಶ ದೊರೆಯಲಾರಂಭಿಸಿದೆ.

ವಿಶೇಷ ಎಂದರೆ ಇಝ್ರಾಉಲ್​ ಹಕ್ ನವೀದ್ ಇನ್ನೂ ಕೂಡ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಅಂದರೆ ಕೇವಲ ಅಫ್ಘಾನಿಸ್ತಾನ್ ಅಂಡರ್ 19 ಟೀಮ್ ಮತ್ತು ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿಯೇ ಹೆಸರು ಮಾಡಿದ್ದಾರೆ. ಇದರ ಫಲವಾಗಿ ಇದೀಗ ಯುವ ಸ್ಪಿನ್ನರ್​ಗೆ ಟಿ20 ಲೀಗ್​ನ ಪ್ರಮುಖ ಫ್ರಾಂಚೈಸಿಗಳು ಮಣೆಹಾಕುತ್ತಿದ್ದಾರೆ. ಹೀಗಾಗಿಯೇ ಮುಂಬರುವ ಐಪಿಎಲ್​ ಹರಾಜಿಗೂ ಇಝ್ರಾಉಲ್​ ಹಕ್ ನವೀದ್ ಹೆಸರು ನೀಡುವುದರಲ್ಲಿ ಅನುಮಾನವೇ ಇಲ್ಲ.

ಇತ್ತ ಈಗಾಗಲೇ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿ ಗಮನ ಸೆಳೆದಿರುವ ಯುವ ಸ್ಪಿನ್ನರ್​ನನ್ನು ರಾಯಲ್ ಚಾಲೆಂಜರ್ಸ್​ ಫ್ರಾಂಚೈಸಿಯೇ  ಖರೀದಿಸಲಿದೆಯಾ ಕಾದು ನೋಡಬೇಕಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ