AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರೋಹಿತ್ ಆಡದಿರುವುದು ಬ್ರೇಕಿಂಗ್ ನ್ಯೂಸ್ ಎಂದ ಪಾರ್ಥೀವ್ ಪಟೇಲ್

ಶಿಖರ್ ಮೂರನೇ ಆಪ್ಷನ್ ಎಂದು ಖುದ್ದು ಕೊಹ್ಲಿಯೇ ಗುರುವಾರದಂದು ಹೇಳಿದ್ದರು. ಕೊಹ್ಲಿಯ ನಿರ್ಧಾರವನ್ನು ಭಾರತದ ಮಾಜಿ ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಪಾರ್ಥೀವ್ ಪಟೇಲ್ ಬ್ರೇಕಿಂಗ್ ನ್ಯೂಸ್ ಎಂದು ಬಣ್ಣಿಸಿದ್ದಾರೆ.

India vs England: ರೋಹಿತ್ ಆಡದಿರುವುದು ಬ್ರೇಕಿಂಗ್ ನ್ಯೂಸ್ ಎಂದ ಪಾರ್ಥೀವ್ ಪಟೇಲ್
ರೋಹಿತ್ ಶರ್ಮ
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 12, 2021 | 9:41 PM

Share

ಟೀಮ್ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿ ಅಹಮದಾಬಾದನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್​ ಸೋತ ನಂತರ ಆಡಲಿರುವ ಆಟಗಾರರ ಹೆಸರನ್ನು ಪ್ರಕಟಿಸಿದಾಗ ಎಲ್ಲರಿಗೂ ಆಶ್ಚರ್ಯ ಕಾದಿತ್ತು. ಅರಂಭ ಅಟಗಾರ ರೋಹಿತ್ ಶರ್ಮ ಅವರನ್ನು ಮೊದಲಿನ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ ಅಂತ ಅವರು ಹೇಳಿದಾಗ ಮನೆಗಳಲ್ಲಿ ಕೂತು ಟಿವಿ ವೀಕ್ಷಿಸುತ್ತಿದ್ದ ಕ್ರಿಕೆಟ್​ ಪ್ರೇಮಿಗಳಿಗೂ ಶಾಕ್​ ಆಯಿತು. ಯಾಕೆಂದರೆ, ಕಳೆದೆರಡು ದಿಗಳಿಂದ ಅವರು ಭಾರತದ ಇನ್ನಿಂಗ್ಸ್ ರೋಹಿತ್ ಮತ್ತು ಕರ್ನಾಟಕದ ಕೆ ಎಲ್ ರಾಹುಲ್ ಆರಂಭಿಸಲಿದ್ದಾರೆ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಏಕಾಏಕಿ ಅವರು ವಿಶ್ರಾಂತಿ ಅಂತ ಘೋಷಿಸಿದಾಗ ಏನೋ ಎಡಟವಟ್ಟಾಗಿದೆ ಎಂಬ ಭಾವನೆ ಕ್ರಿಕೆಟ್​ ಪ್ರೇಮಿಗಳ ಮನದಲ್ಲಿ ಮೂಡಿದ್ದು ಸುಳ್ಳಲ್ಲ. ರೋಹಿತ್ ಅವರ ಸ್ಥಾನದಲ್ಲಿ ಎಡಚ ಶಿಖರ್ ಧವನ್, ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರು.

ಶಿಖರ್ ಮೂರನೇ ಆಪ್ಷನ್ ಎಂದು ಖುದ್ದು ಕೊಹ್ಲಿಯೇ ಗುರುವಾರದಂದು ಹೇಳಿದ್ದರು. ಕೊಹ್ಲಿಯ ನಿರ್ಧಾರವನ್ನು ಭಾರತದ ಮಾಜಿ ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಪಾರ್ಥೀವ್ ಪಟೇಲ್ ಬ್ರೇಕಿಂಗ್ ನ್ಯೂಸ್ ಎಂದು ಬಣ್ಣಿಸಿದ್ದಾರೆ. ‘ಇಂದಿನ ಪಂದ್ಯದಲ್ಲಿ ರೋಹಿತ್ ಆಡದಿರುವುದು ನಿಜಕ್ಕೂ ಬ್ರೇಕಿಂಗ್ ನ್ಯೂಸ್. ಆದರೆ ಅದು ಶಿಖರ್ ಧವನ್​ಗೆ ಆಡುವ ಅವಕಾಶ ಕಲ್ಪಿಸಿದೆ. ದೇಶೀಯ ಕ್ರಿಕೆಟ್​ನಲ್ಲಿ ಅವರು ಉತ್ತಮ ಪ್ರದರ್ಶನಗಳನ್ನು ನೀಡುತ್ತಿದ್ದಾರೆ,’ ಎಂದು ಕ್ರೀಡಾ ಚ್ಯಾನೆಲೊಂದರ ಜೊತೆ ಮಾತಾಡುತ್ತಾ ಪಟೇಲ್ ಹೇಳಿದರು.

ತಂಡಕ್ಕೆ ರಿಷಬ್ ಪಂತ್ ವಾಪಸ್ಸಾಗಿರುವುದರಿಂದ ರಾಹುಲ್ ಮೇಲೆ ಹೊಣೆಗಾರಿಕೆ ಕಮ್ಮಿಯಾಗಿದೆ. ಅವರು ನಿರಾತಂಕವಾಗಿ ಬ್ಯಾಟ್​ ಮಾಡಬಹುದು ಅಂತ ಮೊನ್ನೆಯಷ್ಟೇ ಎಲ್ಲ ಬಗೆಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಪಟೇಲ್ ಹೇಳಿದರು.

Parthiv Patel

ಪಾರ್ಥೀವ್ ಪಟೇಲ್

‘ಕಳೆದ ಎರಡು ವರ್ಷಗಳಿಂದ ರಾಹುಲ್ ವಿಕೆಟ್​ಕೀಪಿಂಗ್ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ. ಪಂತ್ ಟೀಮಿಗೆ ವಾಪಸ್ಸು ಬಂದಿರುವುದರಿಂದ ರಾಹುಲ್ ಕೇವಲ ಬ್ಯಾಟಿಂಗ್ ಮೇಲೆ ತಮ್ಮ ಗಮನ ಕೇಂದ್ರೀಕರಿಸಿ ಮುಕ್ತವಾಗಿ ಆಡಬಹುದು’ ಎಂದು ಪಟೇಲ್ ಹೇಳಿದರು.

ಟಾಪ್ ಆರ್ಡರ್​ನಲ್ಲಿ ಮಾಡಿದ ಬದಲಾವಣೆಯೊಂದನ್ನು ಬಿಟ್ಟರೆ ಟೀಮ್ ಇಂಡಿಯಾದಲ್ಲಿ ಆಶ್ಚರ್ಯಕರ ಬೆಳವಣಿಗೆಗಳೇನೂ ಇರಲಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಷನ್​ರನ್ನು ಪ್ರಯೋಗಿಸುವ ಬದಲು ಶ್ರೇಯಸ್​ ಅಯ್ಯರ್​ ಅವರನ್ನೇ ಆಡಿಸಲು ನಿರ್ಧರಿಸಲಾಯಿತು.

ಬೌಲಿಂಗ್ ವಿಭಾಗದಲ್ಲಿ ಭಾರತ ಮೂವರು ಸ್ಪಿನ್ನರ್​ಗಳೊಂದಿಗೆ-ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಯುಜ್ವೇಂದ್ರ ಚಹಲ್ ಅವರೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ನಿರ್ಧರಿಸಿತು. ವೇಗದ ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮತ್ತು ಶಾರ್ದುಲ್ ಠಾಕೂರ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ:India vs England: ನಾಲ್ಕನೇ ಕ್ರಮಾಂಕದಲ್ಲಿ 360 ಡಿಗ್ರೀ ಕ್ರಿಕೆಟರ್ ಸೂರ್ಯಕುಮಾರ್ ಯಾದವ್​ರನ್ನು ಆಡಿಸುವುದು ಸೂಕ್ತ: ಬ್ರಾಡ್ ಹಾಗ್

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ