AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್

ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್
ರೋಜರ್ ಫೆಡರರ್
ಪೃಥ್ವಿಶಂಕರ
|

Updated on:Dec 28, 2020 | 5:01 PM

Share

ಮೆಲ್ಬೋರ್ನ್: ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

39 ವರ್ಷದ ಫೆಡರರ್ ಈ ವರ್ಷದ ಫೆಬ್ರವರಿಯಿಂದಲೇ ಟೆನಿಸ್ ಕೋರ್ಟ್‌ನಿಂದ ದೂರ ಉಳಿದಿದ್ದರು. ಆದಾಗ್ಯೂ, ಇತ್ತೀಚೆಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಿದ ಫೆಡರರ್, ಆಸ್ಟ್ರೇಲಿಯನ್ ಓಪನ್​ಗಾಗಿ ದುಬೈನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದ್ದರು. ಫೆ.8ರಂದು ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯನ್ ಓಪನ್ ಎಂಟ್ರಿ ಪಟ್ಟಿಯಲ್ಲೂ ಸಹ ಅವರ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ ಈಗ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ.​

ಫೆಡರರ್ ನೀಡಿದ ಕಾರಣ ಮೊಳಕಾಲು ಸರ್ಜರಿಗೆ ಒಳಪಟ್ಟಿರುವ ರೋಜರ್ ಫೆಡರರ್, ವಿಶ್ರಾಂತಿ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

‘ರೋಜರ್ ಫೆಡರರ್ ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಟೆನಿಸ್ ಟೂರ್ನಿಯಿಂದ ದೂರ ಉಳಿದಿರುವುದು ಬೇಸರ ತಂದಿದೆ ಎಂದಿದ್ದಾರೆ. ಫೆಡರರ್ ಹೊರತುಪಡಿಸಿ ಉಳಿದ ಅಗ್ರ ಟೆನಿಸ್ ಆಟಗಾರರು ಆಸ್ಟ್ರೇಲಿಯನ್ ಓಪನ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದು ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಆಯೋಜನಾ ಸಮಿತಿಯ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ.

Published On - 4:58 pm, Mon, 28 December 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್