AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ನೆಸ್ ಸಾಬೀತಿಗಾಗಿ NCAಗೆ ಬಂದಿಳಿದ ರೋಹಿತ್.. YO YO ಟೆಸ್ಟ್ ಪಾಸ್​ ಮಾಡ್ತಾರಾ?

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡಕ್ಕೆ ಐದನೇ ಬಾರಿ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಟ್​ಮ್ಯಾನ್ ರೋಹಿತ್ ಶರ್ಮಾ, ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಗಾಯಗೊಂಡಿರೋ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದ್ದಿರುವ ರೋಹಿತ್, ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಃಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಐಪಿಎಲ್ ಟೂರ್ನಿ ವೇಳೆ ಪ್ರಾಕ್ಟೀಸ್ ಮಾಡೋವಾಗ ಹಿಟ್​ಮ್ಯಾನ್ ರೋಹಿತ್, ಸ್ನಾಯು ಸೆಳೆತಕ್ಕೆ ಒಳಗಾಗಿದ್ರು. ಇದ್ರಿಂದ ರೋಹಿತ್ ನಾಲ್ಕು ಪಂದ್ಯಗಳನ್ನ ಮಿಸ್ ಮಾಡಿಕೊಂಡಿದ್ರು. ಆದ್ರೆ, ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದಲ್ಲಿ ರೋಹಿತ್, […]

ಫಿಟ್ನೆಸ್ ಸಾಬೀತಿಗಾಗಿ NCAಗೆ ಬಂದಿಳಿದ ರೋಹಿತ್.. YO YO ಟೆಸ್ಟ್ ಪಾಸ್​ ಮಾಡ್ತಾರಾ?
ಹಿಟ್​ ಮ್ಯಾನ್​ ರೋಹಿತ್​ ಶರ್ಮಾ ಫಿಟ್​ ಆಗಿದ್ದಾರೆ ಎಂದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಪ್ರಮಾಣ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಬಾರ್ಡರ್​​ ಗವಾಸ್ಕರ್​ ಟ್ರೋಫಿ​ ಆಡೋಕೆ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಆಸ್ಟ್ರೇಲಿಯಾದ ಕೋವಿಡ್​ ನಿಯಮದ ಪ್ರಕಾರ ರೋಹಿತ್​ ಎರಡು ವಾರಗಳ ಕಾಲ ಕ್ವಾರಂಟೈನ್​ ನಲ್ಲಿ ಇರಬೇಕಾಗುತ್ತದೆ. ಈ ಮಧ್ಯೆ ರೋಹಿತ್​ ಫಿಟ್​ ಎನಿಸಿದರೂ ಅವರು ಮೈದಾನಕ್ಕೆ ಇಳಿಯೋದು ಯಾವಾಗ ಅನ್ನೋದು ಖಾತ್ರಿ ಆಗಿಲ್ಲ.
ಪೃಥ್ವಿಶಂಕರ
| Edited By: |

Updated on:Nov 20, 2020 | 4:15 PM

Share

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡಕ್ಕೆ ಐದನೇ ಬಾರಿ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಟ್​ಮ್ಯಾನ್ ರೋಹಿತ್ ಶರ್ಮಾ, ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಗಾಯಗೊಂಡಿರೋ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ಹೊರಬಿದ್ದಿರುವ ರೋಹಿತ್, ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಃಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಐಪಿಎಲ್ ಟೂರ್ನಿ ವೇಳೆ ಪ್ರಾಕ್ಟೀಸ್ ಮಾಡೋವಾಗ ಹಿಟ್​ಮ್ಯಾನ್ ರೋಹಿತ್, ಸ್ನಾಯು ಸೆಳೆತಕ್ಕೆ ಒಳಗಾಗಿದ್ರು. ಇದ್ರಿಂದ ರೋಹಿತ್ ನಾಲ್ಕು ಪಂದ್ಯಗಳನ್ನ ಮಿಸ್ ಮಾಡಿಕೊಂಡಿದ್ರು. ಆದ್ರೆ, ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದಲ್ಲಿ ರೋಹಿತ್, ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿದ್ರು. ಅಲ್ಲದೇ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 68ರನ್ ಗಳಿಸೋದ್ರೊಂದಿಗೆ ಮುಂಬೈ ತಂಡವನ್ನ ಚಾಂಪಿಯನ್ ಮಾಡಿದ್ರು.

ಟೆಸ್ಟ್ ಸರಣಿಗೆ ಮಾತ್ರ ರೋಹಿತ್​ರನ್ನ ಆಯ್ಕೆ ಮಾಡಲಾಗಿದೆ.. ಗಾಯಗೊಂಡಿದ್ದ ಕಾರಣದಿಂದಾಗಿ ರೋಹಿತ್​ನನ್ನ ಆಸಿಸ್ ವಿರುದ್ಧದ ಟಿ-ಟ್ವೆಂಟಿ ಮತ್ತು ಏಕದಿನ ಸರಣಿಗೆ ಆಯ್ಕೆ ಮಾಡಿಲ್ಲ. ಆದ್ರೆ, ಕ್ಯಾಪ್ಟನ್ ಕೊಹ್ಲಿ ಟೆಸ್ಟ್ ಸರಣಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗೋ ಹಿನ್ನಲೆ, ರೋಹಿತ್ ಶರ್ಮಾರನ್ನ ಆಯ್ಕೆ ಮಾಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಹೀಗಾಗಿ, ಟೆಸ್ಟ್ ಸರಣಿಗೆ ಮಾತ್ರ ರೋಹಿತ್​ರನ್ನ ಆಯ್ಕೆ ಮಾಡಲಾಗಿದೆ. ಹೀಗಾಗಿ ಸ್ನಾಯುಸೆಳೆತದಿಂದ ಸಂಪೂರ್ಣ ಗುಣಮುಖರಾಗದ ರೋಹಿತ್, NCA ನಲ್ಲಿ ಫಿಟ್ನೆಸ್ ಸಾಬೀತು ಮಾಡಬೇಕಿದೆ.

ಗುರುವಾರ ರೋಹಿತ್ ಶರ್ಮಾ ಬೆಂಗಳೂರಿಗೆ ಬಂದಿಳಿದಿದ್ದು, NCA ಅಧ್ಯಕ್ಷ ರಾಹುಲ್ ದ್ರಾವಿಡ್ ಕೋಚಿಂಗ್​ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಒಂದು ವೇಳೆ ರೋಹಿತ್, ಫಿಟ್ನೆಸ್ ಟೆಸ್ಟ್​ನಲ್ಲಿ ಪಾಸ್ ಆದ್ರೆ, ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಟೀಂ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ, ಬೆಂಗಳೂರಿನ NCAನಲ್ಲಿ ಫಿಟ್ನೆಸ್ ಟೆಸ್ಟ್​ಗೆ ಒಳಗಾಗ್ತಿರೋದು ಇದೇ ಮೊದಲಲ್ಲ. 2018ರಲ್ಲೂ ರೋಹಿತ್ ಎನ್​ಸಿಎನಲ್ಲಿ ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿದ್ರು.

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ NCAನಲ್ಲಿದ್ದಾರೆ.. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರೋಹಿತ್ ಮಾತ್ರವಲ್ಲ, ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಫಿಟ್ ಆಗಿದ್ದಾರೆ. ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡ್ತಿದ್ದ ಇಶಾಂತ್ ಕೂಡ, ಹ್ಯಾಮ್​ಸ್ಟ್ರೀಂಗ್ ಇಂಜುರಿಯಿಂದ ಐಪಿಎಲ್​ನಿಂದ ದೂರವಾಗಿದ್ರು. ಅಲ್ಲದೇ, ಆಸಿಸ್ ಟೆಸ್ಟ್ ಸರಣಿಯಿಂದ ತಂಡದಿಂದ ಹೊರಬಿದ್ದಿದ್ದಾರೆ. ಆದ್ರೀಗ, NCAಗೆ ಆಗಮಿಸಿ ಫಿಟ್ ಆಗಿರೋ ಇಶಾಂತ್, ಆಸಿಸ್ ಫ್ಲೈಟ್ ಹತ್ತೊ ಅವಕಾಶವನ್ನ ಪಡೆದುಕೊಳ್ಳೋ ಸಾಧ್ಯತೆಯಿದೆ.

ಒಟ್ನಲ್ಲಿ ಟೀಂ ಇಂಡಿಯಾ ಆಟಗಾರರ ಪಾಲಿಗೆ ಬೆಂಗಳೂರಿನ NCA ಅಕಾಡೆಮಿ ನಿಜಕ್ಕೂ ಪುನಃಶ್ಚೇತನ ಕೇಂದ್ರ.. ಗಾಯವಾದ್ರೂ ಆಗಲಿ, ಫಾರ್ಮ್ ಕಳೆದುಕೊಂಡ್ರು ಸರಿ.. NCAಗೆ ಆಗಮಿಸಿದ್ರೆ, ಆಟಗಾರರು ಫಿಟ್ ಆಗೋದು ಪಕ್ಕಾ.

Published On - 4:15 pm, Fri, 20 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ