AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK ಪಂದ್ಯಕ್ಕೆ ಹೀಗಿರಲಿದೆ ಬೆಂಗಳೂರಿನ ಹವಾಮಾನ; ಇಲ್ಲಿದೆ ರಿಪೋರ್ಟ್​

ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟ್ಸಮನ್​ಗಳಿಗೆ ಸಹಕಾರಿ ಆಗಿದೆ. ಹೀಗಾಗಿ ದೊಡ್ಡ ಸ್ಕೋರ್ ನಿರೀಕ್ಷೆ ಮಾಡಬಹುದು. ಟಾಸ್ ಗೆದ್ದವರು ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು.

RCB vs CSK ಪಂದ್ಯಕ್ಕೆ ಹೀಗಿರಲಿದೆ ಬೆಂಗಳೂರಿನ ಹವಾಮಾನ; ಇಲ್ಲಿದೆ ರಿಪೋರ್ಟ್​
ವಿರಾಟ್-ಡುಪ್ಲೆಸಿ
ರಾಜೇಶ್ ದುಗ್ಗುಮನೆ
|

Updated on:Apr 17, 2023 | 12:48 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಡುವಿನ ಪಂದ್ಯ ಯಾವಾಗಲೂ ಹೈವೋಲ್ಟೇಜ್​ನಿಂದ ಕೂಡಿರುತ್ತದೆ. ವಿರಾಟ್ ಕೊಹ್ಲಿ ಅಭಿಮಾನಿಗಳು ಆರ್​ಸಿಬಿಗೆ ಹಾಗೂ ಎಂ.ಎಸ್​. ಧೋನಿ ಅಭಿಮಾನಿಗಳು ಸಿಎಸ್​ಕೆಗೆ ಬೆಂಬಲ ಸೂಚಿಸುತ್ತಾರೆ. ಇಂದು (ಏಪ್ರಿಲ್ 17) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ (RCB) ಹಾಗೂ ಸಿಎಸ್​ಕೆ ಸೆಣೆಸಲಿವೆ. ಆರ್​ಸಿಬಿಗೆ ಹೋಂ ಪಿಚ್ ಆಗಿರುವುದರಿಂದ ಗೆಲ್ಲಲೇಬೇಕು ಎನ್ನುವ ಹಂಬಲದಲ್ಲಿದೆ. ಇನ್ನು, ಹೋಂ ಗ್ರೌಂಡ್​ನಲ್ಲಿ ಬೆಂಗಳೂರು ತಂಡವನ್ನು ಸೋಲಿಸಬೇಕು ಎಂಬ ನಿರೀಕ್ಷೆಯಲ್ಲಿ ಚೆನ್ನೈ ತಂಡ ಇದೆ. ಅಂತಿಮವಾಗಿ ಯಾರಿಗೆ ಗೆಲುವಿನ ಮಾಲೆ ಬೀಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಪಿಚ್ ರಿಪೋರ್ಟ್

ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟ್ಸಮನ್​ಗಳಿಗೆ ಸಹಕಾರಿ ಆಗಿದೆ. ಹೀಗಾಗಿ ದೊಡ್ಡ ಸ್ಕೋರ್ ನಿರೀಕ್ಷೆ ಮಾಡಬಹುದು. ಟಾಸ್ ಗೆದ್ದವರು ಚೇಸಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗಾಗಿ, ಇಂದಿನ ಪಂದ್ಯದಲ್ಲಿ ಟಾಸ್ ಗೆಲ್ಲೋದು ಕೂಡ ತುಂಬಾನೇ ಮುಖ್ಯ.

ಇದನ್ನೂ ಓದಿ: IPL 2023: RCB ಪಾಲಿಗೆ ಕಂಟಕವಾಗುತ್ತಿರುವ ಇಂಪ್ಯಾಕ್ಟ್ ಪ್ಲೇಯರ್ಸ್..!

ಹವಾಮಾನ ಹೇಗಿರಲಿದೆ?

ಬೆಂಗಳೂರಿನಲ್ಲಿ ನಡೆದ ಸಾಕಷ್ಟು ಐಪಿಎಲ್ ಮ್ಯಾಚ್​​ಗೆ ವರುಣ ಅಡ್ಡಿ ಮಾಡಿದ್ದಾನೆ. ಆದರೆ, ಈ ವರ್ಷ ಬೆಂಗಳೂರಿನಲ್ಲಿ ನಡೆದ ಪಂದ್ಯಗಳಿಗೆ ಮಳೆ ಅಡ್ಡಿ ಆಗಿಲ್ಲ. ಇಂದಿನ ಪಂದ್ಯಕ್ಕೂ ಮಳೆಯ ಅಡ್ಡಿ ಉಂಟಾಗುವುದಿಲ್ಲ. ಹವಾಮಾನ ವರದಿ ಪ್ರಕಾರ ಇಂದು ಆಗಸ ಸ್ವಚ್ಛವಾಗಿರಲಿದೆ. 7 ಗಂಟೆ ಸುಮಾರಿಗೆ ಬೆಂಗಳೂರಿನ ಟೆಂಪ್ರೇಚರ್ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾತ್ರಿ 11ರ ವೇಳೆಗೆ 26 ಡಿಗ್ರಿಗೆ ಇಳಿಯಲಿದೆ.

ಅಂಕಿ ಅಂಶ

ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. 19 ಬಾರಿ ಸಿಎಸ್​ಕೆ ತಂಡ ಗೆದ್ದಿದೆ. ಇನ್ನು ಒಂದು ಪಂದ್ಯ ರದ್ದಾಗಿತ್ತು. ಈ ಸೀಸನ್​ನಲ್ಲಿ ಸಿಎಸ್​ಕೆ ಹಾಗೂ ಆರ್​ಸಿಬಿ ತಲಾ 4 ಪಂದ್ಯಗಳನ್ನಾಡಿ ಎರಡು ಗೆದ್ದಿವೆ. ಈ ಮೂಲಕ ನಾಲ್ಕು ಅಂಕ ಗಳಿಸಿ ಅನುಕ್ರಮವಾಗಿ ಆರು ಹಾಗೂ ಏಳನೇ ಸ್ಥಾನದಲ್ಲಿವೆ.

ಎಲ್ಲಿ ವೀಕ್ಷಿಸಬಹುದು?

ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದೆ. ಪಂದ್ಯ 7.30ಕ್ಕೆ ಆರಂಭ ಆಗಲಿದೆ. ಜಿಯೋ ಸಿನಿಮಾಸ್ ಒಟಿಟಿ ಹಾಗೂ ಸ್ಟಾರ್ಸ್ ಸ್ಪೋರ್ಟ್ಸ್​ನಲ್ಲಿ ಪಂದ್ಯ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Mon, 17 April 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​