AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರೋಹಿತ್ ಆಡದಿರುವುದು ಬ್ರೇಕಿಂಗ್ ನ್ಯೂಸ್ ಎಂದ ಪಾರ್ಥೀವ್ ಪಟೇಲ್

ಶಿಖರ್ ಮೂರನೇ ಆಪ್ಷನ್ ಎಂದು ಖುದ್ದು ಕೊಹ್ಲಿಯೇ ಗುರುವಾರದಂದು ಹೇಳಿದ್ದರು. ಕೊಹ್ಲಿಯ ನಿರ್ಧಾರವನ್ನು ಭಾರತದ ಮಾಜಿ ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಪಾರ್ಥೀವ್ ಪಟೇಲ್ ಬ್ರೇಕಿಂಗ್ ನ್ಯೂಸ್ ಎಂದು ಬಣ್ಣಿಸಿದ್ದಾರೆ.

India vs England: ರೋಹಿತ್ ಆಡದಿರುವುದು ಬ್ರೇಕಿಂಗ್ ನ್ಯೂಸ್ ಎಂದ ಪಾರ್ಥೀವ್ ಪಟೇಲ್
ರೋಹಿತ್ ಶರ್ಮ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 12, 2021 | 9:41 PM

ಟೀಮ್ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿ ಅಹಮದಾಬಾದನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್​ ಸೋತ ನಂತರ ಆಡಲಿರುವ ಆಟಗಾರರ ಹೆಸರನ್ನು ಪ್ರಕಟಿಸಿದಾಗ ಎಲ್ಲರಿಗೂ ಆಶ್ಚರ್ಯ ಕಾದಿತ್ತು. ಅರಂಭ ಅಟಗಾರ ರೋಹಿತ್ ಶರ್ಮ ಅವರನ್ನು ಮೊದಲಿನ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ ಅಂತ ಅವರು ಹೇಳಿದಾಗ ಮನೆಗಳಲ್ಲಿ ಕೂತು ಟಿವಿ ವೀಕ್ಷಿಸುತ್ತಿದ್ದ ಕ್ರಿಕೆಟ್​ ಪ್ರೇಮಿಗಳಿಗೂ ಶಾಕ್​ ಆಯಿತು. ಯಾಕೆಂದರೆ, ಕಳೆದೆರಡು ದಿಗಳಿಂದ ಅವರು ಭಾರತದ ಇನ್ನಿಂಗ್ಸ್ ರೋಹಿತ್ ಮತ್ತು ಕರ್ನಾಟಕದ ಕೆ ಎಲ್ ರಾಹುಲ್ ಆರಂಭಿಸಲಿದ್ದಾರೆ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಏಕಾಏಕಿ ಅವರು ವಿಶ್ರಾಂತಿ ಅಂತ ಘೋಷಿಸಿದಾಗ ಏನೋ ಎಡಟವಟ್ಟಾಗಿದೆ ಎಂಬ ಭಾವನೆ ಕ್ರಿಕೆಟ್​ ಪ್ರೇಮಿಗಳ ಮನದಲ್ಲಿ ಮೂಡಿದ್ದು ಸುಳ್ಳಲ್ಲ. ರೋಹಿತ್ ಅವರ ಸ್ಥಾನದಲ್ಲಿ ಎಡಚ ಶಿಖರ್ ಧವನ್, ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರು.

ಶಿಖರ್ ಮೂರನೇ ಆಪ್ಷನ್ ಎಂದು ಖುದ್ದು ಕೊಹ್ಲಿಯೇ ಗುರುವಾರದಂದು ಹೇಳಿದ್ದರು. ಕೊಹ್ಲಿಯ ನಿರ್ಧಾರವನ್ನು ಭಾರತದ ಮಾಜಿ ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಪಾರ್ಥೀವ್ ಪಟೇಲ್ ಬ್ರೇಕಿಂಗ್ ನ್ಯೂಸ್ ಎಂದು ಬಣ್ಣಿಸಿದ್ದಾರೆ. ‘ಇಂದಿನ ಪಂದ್ಯದಲ್ಲಿ ರೋಹಿತ್ ಆಡದಿರುವುದು ನಿಜಕ್ಕೂ ಬ್ರೇಕಿಂಗ್ ನ್ಯೂಸ್. ಆದರೆ ಅದು ಶಿಖರ್ ಧವನ್​ಗೆ ಆಡುವ ಅವಕಾಶ ಕಲ್ಪಿಸಿದೆ. ದೇಶೀಯ ಕ್ರಿಕೆಟ್​ನಲ್ಲಿ ಅವರು ಉತ್ತಮ ಪ್ರದರ್ಶನಗಳನ್ನು ನೀಡುತ್ತಿದ್ದಾರೆ,’ ಎಂದು ಕ್ರೀಡಾ ಚ್ಯಾನೆಲೊಂದರ ಜೊತೆ ಮಾತಾಡುತ್ತಾ ಪಟೇಲ್ ಹೇಳಿದರು.

ತಂಡಕ್ಕೆ ರಿಷಬ್ ಪಂತ್ ವಾಪಸ್ಸಾಗಿರುವುದರಿಂದ ರಾಹುಲ್ ಮೇಲೆ ಹೊಣೆಗಾರಿಕೆ ಕಮ್ಮಿಯಾಗಿದೆ. ಅವರು ನಿರಾತಂಕವಾಗಿ ಬ್ಯಾಟ್​ ಮಾಡಬಹುದು ಅಂತ ಮೊನ್ನೆಯಷ್ಟೇ ಎಲ್ಲ ಬಗೆಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಪಟೇಲ್ ಹೇಳಿದರು.

Parthiv Patel

ಪಾರ್ಥೀವ್ ಪಟೇಲ್

‘ಕಳೆದ ಎರಡು ವರ್ಷಗಳಿಂದ ರಾಹುಲ್ ವಿಕೆಟ್​ಕೀಪಿಂಗ್ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ. ಪಂತ್ ಟೀಮಿಗೆ ವಾಪಸ್ಸು ಬಂದಿರುವುದರಿಂದ ರಾಹುಲ್ ಕೇವಲ ಬ್ಯಾಟಿಂಗ್ ಮೇಲೆ ತಮ್ಮ ಗಮನ ಕೇಂದ್ರೀಕರಿಸಿ ಮುಕ್ತವಾಗಿ ಆಡಬಹುದು’ ಎಂದು ಪಟೇಲ್ ಹೇಳಿದರು.

ಟಾಪ್ ಆರ್ಡರ್​ನಲ್ಲಿ ಮಾಡಿದ ಬದಲಾವಣೆಯೊಂದನ್ನು ಬಿಟ್ಟರೆ ಟೀಮ್ ಇಂಡಿಯಾದಲ್ಲಿ ಆಶ್ಚರ್ಯಕರ ಬೆಳವಣಿಗೆಗಳೇನೂ ಇರಲಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಷನ್​ರನ್ನು ಪ್ರಯೋಗಿಸುವ ಬದಲು ಶ್ರೇಯಸ್​ ಅಯ್ಯರ್​ ಅವರನ್ನೇ ಆಡಿಸಲು ನಿರ್ಧರಿಸಲಾಯಿತು.

ಬೌಲಿಂಗ್ ವಿಭಾಗದಲ್ಲಿ ಭಾರತ ಮೂವರು ಸ್ಪಿನ್ನರ್​ಗಳೊಂದಿಗೆ-ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಯುಜ್ವೇಂದ್ರ ಚಹಲ್ ಅವರೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ನಿರ್ಧರಿಸಿತು. ವೇಗದ ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮತ್ತು ಶಾರ್ದುಲ್ ಠಾಕೂರ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ:India vs England: ನಾಲ್ಕನೇ ಕ್ರಮಾಂಕದಲ್ಲಿ 360 ಡಿಗ್ರೀ ಕ್ರಿಕೆಟರ್ ಸೂರ್ಯಕುಮಾರ್ ಯಾದವ್​ರನ್ನು ಆಡಿಸುವುದು ಸೂಕ್ತ: ಬ್ರಾಡ್ ಹಾಗ್

ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ