AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸಿಸ್ ವಿರುದ್ಧದ T-20 ಹಾಗೂ ಏಕದಿನ ಸರಣಿಗೆ ಆಯ್ಕೆಯಾಗದ ಬಗ್ಗೆ ಮೌನಮುರಿದ ಹಿಟ್​ಮ್ಯಾನ್!

ಬೆಂಗಳೂರಿನ ಎನ್​ಸಿಎನಲ್ಲಿ ತರಬೇತಿ ಪಡೆಯುತ್ತಿರೋ ರೋಹಿತ್ ಶರ್ಮಾ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ವು. ಹಾಗೇ, ಆಸಿಸ್ ಪ್ರವಾಸಕ್ಕೆ ತನ್ನನ್ನ ಆಯ್ಕೆ ಮಾಡದಿರಲು ಕಾರಣವೇನು ಅನ್ನೋದನ್ನ ಹಿಟ್​ಮ್ಯಾನ್ ಬಹಿರಂಗ ಪಡಿಸಿದ್ದಾರೆ. ಟೀಂ ಇಂಡಿಯಾ ಓಪನರ್, ಹಿಟ್​ಮ್ಯಾನ್ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ಧದ ಟಿ-ಟ್ವೆಂಟಿ ಹಾಗೂ ಏಕದಿನ ಸರಣಿಗೆ ಆಯ್ಕೆ ಮಾಡದಿರೋದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ರೋಹಿತ್​ನನ್ನ ಆಸಿಸ್ ಪ್ರವಾಸಕ್ಕೆ ಆಯ್ಕೆ ಮಾಡದ್ದಕ್ಕೆ ಕೆಲ ಮಾಜಿ ಕ್ರಿಕೆಟಿಗರು ಸಹ, ಬಿಸಿಸಿಐ ವಿರುದ್ಧ ಗರಂ ಆಗಿದ್ರು.. ಆದ್ರೀಗ, ಆಸಿಸ್ ವಿರುದ್ಧ […]

ಆಸಿಸ್ ವಿರುದ್ಧದ T-20 ಹಾಗೂ ಏಕದಿನ ಸರಣಿಗೆ ಆಯ್ಕೆಯಾಗದ ಬಗ್ಗೆ ಮೌನಮುರಿದ ಹಿಟ್​ಮ್ಯಾನ್!
ಹಿಟ್​ ಮ್ಯಾನ್​ ರೋಹಿತ್​ ಶರ್ಮಾ ಫಿಟ್​ ಆಗಿದ್ದಾರೆ ಎಂದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಪ್ರಮಾಣ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಬಾರ್ಡರ್​​ ಗವಾಸ್ಕರ್​ ಟ್ರೋಫಿ​ ಆಡೋಕೆ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಆಸ್ಟ್ರೇಲಿಯಾದ ಕೋವಿಡ್​ ನಿಯಮದ ಪ್ರಕಾರ ರೋಹಿತ್​ ಎರಡು ವಾರಗಳ ಕಾಲ ಕ್ವಾರಂಟೈನ್​ ನಲ್ಲಿ ಇರಬೇಕಾಗುತ್ತದೆ. ಈ ಮಧ್ಯೆ ರೋಹಿತ್​ ಫಿಟ್​ ಎನಿಸಿದರೂ ಅವರು ಮೈದಾನಕ್ಕೆ ಇಳಿಯೋದು ಯಾವಾಗ ಅನ್ನೋದು ಖಾತ್ರಿ ಆಗಿಲ್ಲ.
ಪೃಥ್ವಿಶಂಕರ
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Nov 25, 2020 | 3:37 PM

Share

ಬೆಂಗಳೂರಿನ ಎನ್​ಸಿಎನಲ್ಲಿ ತರಬೇತಿ ಪಡೆಯುತ್ತಿರೋ ರೋಹಿತ್ ಶರ್ಮಾ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ವು. ಹಾಗೇ, ಆಸಿಸ್ ಪ್ರವಾಸಕ್ಕೆ ತನ್ನನ್ನ ಆಯ್ಕೆ ಮಾಡದಿರಲು ಕಾರಣವೇನು ಅನ್ನೋದನ್ನ ಹಿಟ್​ಮ್ಯಾನ್ ಬಹಿರಂಗ ಪಡಿಸಿದ್ದಾರೆ.

ಟೀಂ ಇಂಡಿಯಾ ಓಪನರ್, ಹಿಟ್​ಮ್ಯಾನ್ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ಧದ ಟಿ-ಟ್ವೆಂಟಿ ಹಾಗೂ ಏಕದಿನ ಸರಣಿಗೆ ಆಯ್ಕೆ ಮಾಡದಿರೋದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ರೋಹಿತ್​ನನ್ನ ಆಸಿಸ್ ಪ್ರವಾಸಕ್ಕೆ ಆಯ್ಕೆ ಮಾಡದ್ದಕ್ಕೆ ಕೆಲ ಮಾಜಿ ಕ್ರಿಕೆಟಿಗರು ಸಹ, ಬಿಸಿಸಿಐ ವಿರುದ್ಧ ಗರಂ ಆಗಿದ್ರು.. ಆದ್ರೀಗ, ಆಸಿಸ್ ವಿರುದ್ಧ ಸೀಮಿತ ಓವರ್​ಗಳ ಸರಣಿಗೆ ಆಯ್ಕೆಯಾಗದ ಬಗ್ಗೆ ಸ್ವತಃ ರೋಹಿತ್ ಶರ್ಮಾ, ಕಾರಣವನ್ನ ಬಿಚ್ಚಿಟ್ಟಿದ್ದಾರೆ.

ಐಪಿಎಲ್ ಮುಗಿದ ನಂತ್ರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಆಗಮಿಸಿರೋ ರೋಹಿತ್, ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕೋಚಿಂಗ್ ಪಡೆಯುತ್ತಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ, ತನ್ನನ್ನ ಆಸಿಸ್ ಪ್ರವಾಸಕ್ಕೆ ಯಾಕೆ ಆಯ್ಕೆ ಮಾಡಿಲ್ಲ ಅನ್ನೋ ಕಾರಣವನ್ನ ಬಹಿರಂಗ ಪಡಿಸಿದ್ದಾರೆ.

ಪ್ರಾಮಾಣಿಕವಾಗಿ ಹೇಳಬೇಕೆಂದರೆ ಏನು ನಡೆಯುತ್ತಿದೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಸಾಕಷ್ಟು ಜನರು ನಾನು ಆಯ್ಕೆಯಾಗದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅಂದಿನಿಂದ ಇಲ್ಲಿಯವರೆಗೂ ಬಿಸಿಸಿಐ ಹಾಗೂ ಮುಂಬೈ ಇಂಡಿಯನ್ಸ್ ಜತೆ ನಿಯಮಿತವಾಗಿ ಸಂವಹನದಲ್ಲಿದ್ದೇನೆ ಅಂತ ಹಿಟ್​ಮ್ಯಾನ್ ಹೇಳಿದ್ದಾರೆ.

6 ಪಂದ್ಯ ಆಡುವುದು ಕಷ್ಟ..! ‘‘ ಸ್ನಾಯುಸೆಳೆತದಿಂದ ಗುಣಮುಖನಾಗಿದ್ದೇನೆ. ಬಲಿಷ್ಠ ಹಾಗೂ ಫಿಟ್‌ ಆಗುವ ಪ್ರಕ್ರಿಯೆಯಲ್ಲಿ ತೊಡಗಿದ್ದೇನೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವುದಕ್ಕೂ ಮುನ್ನ ನನ್ನ ಮನಸ್ಸಿನಲ್ಲಿ ಸ್ಪಷ್ಟತೆ ಇರಬೇಕು. ಈ ಭಾವನೆ ಇದ್ದಾಗ ಮಾತ್ರ ಪೂರ್ಣ ಪ್ರಮಾಣದ ಮನಸಿನಲ್ಲಿ ಆಡಲು ಸಾಧ್ಯ. ಈ ಕಾರಣದಿಂದಾಗಿ ನಾನು ಎನ್‌ಸಿಎಯಲ್ಲಿದ್ದೇನೆ. ನನ್ನ ಸ್ನಾಯುಸೆಳೆತದ ಗಾಯಕ್ಕೆ ಇನ್ನೂ ಸ್ವಲ್ಪ ಕಾರ್ಯ ನಿರ್ವಹಿಸಬೇಕಾದ ಅಗತ್ಯವಿದೆ. ಕೇವಲ 11 ದಿನಗಳಲ್ಲಿ ಸತತವಾಗಿ 6 ಪಂದ್ಯಗಳನ್ನು ಆಡುವುದು ಕಷ್ಟ.” – ರೋಹಿತ್ ಶರ್ಮಾ, ಟೀಂ ಇಂಡಿಯಾ ಕ್ರಿಕೆಟಿಗ

ಇನ್ನೂ ಗಾಯಗೊಂಡಿದ್ರೂ, ಮುಂಬೈ ಪರ ಪ್ಲೇ ಆಫ್ ಪಂದ್ಯಗಳಲ್ಲಿ ಆಡಿದ್ದ ರೋಹಿತ್, ಬಿಸಿಸಿಐ ಕೆಂಗಣ್ಣಿಗೂ ಗುರಿಯಾಗಿದ್ರು. ಈ ಬಗ್ಗೆ ಪ್ರತಿಕ್ರಿಯಿಸಿರೋ ರೋಹಿತ್, ಚುಟುಕು ಕ್ರಿಕೆಟ್‌ ಆಗಿದ್ದರಿಂದ ಅಂಗಳಕ್ಕೆ ಇಳಿಯುತ್ತೇನೆ. ಎಲ್ಲವನ್ನು ಆರಾಮದಾಯಕವಾಗಿ ನಿರ್ವಹಿಸುತ್ತೇನೆಂದು ಐಪಿಎಲ್‌ ಸಮಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಹೇಳಿದ್ದೆ. ನನ್ನ ಮನಸ್ಸಲ್ಲಿ ಏನಾದರೂ ಅಂದುಕೊಂಡರೆ ಅದನ್ನು ಸ್ಪಷ್ಟವಾಗಿ ಮಾಡುವ ಕಡೆಗೆ ಗಮನ ಕೇಂದ್ರಿಕರಿಸುತ್ತೇನೆ ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ನನ್ನನ್ನು ಆಯ್ಕೆ ಮಾಡದ ಬಗ್ಗೆ ಎಕ್ಸ್, ವೈ ಅಥವಾ ಝಡ್‌ ಏನೇ ಹೇಳಿದರೂ ನಾನು ಅದನ್ನು ಪರಿಗಣಿಸುವುದಿಲ್ಲ. ಗಾಯಕ್ಕೆ ತುತ್ತಾದ ಎರಡು ದಿನಗಳಲ್ಲಿ ಮುಂದಿನ 10 ದಿನಗಳಲ್ಲಿ ನಾನು ಏನು ಮಾಡಬಹುದು ಎಂಬ ಬಗ್ಗೆ ಯೋಚಿಸುತ್ತೇನೆ ಹಾಗೂ ಆಡಬಹುದಾ ಅಥವಾ ಇಲ್ಲವೇ ಎಂಬುದನ್ನು ಅರಿತುಕೊಳ್ಳುತ್ತೇನೆ ಎಂದು ತಿಳಿಸೋದ್ರೊಂದಿಗೆ ರೋಹಿತ್‌ ಶರ್ಮಾ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

Published On - 1:04 pm, Sun, 22 November 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ