AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್

ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್
ರೋಜರ್ ಫೆಡರರ್
ಪೃಥ್ವಿಶಂಕರ
|

Updated on:Dec 28, 2020 | 5:01 PM

Share

ಮೆಲ್ಬೋರ್ನ್: ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

39 ವರ್ಷದ ಫೆಡರರ್ ಈ ವರ್ಷದ ಫೆಬ್ರವರಿಯಿಂದಲೇ ಟೆನಿಸ್ ಕೋರ್ಟ್‌ನಿಂದ ದೂರ ಉಳಿದಿದ್ದರು. ಆದಾಗ್ಯೂ, ಇತ್ತೀಚೆಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಿದ ಫೆಡರರ್, ಆಸ್ಟ್ರೇಲಿಯನ್ ಓಪನ್​ಗಾಗಿ ದುಬೈನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದ್ದರು. ಫೆ.8ರಂದು ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯನ್ ಓಪನ್ ಎಂಟ್ರಿ ಪಟ್ಟಿಯಲ್ಲೂ ಸಹ ಅವರ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ ಈಗ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ.​

ಫೆಡರರ್ ನೀಡಿದ ಕಾರಣ ಮೊಳಕಾಲು ಸರ್ಜರಿಗೆ ಒಳಪಟ್ಟಿರುವ ರೋಜರ್ ಫೆಡರರ್, ವಿಶ್ರಾಂತಿ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

‘ರೋಜರ್ ಫೆಡರರ್ ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಟೆನಿಸ್ ಟೂರ್ನಿಯಿಂದ ದೂರ ಉಳಿದಿರುವುದು ಬೇಸರ ತಂದಿದೆ ಎಂದಿದ್ದಾರೆ. ಫೆಡರರ್ ಹೊರತುಪಡಿಸಿ ಉಳಿದ ಅಗ್ರ ಟೆನಿಸ್ ಆಟಗಾರರು ಆಸ್ಟ್ರೇಲಿಯನ್ ಓಪನ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದು ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಆಯೋಜನಾ ಸಮಿತಿಯ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ.

Published On - 4:58 pm, Mon, 28 December 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ