AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಭಾರತದ ಧ್ವಜಕ್ಕೆ ರೋಹಿತ್ ಶರ್ಮಾ ಅಗೌರವ: ಹೊಸ ವಿವಾದ ಶುರು

Rohit Sharma: ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದ್ದರು. ಈ ಸಂಭ್ರಮದ ನಡುವೆ ಭಾರತ ತಂಡದ ನಾಯಕ ತ್ರಿವರ್ಣ ಧ್ವಜವನ್ನು ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನೆಡಲು ಯತ್ನಿಸಿದ್ದರು. ಈ ವೇಳೆ ಧ್ವಜವು ನೆಲಕ್ಕೆ ತಾಗಿದೆ. ಇದುವೇ ಈಗ ವಿವಾದಕ್ಕೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Jul 09, 2024 | 11:20 AM

Share
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭಾರತದ ಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಟಿ20 ವಿಶ್ವಕಪ್ ಗೆದ್ದ ಬಳಿಕ ಹಿಟ್​ಮ್ಯಾನ್ ತ್ರಿವರ್ಣ ಧ್ವಜದೊಂದಿಗೆ ಸಂಭ್ರಮಿಸಿದ್ದರು. ಇದೇ ವೇಳೆ ಅವರು ಧ್ವಜವನ್ನು ನೆಡಲು ಪ್ರಯತ್ನಿಸಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭಾರತದ ಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಟಿ20 ವಿಶ್ವಕಪ್ ಗೆದ್ದ ಬಳಿಕ ಹಿಟ್​ಮ್ಯಾನ್ ತ್ರಿವರ್ಣ ಧ್ವಜದೊಂದಿಗೆ ಸಂಭ್ರಮಿಸಿದ್ದರು. ಇದೇ ವೇಳೆ ಅವರು ಧ್ವಜವನ್ನು ನೆಡಲು ಪ್ರಯತ್ನಿಸಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

1 / 5
ಇದೀಗ ಅದೇ ಫೋಟೋವನ್ನು ರೋಹಿತ್ ಶರ್ಮಾ ತಮ್ಮ ಎಕ್ಸ್​ ಖಾತೆಯ ಪ್ರೊಫೈಲ್ ಪಿಕ್ಚರ್ ಆಗಿ ಬಳಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ವಿವಾದ ಶುರುವಾಗಿದ್ದು, ಟೀಮ್ ಇಂಡಿಯಾ ನಾಯಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.

ಇದೀಗ ಅದೇ ಫೋಟೋವನ್ನು ರೋಹಿತ್ ಶರ್ಮಾ ತಮ್ಮ ಎಕ್ಸ್​ ಖಾತೆಯ ಪ್ರೊಫೈಲ್ ಪಿಕ್ಚರ್ ಆಗಿ ಬಳಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ವಿವಾದ ಶುರುವಾಗಿದ್ದು, ಟೀಮ್ ಇಂಡಿಯಾ ನಾಯಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.

2 / 5
ರೋಹಿತ್ ಅವರ ಪ್ರೊಫೈಲ್ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜವು ನೆಲವನ್ನು ಸ್ಪರ್ಶಿಸುತ್ತಿರುವುದು ಕಾಣಬಹುದು. ಇದು ಭಾರತಕ್ಕೆ ಮಾಡಿದ ಅವಮಾನ. ಏಕೆಂದರೆ 1971ರ ರಾಷ್ಟ್ರೀಯ ಗೌರವ ಅವಮಾನಗಳ ತಡೆ ಕಾಯಿದೆಯ ಪ್ರಕಾರ, "ಧ್ವಜವನ್ನು ಉದ್ದೇಶಪೂರ್ವಕವಾಗಿ ನೆಲ ಅಥವಾ ನೀರಿನಲ್ಲಿ ಸ್ಪರ್ಶಿಸುವಂತೆ ಬಳಸುವಂತಿಲ್ಲ" ಎಂದು ಅಭಿಮಾನಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ರೋಹಿತ್ ಅವರ ಪ್ರೊಫೈಲ್ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜವು ನೆಲವನ್ನು ಸ್ಪರ್ಶಿಸುತ್ತಿರುವುದು ಕಾಣಬಹುದು. ಇದು ಭಾರತಕ್ಕೆ ಮಾಡಿದ ಅವಮಾನ. ಏಕೆಂದರೆ 1971ರ ರಾಷ್ಟ್ರೀಯ ಗೌರವ ಅವಮಾನಗಳ ತಡೆ ಕಾಯಿದೆಯ ಪ್ರಕಾರ, "ಧ್ವಜವನ್ನು ಉದ್ದೇಶಪೂರ್ವಕವಾಗಿ ನೆಲ ಅಥವಾ ನೀರಿನಲ್ಲಿ ಸ್ಪರ್ಶಿಸುವಂತೆ ಬಳಸುವಂತಿಲ್ಲ" ಎಂದು ಅಭಿಮಾನಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

3 / 5
ಭಾರತದ ಧ್ವಜವು ನೆಲವನ್ನು ಮುಟ್ಟಬಾರದು ಎಂಬುದು ಸರಳ ಕಾನೂನು! ಇದು ಕೂಡ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ತಿಳಿದಿಲ್ಲವೇ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ರೋಹಿತ್ ಶರ್ಮಾ ಎಚ್ಚರವಹಿಸಬೇಕೆಂದು ಕೆಲವರು ಕಿವಿಮಾತು ಹೇಳಿದ್ದಾರೆ.

ಭಾರತದ ಧ್ವಜವು ನೆಲವನ್ನು ಮುಟ್ಟಬಾರದು ಎಂಬುದು ಸರಳ ಕಾನೂನು! ಇದು ಕೂಡ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ತಿಳಿದಿಲ್ಲವೇ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ರೋಹಿತ್ ಶರ್ಮಾ ಎಚ್ಚರವಹಿಸಬೇಕೆಂದು ಕೆಲವರು ಕಿವಿಮಾತು ಹೇಳಿದ್ದಾರೆ.

4 / 5
ಒಟ್ಟಿನಲ್ಲಿ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ ತ್ರಿವರ್ಣ ಧ್ವಜವು ನೆಲಕ್ಕೆ ತಾಗಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕನ ವಿರುದ್ಧ ಇದೀಗ ಅನೇಕರು ಅಸಮಾಧಾನ ಹೊರಹಾಕಿದ್ದು, ರಾಷ್ಟ್ರ ಧ್ವಜವನ್ನು ಗೌರವಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಕೂಡಲೇ ತಮ್ಮ ಪ್ರೊಫೈಲ್ ಪಿಕ್ಚರ್​ನಿಂದ ಆ ಫೋಟೋವನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ.

ಒಟ್ಟಿನಲ್ಲಿ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ ತ್ರಿವರ್ಣ ಧ್ವಜವು ನೆಲಕ್ಕೆ ತಾಗಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕನ ವಿರುದ್ಧ ಇದೀಗ ಅನೇಕರು ಅಸಮಾಧಾನ ಹೊರಹಾಕಿದ್ದು, ರಾಷ್ಟ್ರ ಧ್ವಜವನ್ನು ಗೌರವಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಕೂಡಲೇ ತಮ್ಮ ಪ್ರೊಫೈಲ್ ಪಿಕ್ಚರ್​ನಿಂದ ಆ ಫೋಟೋವನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ.

5 / 5
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ