AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ಆರಂಭಕ್ಕೂ ಮುನ್ನ RCBಗೆ ಆಘಾತ: ಪ್ರಮುಖ ಆಟಗಾರ ಔಟ್..?

IPL 2021 RCB Team: ವಿರಾಟ್ ಕೊಹ್ಲಿ (ನಾಯಕ) ಎ.ಬಿ. ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಫಿನ್ ಅಲೆನ್, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಗ್ಲೆನ್​ ಮ್ಯಾಕ್ಸ್​ವೆಲ್, ಕೈಲ್‌ ಜೇಮಿಸನ್, ಡ್ಯಾನಿಯಲ್​ ಕ್ರಿಶ್ಚಿಯನ್, ಮೊಹಮ್ಮದ್​ ಅಜರುದ್ದೀನ್, ಸುಯಶ್​ ಪ್ರಭುದೇಸಾಯಿ, ಕೆ.ಎಸ್.​ಭರತ್​, ಸಚಿನ್​ ಬೇಬಿ, ರಜತ್​ ಪಾಟೀದಾರ್, ಸ್ಕಾಟ್ ಕುಗ್ಗೆಲಿನ್

IPL 2021: ಐಪಿಎಲ್ ಆರಂಭಕ್ಕೂ ಮುನ್ನ RCBಗೆ ಆಘಾತ: ಪ್ರಮುಖ ಆಟಗಾರ ಔಟ್..?
Rcb
TV9 Web
| Edited By: |

Updated on:Jul 25, 2021 | 2:55 PM

Share

ಕೊರೋನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಸೆಪ್ಟೆಂಬರ್​ನಲ್ಲಿ ಚಾಲನೆ ಸಿಗಲಿದೆ. ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೂರ್ನಿಯ ಉಳಿದ ಭಾಗವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಸೆಪ್ಟೆಂಬರ್ 19 ರಿಂದ ಐಪಿಎಲ್ (IPL 2021) ದ್ವಿತಿಯಾರ್ಧ ಶುರುವಾಗಲಿದ್ದು, ಅಕ್ಟೋಬರ್​ 15ಕ್ಕೆ ಫೈನಲ್ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿದೆ. ಟೂರ್ನಿಯ ಉಳಿದ 31 ಪಂದ್ಯಗಳಿಗಾಗಿ ಆಗಸ್ಟ್​ನಲ್ಲೇ ಕೆಲ ತಂಡಗಳು ಯುಎಇನತ್ತ ಪ್ರಯಾಣ ಬೆಳೆಸಲಿದೆ. ಆದರೆ ಇತ್ತ ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ ಆರ್​ಸಿಬಿ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

ಹೌದು, ಇತ್ತೀಚೆಗೆ ಇಂಗ್ಲೆಂಡ್​ನಲ್ಲಿ ನಡೆದ ಟೀಮ್ ಇಂಡಿಯಾ ಹಾಗೂ ಕೌಂಟಿ ಸೆಲೆಕ್ಟ್ ಇಲೆವೆನ್ ನಡುವಣ ಅಭ್ಯಾಸ ಪಂದ್ಯದ ವೇಳೆ ಆರ್​ಸಿಬಿ (RCB) ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರು. ಅಷ್ಟೇ ಅಲ್ಲದೆ ಗಾಯದ ಪರಿಣಾಮ ಆಗಸ್ಟ್​ನಲ್ಲಿ ನಡೆಯಲಿರುವ ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಿಂದ ಸುಂದರ್ ಹೊರಬಿದ್ದಿದ್ದರು. ಇದೀಗ ಆರ್​ಸಿಬಿ ಆಟಗಾರನ ಬೆರಳಿಗೆ ಗಂಭೀರ ಗಾಯವಾಗಿದೆ ಎಂಬ ರಿಪೋರ್ಟ್ ಬಂದಿದೆ. ಈ ಗಾಯವು ಗುಣಮುಖವಾಗಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ವೈದ್ಯರ ವರದಿ ತಿಳಿಸಿದೆ.

ಗಂಭೀರ ಗಾಯವಾಗಿರುವ ಕಾರಣ ವಾಷಿಂಗ್ಟನ್ ಸುಂದರ್ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದ್ದು, ಐಪಿಎಲ್ ವೇಳೆಗೆ ಗುಣಮುಖರಾಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳಿಗೆ ವಾಷಿಂಗ್ಟನ್ ಸುಂದರ್ ಅಲಭ್ಯರಾಗುವ ಸಾಧ್ಯತೆಯಿದೆ.

ಈ ಬಾರಿಯ ಐಪಿಎಲ್​ನ್ನು ಭರ್ಜರಿಯಾಗಿ ಆರಂಭಿಸಿರುವ ಆರ್​ಸಿಬಿ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದೆ. ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸಿದರೆ 2 ರಲ್ಲಿ ಮಾತ್ರ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಯುಎಇ ಮೈದಾನದಲ್ಲೂ ಇದೇ ಫಾರ್ಮ್​ ಮುಂದುವರೆಸಿ ಈ ಸಲ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಆದರೀಗ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ವಾಷಿಂಗ್ಟನ್ ಸುಂದರ್ ಅಲಭ್ಯತೆಯು ಆರ್​ಸಿಬಿ ತಂಡದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

IPL 2021 RCB Team: ವಿರಾಟ್ ಕೊಹ್ಲಿ (ನಾಯಕ) ಎ.ಬಿ. ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಫಿನ್ ಅಲೆನ್, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಗ್ಲೆನ್​ ಮ್ಯಾಕ್ಸ್​ವೆಲ್, ಕೈಲ್‌ ಜೇಮಿಸನ್, ಡ್ಯಾನಿಯಲ್​ ಕ್ರಿಶ್ಚಿಯನ್, ಮೊಹಮ್ಮದ್​ ಅಜರುದ್ದೀನ್, ಸುಯಶ್​ ಪ್ರಭುದೇಸಾಯಿ, ಕೆ.ಎಸ್.​ಭರತ್​, ಸಚಿನ್​ ಬೇಬಿ, ರಜತ್​ ಪಾಟೀದಾರ್, ಸ್ಕಾಟ್ ಕುಗ್ಗೆಲಿನ್

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನವೇ CSK ತಂಡದ ಬಿಗ್​ ಪ್ಲ್ಯಾನ್..!

ಇದನ್ನೂ ಓದಿ: ದ್ರಾವಿಡ್ ಗರಡಿ ಹುಡುಗರು ಎಡವಿದೆಲ್ಲಿ: ಭಾರತದ ಸೋಲಿಗೆ ಇದುವೇ ಪ್ರಮುಖ ಕಾರಣ..!

(Rcb’s Washington Sundar slated to be ruled out for Ipl 2021 second phase)

Published On - 2:52 pm, Sun, 25 July 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್