AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK ಪಂದ್ಯಕ್ಕೆ ಹೀಗಿರಲಿದೆ ಬೆಂಗಳೂರಿನ ಹವಾಮಾನ; ಇಲ್ಲಿದೆ ರಿಪೋರ್ಟ್​

ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟ್ಸಮನ್​ಗಳಿಗೆ ಸಹಕಾರಿ ಆಗಿದೆ. ಹೀಗಾಗಿ ದೊಡ್ಡ ಸ್ಕೋರ್ ನಿರೀಕ್ಷೆ ಮಾಡಬಹುದು. ಟಾಸ್ ಗೆದ್ದವರು ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು.

RCB vs CSK ಪಂದ್ಯಕ್ಕೆ ಹೀಗಿರಲಿದೆ ಬೆಂಗಳೂರಿನ ಹವಾಮಾನ; ಇಲ್ಲಿದೆ ರಿಪೋರ್ಟ್​
ವಿರಾಟ್-ಡುಪ್ಲೆಸಿ
ರಾಜೇಶ್ ದುಗ್ಗುಮನೆ
|

Updated on:Apr 17, 2023 | 12:48 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಡುವಿನ ಪಂದ್ಯ ಯಾವಾಗಲೂ ಹೈವೋಲ್ಟೇಜ್​ನಿಂದ ಕೂಡಿರುತ್ತದೆ. ವಿರಾಟ್ ಕೊಹ್ಲಿ ಅಭಿಮಾನಿಗಳು ಆರ್​ಸಿಬಿಗೆ ಹಾಗೂ ಎಂ.ಎಸ್​. ಧೋನಿ ಅಭಿಮಾನಿಗಳು ಸಿಎಸ್​ಕೆಗೆ ಬೆಂಬಲ ಸೂಚಿಸುತ್ತಾರೆ. ಇಂದು (ಏಪ್ರಿಲ್ 17) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ (RCB) ಹಾಗೂ ಸಿಎಸ್​ಕೆ ಸೆಣೆಸಲಿವೆ. ಆರ್​ಸಿಬಿಗೆ ಹೋಂ ಪಿಚ್ ಆಗಿರುವುದರಿಂದ ಗೆಲ್ಲಲೇಬೇಕು ಎನ್ನುವ ಹಂಬಲದಲ್ಲಿದೆ. ಇನ್ನು, ಹೋಂ ಗ್ರೌಂಡ್​ನಲ್ಲಿ ಬೆಂಗಳೂರು ತಂಡವನ್ನು ಸೋಲಿಸಬೇಕು ಎಂಬ ನಿರೀಕ್ಷೆಯಲ್ಲಿ ಚೆನ್ನೈ ತಂಡ ಇದೆ. ಅಂತಿಮವಾಗಿ ಯಾರಿಗೆ ಗೆಲುವಿನ ಮಾಲೆ ಬೀಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಪಿಚ್ ರಿಪೋರ್ಟ್

ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟ್ಸಮನ್​ಗಳಿಗೆ ಸಹಕಾರಿ ಆಗಿದೆ. ಹೀಗಾಗಿ ದೊಡ್ಡ ಸ್ಕೋರ್ ನಿರೀಕ್ಷೆ ಮಾಡಬಹುದು. ಟಾಸ್ ಗೆದ್ದವರು ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗಾಗಿ, ಇಂದಿನ ಪಂದ್ಯದಲ್ಲಿ ಟಾಸ್ ಗೆಲ್ಲೋದು ಕೂಡ ತುಂಬಾನೇ ಮುಖ್ಯ.

ಇದನ್ನೂ ಓದಿ: IPL 2023: RCB ಪಾಲಿಗೆ ಕಂಟಕವಾಗುತ್ತಿರುವ ಇಂಪ್ಯಾಕ್ಟ್ ಪ್ಲೇಯರ್ಸ್..!

ಹವಾಮಾನ ಹೇಗಿರಲಿದೆ?

ಬೆಂಗಳೂರಿನಲ್ಲಿ ನಡೆದ ಸಾಕಷ್ಟು ಐಪಿಎಲ್ ಮ್ಯಾಚ್​​ಗೆ ವರುಣ ಅಡ್ಡಿ ಮಾಡಿದ್ದಾನೆ. ಆದರೆ, ಈ ವರ್ಷ ಬೆಂಗಳೂರಿನಲ್ಲಿ ನಡೆದ ಪಂದ್ಯಗಳಿಗೆ ಮಳೆ ಅಡ್ಡಿ ಆಗಿಲ್ಲ. ಇಂದಿನ ಪಂದ್ಯಕ್ಕೂ ಮಳೆಯ ಅಡ್ಡಿ ಉಂಟಾಗುವುದಿಲ್ಲ. ಹವಾಮಾನ ವರದಿ ಪ್ರಕಾರ ಇಂದು ಆಗಸ ಸ್ವಚ್ಛವಾಗಿರಲಿದೆ. 7 ಗಂಟೆ ಸುಮಾರಿಗೆ ಬೆಂಗಳೂರಿನ ಟೆಂಪ್ರೇಚರ್ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾತ್ರಿ 11ರ ವೇಳೆಗೆ 26 ಡಿಗ್ರಿಗೆ ಇಳಿಯಲಿದೆ.

ಅಂಕಿ ಅಂಶ

ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. 19 ಬಾರಿ ಸಿಎಸ್​ಕೆ ತಂಡ ಗೆದ್ದಿದೆ. ಇನ್ನು ಒಂದು ಪಂದ್ಯ ರದ್ದಾಗಿತ್ತು. ಈ ಸೀಸನ್​ನಲ್ಲಿ ಸಿಎಸ್​ಕೆ ಹಾಗೂ ಆರ್​ಸಿಬಿ ತಲಾ 4 ಪಂದ್ಯಗಳನ್ನಾಡಿ ಎರಡು ಗೆದ್ದಿವೆ. ಈ ಮೂಲಕ ನಾಲ್ಕು ಅಂಕ ಗಳಿಸಿ ಅನುಕ್ರಮವಾಗಿ ಆರು ಹಾಗೂ ಏಳನೇ ಸ್ಥಾನದಲ್ಲಿವೆ.

ಎಲ್ಲಿ ವೀಕ್ಷಿಸಬಹುದು?

ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದೆ. ಪಂದ್ಯ 7.30ಕ್ಕೆ ಆರಂಭ ಆಗಲಿದೆ. ಜಿಯೋ ಸಿನಿಮಾಸ್ ಒಟಿಟಿ ಹಾಗೂ ಸ್ಟಾರ್ಸ್ ಸ್ಪೋರ್ಟ್ಸ್​ನಲ್ಲಿ ಪಂದ್ಯ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Mon, 17 April 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ