AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ. ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ […]

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 23, 2020 | 6:13 PM

Share

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ.

ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ 193 ಪಂದ್ಯಗಳಲ್ಲಿ 5.368 ರನ್​ಗಳನ್ನು 33.34 ಸರಾಸರಿಯಲ್ಲಿ ಗಳಿಸಿದ್ದಾರೆ.

ಹಾಗೆಯೇ, ರೋಹಿತ್ ಐಪಿಎಲ್ ಟೂರ್ನಿಯಲ್ಲಿ ಇದುವರೆಗೆ 194 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇನ್ನು 6 ಬಾರಿ ಅವರು ಚೆಂಡನ್ನು ಬೌಂಡರಿ ಗೆರೆ ಮೇಲಿಂದ ಆಚೆ ಕಳಿಸಿದರೆ, 200 ಕ್ಕಿಂತ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿರುವ 4ನೇ ಆಟಗಾರನೆನಿಸಿಕೊಳ್ಳಲಿದ್ದಾರೆ. ಕ್ರಿಸ್ ಗೇಲ್ (326) ಎಬಿ ಡಿ ವಿಲಿಯರ್ಸ್ (214) ಮತ್ತು ಎಮ್ ಎಸ್ ಧೋನಿ (209) ಇನ್ನೂರಕ್ಕಿಂತ ಜಾಸ್ತಿ ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಕ್ಯಾಚ್​ಗಳ ವಿಷಯಕ್ಕೆ ಬಂದರೆ ರೋಹಿತ್ ಇದುವರೆಗೆ 83 ಕ್ಯಾಚ್​ಗಳನ್ನು ಹಿಡಿದು ಮೂರನೇ ಸ್ಥಾನದಲ್ಲಿದ್ದಾರೆ. ಅವರಿಗಿಂತ ಜಾಸ್ತಿ ಕ್ಯಾಚ್​ಗಳನ್ನು ಹಿಡಿದಿರುವವರೆಂದರೆ, ಡಿ ವಿಲಿಯರ್ಸ್ (84) ಮತ್ತು ರೈನಾ (102).

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್