ಚಹಲ್ ಮ್ಯಾಜಿಕ್: ಗೆಲುವಿನೊಂದಿಗೆ ಅಭಿಯಾನ ಶುರು ಮಾಡಿದ ಆರ್ ಸಿ ಬಿ

ಇಂಡಿಯನ್ ಪ್ರಿಮೀಯರ್ ಲೀಗ್ 13ನೇ ಆವೃತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನೊಂದಿಗೆ ಆಭಿಯಾನ ಶುರುಮಾಡಿದೆ. ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಇವತ್ತಿನ ಪಂದ್ಯದಲ್ಲಿ ಆರ್​ಸಿಬಿ, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು 10ರನ್​ಗಳಿಂದ ಸೋಲಿಸಿತು. ಲೆಗ್​ಸ್ಪಿನ್ನರ್ ಯುಜುವೇಂದ್ರ ಚಹಲ್ ಕರಾರುವಾಕ್ ಬೌಲಿಂಗ್ ಪ್ರದರ್ಶನ ನೀಡಿ ತಮ್ಮ 4 ಒವರ್​ಗಳಲ್ಲಿ ಕೇವಲ 18 ರನ್ ನೀಡಿ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ವೇಗದ ಬೌಲರ್​ಗಳಾದ ಶಿವಮ್ ದುಬೆ ಮತ್ತು ನವದೀಪ್ ಸೈನಿ ತಲಾ ವಿಕೆಟ್ 2 ಪಡೆದರು. ಟಾಸ್ […]

ಚಹಲ್ ಮ್ಯಾಜಿಕ್: ಗೆಲುವಿನೊಂದಿಗೆ ಅಭಿಯಾನ ಶುರು ಮಾಡಿದ ಆರ್ ಸಿ ಬಿ
ಅರುಣ್​ ಕುಮಾರ್​ ಬೆಳ್ಳಿ

Updated on: Sep 21, 2020 | 11:49 PM

ಇಂಡಿಯನ್ ಪ್ರಿಮೀಯರ್ ಲೀಗ್ 13ನೇ ಆವೃತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನೊಂದಿಗೆ ಆಭಿಯಾನ ಶುರುಮಾಡಿದೆ. ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಇವತ್ತಿನ ಪಂದ್ಯದಲ್ಲಿ ಆರ್​ಸಿಬಿ, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು 10ರನ್​ಗಳಿಂದ ಸೋಲಿಸಿತು.

ಲೆಗ್​ಸ್ಪಿನ್ನರ್ ಯುಜುವೇಂದ್ರ ಚಹಲ್ ಕರಾರುವಾಕ್ ಬೌಲಿಂಗ್ ಪ್ರದರ್ಶನ ನೀಡಿ ತಮ್ಮ 4 ಒವರ್​ಗಳಲ್ಲಿ ಕೇವಲ 18 ರನ್ ನೀಡಿ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ವೇಗದ ಬೌಲರ್​ಗಳಾದ ಶಿವಮ್ ದುಬೆ ಮತ್ತು ನವದೀಪ್ ಸೈನಿ ತಲಾ ವಿಕೆಟ್ 2 ಪಡೆದರು.

ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ಆರ್​ಸಿಬಿ ತಂಡಕ್ಕೆ ದೇವದತ್ ಪಡಿಕ್ಕಲ್ ತನ್ನ ಮೇಲಿಟ್ಟಿದ್ದ ನಿರೀಕ್ಷೆಯನ್ನು ಹುಸಿ ಹೋಗಲು ಬಿಡದೆ ಐಪಿಎಲ್​ನ ಪಾದಾರ್ಪಣೆಯ ಪಂದ್ಯದಲ್ಲೇ ಅರ್ಧಶತಕ ಬಾರಿಸಿದರು. ಆರನ್ ಫಿಂಚ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಪಡಿಕ್ಕಲ್ ಮೊದಲ ವಿಕೆಟ್​ಗೆ 11 ಓವರ್​ಗಳಲ್ಲಿ 90 ರನ್ ಸೇರಿಸಿದ್ದೂ ಅಲ್ಲದೆ 42 ಎಸೆತಗಳಲ್ಲಿ 56 (8X4) ರನ್ ಚಚ್ಚಿದರು. ಫಿಂಚ್ 29ರನ್ (27, 1X4 2X6) ಗಳಿಸಿ ಔಟಾದರು.

ನಾಯಕ ವಿರಾಟ್ ಕೊಹ್ಲಿ ವಿಲರಾದರೂ, ಆರ್​ಸಿಬಿಯ ನೆಚ್ಚಿನ ಬ್ಯಾಟ್ಸ್​ಮನ್ ಎಬಿ ಡಿ ವಿಲಿಯರ್ಸ್ ಕೇವಲ 30 ಎಸೆತಗಳಲ್ಲಿ 51ರನ್ (4X4 2X6) ಬಾರಿಸಿ ರನೌಟ್ ಆದರು. ಹೈದರಾಬಾದ್ ಪರ ವಿಜಯ್ ಶಂಕರ್, ಟಿ ನಟರಾಜನ್ ಮತ್ತು ಅಭಿಷೇಕ ಶರ್ಮ ತಲಾ ಒಂದು ವಿಕೆಟ್ ಪಡೆದರು.

ಹೈದರಾಬಾದ್ ಪರ ಓಪನರ್ ಜಾನಿ ಬೇರ್​ಸ್ಟೋ 43 ಎಸೆತಗಳಲ್ಲಿ 61ರನ್ (6X4 2X6) ಬಾರಿಸಿದರು. ಕರ್ನಾಟಕದವರಾದ ಮನೀಶ್ ಪಾಂಡೆ 33 ಎಸೆತಗಳಲ್ಲಿ 34 (3X4 1X6) ಬಾರಿಸಿದರು. ಚಹಲ್ ಪಂದ್ಯದ ವ್ಯಕ್ತಿ ಪ್ರಶಸ್ತಿಗೆ ಪಾತ್ರರಾದರು.  

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us