AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್

ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಟೆನಿಸ್ | ಆಸ್ಟ್ರೇಲಿಯನ್ ಓಪನ್​ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್
ರೋಜರ್ ಫೆಡರರ್
ಪೃಥ್ವಿಶಂಕರ
|

Updated on:Dec 28, 2020 | 5:01 PM

Share

ಮೆಲ್ಬೋರ್ನ್: ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

39 ವರ್ಷದ ಫೆಡರರ್ ಈ ವರ್ಷದ ಫೆಬ್ರವರಿಯಿಂದಲೇ ಟೆನಿಸ್ ಕೋರ್ಟ್‌ನಿಂದ ದೂರ ಉಳಿದಿದ್ದರು. ಆದಾಗ್ಯೂ, ಇತ್ತೀಚೆಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಿದ ಫೆಡರರ್, ಆಸ್ಟ್ರೇಲಿಯನ್ ಓಪನ್​ಗಾಗಿ ದುಬೈನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದ್ದರು. ಫೆ.8ರಂದು ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯನ್ ಓಪನ್ ಎಂಟ್ರಿ ಪಟ್ಟಿಯಲ್ಲೂ ಸಹ ಅವರ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ ಈಗ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ.​

ಫೆಡರರ್ ನೀಡಿದ ಕಾರಣ ಮೊಳಕಾಲು ಸರ್ಜರಿಗೆ ಒಳಪಟ್ಟಿರುವ ರೋಜರ್ ಫೆಡರರ್, ವಿಶ್ರಾಂತಿ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

‘ರೋಜರ್ ಫೆಡರರ್ ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಟೆನಿಸ್ ಟೂರ್ನಿಯಿಂದ ದೂರ ಉಳಿದಿರುವುದು ಬೇಸರ ತಂದಿದೆ ಎಂದಿದ್ದಾರೆ. ಫೆಡರರ್ ಹೊರತುಪಡಿಸಿ ಉಳಿದ ಅಗ್ರ ಟೆನಿಸ್ ಆಟಗಾರರು ಆಸ್ಟ್ರೇಲಿಯನ್ ಓಪನ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದು ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಆಯೋಜನಾ ಸಮಿತಿಯ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ.

Published On - 4:58 pm, Mon, 28 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ