AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಲ್ಲಾ ಬೇಡ ಸುಮ್ಮನೆ ಹೋಗಿ ಬೌಲಿಂಗ್ ಮಾಡು! ಕೋಪಿಷ್ಟ ಶ್ರೀಶಾಂತ್​ನನ್ನು ಸಂಭಾಳಿಸುವುದು ಧೋನಿಗೆ ಮಾತ್ರ ಗೊತ್ತಿತ್ತು; ಉತ್ತಪ್ಪ

ಕೂಡಲೇ ಅಲ್ಲಿ ನಿಂತಿರುವ ಆಟಗಾರ ಯಾರು ಎಂಬುದನ್ನು ನೋಡಿದೆ. ನೋಡಿದರೆ ಶ್ರೀಶಾಂತ್ ನಿಂತಿದ್ದರು. ಅದನ್ನು ನೋಡಿದ ನಾನು ಶ್ರೀಶಾಂತ್ ಬಾಲ್ ಹಿಡಿಯಲ್ಲಪ್ಪ ಎಂದು ದೇವರತ್ತ ಪ್ರಾರ್ಥಿಸಲು ಆರಂಭಿಸಿದೆ.

ಇದೆಲ್ಲಾ ಬೇಡ ಸುಮ್ಮನೆ ಹೋಗಿ ಬೌಲಿಂಗ್ ಮಾಡು! ಕೋಪಿಷ್ಟ ಶ್ರೀಶಾಂತ್​ನನ್ನು ಸಂಭಾಳಿಸುವುದು ಧೋನಿಗೆ ಮಾತ್ರ ಗೊತ್ತಿತ್ತು; ಉತ್ತಪ್ಪ
ಮಹೇಂದ್ರ ಸಿಂಗ್ ಧೋನಿ ಮತ್ತು ಶ್ರೀಶಾಂತ್
ಪೃಥ್ವಿಶಂಕರ
|

Updated on: May 21, 2021 | 5:19 PM

Share

ರಾಬಿನ್ ಉತ್ತಪ್ಪ ಅವರು ಭಾರತೀಯ ಕ್ರಿಕೆಟ್ ತಂಡ ಮಹೇಂದ್ರ ಸಿಂಗ್ ಧೋನಿ ಮತ್ತು ಶ್ರೀಶಾಂತ್ ಅವರನ್ನು ಒಳಗೊಂಡ ಆಸಕ್ತಿದಾಯಕ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಧೋನಿ ಶ್ರೀಶಾಂತ್ ಅವರನ್ನು ನಿಭಾಯಿಸುವಲ್ಲಿ ಪಂಟರ್ ಆಗಿದ್ದರೆಂದು ರಾಬಿನ್ ಹೇಳಿದ್ದಾರೆ. ಉತ್ತಪ್ಪ ಈಗ ಬಹಿರಂಗಗೊಳಿಸಿರುವ ಪ್ರಕರಣವು 2007 ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ 20 ಪಂದ್ಯವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಭಾರತ ಟಿ 20 ವಿಶ್ವಕಪ್ ಗೆದ್ದ ಒಂದು ವಾರದ ನಂತರ ಈ ಪಂದ್ಯವನ್ನು ಹೈದರಾಬಾದ್​ನಲ್ಲಿ ಆಡಲಾಯಿತು. ಈ ಪಂದ್ಯವನ್ನು ಭಾರತ ಗೆದ್ದುಕೊಂಡಿತು. ಆ ಪಂದ್ಯದಲ್ಲಿ ಶ್ರೀಶಾಂತ್‌ಗೆ ಬಂದ ಕೋಪವನ್ನು ಧೋನಿ ತಮ್ಮದೇ ಶೈಲಿಯಲ್ಲಿ ಕಡಿಮೆ ಮಾಡಿದ್ದನ್ನು ಉತ್ತಪ್ಪ ವಿವರಿಸಿದ್ದರು.

ಇದೆಲ್ಲಾ ಬೇಡ ಸುಮ್ಮನೆ ಬೌಲಿಂಗ್ ಮಾಡು ರಾಬಿನ್ ಉತ್ತಪ್ಪ ಇದರ ಬಗ್ಗೆ ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಮಾತಾನಾಡಿದ್ದು, ಹೈದರಾಬಾದ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಶ್ರೀಶಾಂತ್ ಬೌಲಿಂಗ್ ವೇಳೆ ನಾನ್ ಸ್ಟ್ರೈಕರ್ ತುದಿಯಲ್ಲಿ ಆ್ಯಂಡ್ರೂ ಸೈಮಂಡ್ಸ್ ಅಥವಾ ಮೈಕ್ ಹಸ್ಸಿ ಇದ್ದರು ಎನಿಸುತ್ತದೆ. ಶ್ರೀಶಾಂತ್ ಬೌಲಿಂಗ್ ಮಾಡಲು ಬಂದರು, ಶ್ರೀಶಾಂತ್ ಬಾಲ್ ಎಸೆಯುವ ಮುನ್ನವೇ ನಾನ್ ಸ್ಟ್ರೈಕ್ ಆಟಗಾರ ಕ್ರೀಜ್ ಬಿಟ್ಟಿದ್ದ ಎನಿಸುತ್ತದೆ. ಕೂಡಲೇ ಶ್ರೀಶಾಂತ್ ಮಂಕಡ್ ರನ್ಔಟ್ ಮಾಡಲು ಯತ್ನಿಸಿ ಅಂಪೈರ್ ಬಳಿ ಔಟ್ ಮನವಿಯನ್ನು ಮಾಡಿದ್ದರು. ಶ್ರೀಶಾಂತ್ ಈ ರೀತಿ ಮಂಕಡ್ ರನ್ಔಟ್ ಮನವಿಯನ್ನು ಮಾಡಿದ ಕೂಡಲೇ ಕೀಪಿಂಗ್ ಮಾಡುತ್ತಿದ್ದ ನಾಯಕ ಧೋನಿ ಕೋಪಿಷ್ಟ ಶ್ರೀಶಾಂತ್ ಅವರನ್ನು ಸಮಾಧಾನ ಮಾಡಿ ಇದೆಲ್ಲಾ ಬೇಡ ಸುಮ್ಮನೆ ಬೌಲಿಂಗ್ ಮಾಡು ಎಂದು ಕಳುಹಿಸಿದ್ದರು, ತದನಂತರ ಯಾರ ಮಾತನ್ನು ಕೇಳದ ಶ್ರೀಶಾಂತ್ ಧೋನಿ ಮಾತನ್ನು ಕೇಳಿ ಸಹಜ ಸ್ಥಿತಿಗೆ ಮರಳಿ ಬೌಲಿಂಗ್ ಮಾಡಿದ್ದರು ಎಂದು ರಾಬಿನ್ ಉತ್ತಪ್ಪ ಹೇಳಿಕೊಂಡಿದ್ದಾರೆ.

ಶ್ರೀಶಾಂತ್ ಬಾಲ್ ಹಿಡಿಯಲ್ಲಪ್ಪ 2007 ರ ಟಿ 20 ವಿಶ್ವಕಪ್ ಬಗ್ಗೆ ಮಾತನಾಡಿದ ಉತ್ತಪ್ಪ ಅಂತಿಮ ಓವರ್​ ಬಗ್ಗೆ ಮಾತಾನಾಡಿದರು. ಕೊನೆಯ ಓವರ್​ ಬೌಲ್ ಮಾಡಿದ ಜೋಂಗಿದರ್ ಶರ್ಮಾ ಎಸೆತವನ್ನು ಮಿಸ್ಬಾ ಉಲ್ ಹಕ್ ಸ್ಕೂಪ್ ಶಾಟ್ ಮಾಡಿದರು. ಬಾಲ್ ಶಾರ್ಟ್​ ಫೈನ್ ಲೆಗ್​ ಕಡೆ ಪುಟಿಯಿತು. ಆ ವೇಳೆ ನಾನು ಲಾಂಗ್ ಆನ್​ನಲ್ಲಿ ನಿಂತಿದ್ದೆ. ಕೂಡಲೇ ಅಲ್ಲಿ ನಿಂತಿರುವ ಆಟಗಾರ ಯಾರು ಎಂಬುದನ್ನು ನೋಡಿದೆ. ನೋಡಿದರೆ ಶ್ರೀಶಾಂತ್ ನಿಂತಿದ್ದರು. ಅದನ್ನು ನೋಡಿದ ನಾನು ಶ್ರೀಶಾಂತ್ ಬಾಲ್ ಹಿಡಿಯಲ್ಲಪ್ಪ ಎಂದು ದೇವರತ್ತ ಪ್ರಾರ್ಥಿಸಲು ಆರಂಭಿಸಿದೆ ಎಂದು ಅಂದು ನಡೆದ ಘಟನೆಯ ಬಗ್ಗೆ ಮೆಲುಕು ಹಾಕಿದ್ದಾರೆ.

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್