AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ನೆಸ್ ಸಾಬೀತಿಗಾಗಿ NCAಗೆ ಬಂದಿಳಿದ ರೋಹಿತ್.. YO YO ಟೆಸ್ಟ್ ಪಾಸ್​ ಮಾಡ್ತಾರಾ?

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡಕ್ಕೆ ಐದನೇ ಬಾರಿ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಟ್​ಮ್ಯಾನ್ ರೋಹಿತ್ ಶರ್ಮಾ, ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಗಾಯಗೊಂಡಿರೋ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದ್ದಿರುವ ರೋಹಿತ್, ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಃಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಐಪಿಎಲ್ ಟೂರ್ನಿ ವೇಳೆ ಪ್ರಾಕ್ಟೀಸ್ ಮಾಡೋವಾಗ ಹಿಟ್​ಮ್ಯಾನ್ ರೋಹಿತ್, ಸ್ನಾಯು ಸೆಳೆತಕ್ಕೆ ಒಳಗಾಗಿದ್ರು. ಇದ್ರಿಂದ ರೋಹಿತ್ ನಾಲ್ಕು ಪಂದ್ಯಗಳನ್ನ ಮಿಸ್ ಮಾಡಿಕೊಂಡಿದ್ರು. ಆದ್ರೆ, ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದಲ್ಲಿ ರೋಹಿತ್, […]

ಫಿಟ್ನೆಸ್ ಸಾಬೀತಿಗಾಗಿ NCAಗೆ ಬಂದಿಳಿದ ರೋಹಿತ್.. YO YO ಟೆಸ್ಟ್ ಪಾಸ್​ ಮಾಡ್ತಾರಾ?
ಹಿಟ್​ ಮ್ಯಾನ್​ ರೋಹಿತ್​ ಶರ್ಮಾ ಫಿಟ್​ ಆಗಿದ್ದಾರೆ ಎಂದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಪ್ರಮಾಣ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಬಾರ್ಡರ್​​ ಗವಾಸ್ಕರ್​ ಟ್ರೋಫಿ​ ಆಡೋಕೆ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಆಸ್ಟ್ರೇಲಿಯಾದ ಕೋವಿಡ್​ ನಿಯಮದ ಪ್ರಕಾರ ರೋಹಿತ್​ ಎರಡು ವಾರಗಳ ಕಾಲ ಕ್ವಾರಂಟೈನ್​ ನಲ್ಲಿ ಇರಬೇಕಾಗುತ್ತದೆ. ಈ ಮಧ್ಯೆ ರೋಹಿತ್​ ಫಿಟ್​ ಎನಿಸಿದರೂ ಅವರು ಮೈದಾನಕ್ಕೆ ಇಳಿಯೋದು ಯಾವಾಗ ಅನ್ನೋದು ಖಾತ್ರಿ ಆಗಿಲ್ಲ.
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on:Nov 20, 2020 | 4:15 PM

Share

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡಕ್ಕೆ ಐದನೇ ಬಾರಿ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಟ್​ಮ್ಯಾನ್ ರೋಹಿತ್ ಶರ್ಮಾ, ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಗಾಯಗೊಂಡಿರೋ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದ್ದಿರುವ ರೋಹಿತ್, ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಃಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಐಪಿಎಲ್ ಟೂರ್ನಿ ವೇಳೆ ಪ್ರಾಕ್ಟೀಸ್ ಮಾಡೋವಾಗ ಹಿಟ್​ಮ್ಯಾನ್ ರೋಹಿತ್, ಸ್ನಾಯು ಸೆಳೆತಕ್ಕೆ ಒಳಗಾಗಿದ್ರು. ಇದ್ರಿಂದ ರೋಹಿತ್ ನಾಲ್ಕು ಪಂದ್ಯಗಳನ್ನ ಮಿಸ್ ಮಾಡಿಕೊಂಡಿದ್ರು. ಆದ್ರೆ, ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದಲ್ಲಿ ರೋಹಿತ್, ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿದ್ರು. ಅಲ್ಲದೇ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 68ರನ್ ಗಳಿಸೋದ್ರೊಂದಿಗೆ ಮುಂಬೈ ತಂಡವನ್ನ ಚಾಂಪಿಯನ್ ಮಾಡಿದ್ರು.

ಟೆಸ್ಟ್ ಸರಣಿಗೆ ಮಾತ್ರ ರೋಹಿತ್​ರನ್ನ ಆಯ್ಕೆ ಮಾಡಲಾಗಿದೆ.. ಗಾಯಗೊಂಡಿದ್ದ ಕಾರಣದಿಂದಾಗಿ ರೋಹಿತ್​ನನ್ನ ಆಸಿಸ್ ವಿರುದ್ಧದ ಟಿ-ಟ್ವೆಂಟಿ ಮತ್ತು ಏಕದಿನ ಸರಣಿಗೆ ಆಯ್ಕೆ ಮಾಡಿಲ್ಲ. ಆದ್ರೆ, ಕ್ಯಾಪ್ಟನ್ ಕೊಹ್ಲಿ ಟೆಸ್ಟ್ ಸರಣಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗೋ ಹಿನ್ನಲೆ, ರೋಹಿತ್ ಶರ್ಮಾರನ್ನ ಆಯ್ಕೆ ಮಾಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಹೀಗಾಗಿ, ಟೆಸ್ಟ್ ಸರಣಿಗೆ ಮಾತ್ರ ರೋಹಿತ್​ರನ್ನ ಆಯ್ಕೆ ಮಾಡಲಾಗಿದೆ. ಹೀಗಾಗಿ ಸ್ನಾಯುಸೆಳೆತದಿಂದ ಸಂಪೂರ್ಣ ಗುಣಮುಖರಾಗದ ರೋಹಿತ್, NCA ನಲ್ಲಿ ಫಿಟ್ನೆಸ್ ಸಾಬೀತು ಮಾಡಬೇಕಿದೆ.

ಗುರುವಾರ ರೋಹಿತ್ ಶರ್ಮಾ ಬೆಂಗಳೂರಿಗೆ ಬಂದಿಳಿದಿದ್ದು, NCA ಅಧ್ಯಕ್ಷ ರಾಹುಲ್ ದ್ರಾವಿಡ್ ಕೋಚಿಂಗ್​ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಒಂದು ವೇಳೆ ರೋಹಿತ್, ಫಿಟ್ನೆಸ್ ಟೆಸ್ಟ್​ನಲ್ಲಿ ಪಾಸ್ ಆದ್ರೆ, ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಟೀಂ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ, ಬೆಂಗಳೂರಿನ NCAನಲ್ಲಿ ಫಿಟ್ನೆಸ್ ಟೆಸ್ಟ್​ಗೆ ಒಳಗಾಗ್ತಿರೋದು ಇದೇ ಮೊದಲಲ್ಲ. 2018ರಲ್ಲೂ ರೋಹಿತ್ ಎನ್​ಸಿಎನಲ್ಲಿ ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿದ್ರು.

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ NCAನಲ್ಲಿದ್ದಾರೆ.. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರೋಹಿತ್ ಮಾತ್ರವಲ್ಲ, ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಫಿಟ್ ಆಗಿದ್ದಾರೆ. ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡ್ತಿದ್ದ ಇಶಾಂತ್ ಕೂಡ, ಹ್ಯಾಮ್​ಸ್ಟ್ರೀಂಗ್ ಇಂಜುರಿಯಿಂದ ಐಪಿಎಲ್​ನಿಂದ ದೂರವಾಗಿದ್ರು. ಅಲ್ಲದೇ, ಆಸಿಸ್ ಟೆಸ್ಟ್ ಸರಣಿಯಿಂದ ತಂಡದಿಂದ ಹೊರಬಿದ್ದಿದ್ದಾರೆ. ಆದ್ರೀಗ, NCAಗೆ ಆಗಮಿಸಿ ಫಿಟ್ ಆಗಿರೋ ಇಶಾಂತ್, ಆಸಿಸ್ ಫ್ಲೈಟ್ ಹತ್ತೊ ಅವಕಾಶವನ್ನ ಪಡೆದುಕೊಳ್ಳೋ ಸಾಧ್ಯತೆಯಿದೆ.

ಒಟ್ನಲ್ಲಿ ಟೀಂ ಇಂಡಿಯಾ ಆಟಗಾರರ ಪಾಲಿಗೆ ಬೆಂಗಳೂರಿನ NCA ಅಕಾಡೆಮಿ ನಿಜಕ್ಕೂ ಪುನಃಶ್ಚೇತನ ಕೇಂದ್ರ.. ಗಾಯವಾದ್ರೂ ಆಗಲಿ, ಫಾರ್ಮ್ ಕಳೆದುಕೊಂಡ್ರು ಸರಿ.. NCAಗೆ ಆಗಮಿಸಿದ್ರೆ, ಆಟಗಾರರು ಫಿಟ್ ಆಗೋದು ಪಕ್ಕಾ.

Published On - 4:15 pm, Fri, 20 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ