AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction: RCB ಖರೀದಿಸಿದ 7 ಆಟಗಾರರು ಇವರೇ..

Royal Challengers Bangalore: ಈ ಬಾರಿ ಆರ್​ಸಿಬಿ ಆಲ್​ರೌಂಡರ್​ಗಳ ಮೇಲೆ ಹೆಚ್ಚು ಒತ್ತು ನೀಡಿದೆ. ಹಾಗಾದರೆ, ಆರ್​ಸಿಬಿ ಸೇರಿದ ಆಟಗಾರರು ಯಾರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

IPL 2021 Auction: RCB ಖರೀದಿಸಿದ 7 ಆಟಗಾರರು ಇವರೇ..
ಸಂಗ್ರಹ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 18, 2021 | 9:03 PM

Share

35.90 ಕೋಟಿ ರೂಪಾಯಿಯನ್ನು ಕೈಲಿಟ್ಟುಕೊಂಡು ಹರಾಜಿಗೆ ಇಳಿದಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಘಟಾನುಘಟಿ ಆಟಗಾರರನ್ನು ಖರೀದಿಸಿದೆ. ಇದರ ಜತೆಗೆ, ಹೊಸ ಆಟಗಾರರಿಗೂ ಆದ್ಯತೆ ನೀಡಿದೆ. ಐಪಿಎಲ್​ ಹರಾಜು ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಆರ್​ಸಿಬಿ ಕೂಡ ಕೆಲ ಆಟಗಾರರನ್ನು ಖರೀದಿಸಿದೆ. ಈ ಬಾರಿ ಆರ್​ಸಿಬಿ ಆಲ್​ರೌಂಡರ್​ಗಳ ಮೇಲೆ ಹೆಚ್ಚು ಒತ್ತು ನೀಡಿದೆ. ಹಾಗಾದರೆ, ಆರ್​ಸಿಬಿ ಸೇರಿದ ಆಟಗಾರರು ಯಾರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಗ್ಲೆನ್​ ಮ್ಯಾಕ್ಸ್​ವೆಲ್: ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಯಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ ಭಾರೀ ಬೇಡಿಕೆ ವ್ಯಕ್ತವಾಗಿದೆ. ಗ್ಲೆನ್​ ಮ್ಯಾಕ್ಸ್​ವೆಲ್​ ಮೂಲ ಬೆಲೆ 2 ಕೋಟಿ ರೂಪಾಯಿ ಇತ್ತು. ಇವರನ್ನು ಖರೀದಿ ಮಾಡಲು ಚೆನ್ನೈ ಹಾಗೂ ಬೆಂಗಳೂರು ನಡುವೆ ಭಾರೀ ಕಾಂಪಿಟೇಷನ್​ ಇತ್ತು. ಕೊನೆಗೆ, 14.25 ಕೋಟಿ ರೂಪಾಯಿಗೆ ರಾಯಲ್​ ಚಾಲೆಂಜರ್ಸ್​ ತಂಡದ ಪಾಲಾಗಿದ್ದಾರೆ. ಇವರು ಆಲ್​ರೌಂಡರ್​ ಎನ್ನುವ ಕಾರಣಕ್ಕೆ ಆರ್​ಸಿಬಿ ಇವರನ್ನು ಖರೀದಿಸಿದೆ.

ಕೈಲ್‌ ಜೇಮಿಸ್ಸನ್: ನ್ಯೂಜಿಲೆಂಡ್​ನ ಕೈಲ್‌ ಜೇಮಿಸ್ಸನ್ ಅವರನ್ನು 15 ಕೋಟಿ ರೂಪಾಯಿಗೆ ಆರ್​ಸಿಬಿ ಖರೀದಿಸಿದೆ. ಪಂಜಾಬ್ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ತಂಡದ ನಡುವೆ ಬಿಡ್ಡಿಂಗ್‌ ವಾರ್‌ ನಡೆಸಿದ ಆರ್‌ಸಿಬಿ ಭಾರಿ ಪೈಪೋಟಿ ಕೊಟ್ಟು ‌ಕೈಲ್‌ ಜೇಮಿಸ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಡ್ಯಾನಿಯಲ್​ ಕ್ರಿಶ್ಚಿಯನ್: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 4.80 ಕೋಟಿ ರೂಪಾಯಿ ನೀಡಿ ಡ್ಯಾನಿಯಲ್​ ಕ್ರಿಶ್ಚಿಯನ್​ ಅವರನ್ನು ಖರೀದಿಸಿದೆ ಕೊಲ್ಕತ್ತಾ ಹಾಗೂ ಬೆಂಗಳೂರು ತಂಡ ಡ್ಯಾನಿಯಲ್​ ಅವರಿಗಾಗಿ ಸೆಣಸಾಟ ನಡೆಸಿದ್ದವು. ಆದರೆ ಅಂತಿಮವಾಗಿ ಡ್ಯಾನಿಯಲ್​ ಕ್ರಿಶ್ಚಿಯನ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಪಾಲಾದರು.

ಮೊಹಮ್ಮದ್​ ಅಜರುದ್ದೀನ್​: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ವಿರುದ್ಧ 137 ರನ್​ ಸಿಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದವರು ಕೇರಳದ ಮೊಹಮ್ಮದ್ ಅಜರುದ್ದೀನ್​. ಮಧ್ಯಮ ಕ್ರಮಾಂಕದಲ್ಲಿ ಆಡುವ ಚಾಕಚಕ್ಯತೆ ಮೊಹಮ್ಮದ್ ಅಜರುದ್ದೀನ್​ಗೆ ಇದೆ. ಹೀಗಾಗಿ, ಸಂಕಷ್ಟದ ಸಮಯದಲ್ಲಿ ಆಟದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಮೊಹಮ್ಮದ್​ಗೆ ಇದೆ. ಇವರನ್ನು ಆರ್​ಸಿಬಿ 20 ಲಕ್ಷ ರೂಪಾಯಿಗೆ ಕೊಂಡುಕೊಂಡಿದೆ.

ಸುಯಶ್​ ಪ್ರಭುದೇಸಾಯಿ: 1997ರಲ್ಲಿ ಜನಿಸಿದ ಸುಯಶ್​ ಪ್ರಭುದೇಸಾಯಿ 2017ರಲ್ಲಿ ವಿಜಯ್​ ಹಜಾರೆ ಟ್ರೋಫಿಯಲ್ಲಿ ಗೋವಾ ಪರವಾಗಿ ಆಡಿದ್ದರು. 2018-19ರಲ್ಲಿ ರಣಜಿ ಟ್ರೋಫಿ ಆಡಿದ್ದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಪಾದಾರ್ಪಣೆ ಮಾಡಿದ್ದರು. ಇಂಡು ನಡೆದ ಹರಾಜಿನಲ್ಲಿ, ಪ್ರಭುದೇಸಾಯಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಲಕ್ಷ ರೂಪಾಯಿಗೆ ಖರೀದಿಸಿತು.

ಕೆ.ಎಸ್.​ಭರತ್​: ಆಂಧ್ರ ಪ್ರದೇಶ ಕ್ರಿಕೆಟ್​ ತಂಡವನ್ನು ಪ್ರತಿನಿಧಿಸುತ್ತಿರುವ ಕೆ.ಎಸ್​. ಭರತ್​ ಅವರನ್ನು ಆರ್​ಸಿಬಿ ಖರೀದಿಸಿದೆ. ರಣಜಿ ಟ್ರೋಫಿಯಲ್ಲಿ ತ್ರಿಶತಕ ಬಾರಿಸಿದ ಖ್ಯಾತಿ ಇವರಿಗಿದೆ. ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಭಾರತದ ಸ್ಟ್ಯಾಂಡ್​ ಬೈ ಆಟಗಾರರಾಗಿ ಕೆ.ಎಸ್.​ ಭರತ್ ಆಯ್ಕೆಯಾಗಿದ್ದಾರೆ.

ಸಚಿನ್​ ಬೇಬಿ: ಸಚಿನ್​ ಬೇಬಿ ಅವರನ್ನು 20 ಲಕ್ಷ ರೂಪಾಯಿಗೆ ಆರ್​ಸಿಬಿ ಖರೀದಿಸಿದೆ. ವಿವಿಧ ಟೂರ್ನಿಗಳಲ್ಲಿ ಕೇರಳ ತಂಡದ ಪರವಾಗಿ​ ಆಡುತ್ತಿರುವ ಇವರು ಉತ್ತಮ ದಾಖಲೆ ಹೊಂದಿದ್ದಾರೆ. ರಾಜಸ್ಥಾನ್​ ರಾಯಲ್ಸ್​ 2013ರಲ್ಲಿ ಇವರನ್ನು ಖರೀದಿ ಮಾಡಿತ್ತು. ಆದರೆ, ಒಂದು ಪಂದ್ಯ ಆಡಲು ಮಾತ್ರ ಅವಕಾಶ ಸಿಕ್ಕಿತ್ತು. 2016ರಲ್ಲಿ ಆರ್​ಸಿಬಿ ಇವರನ್ನು ಖರೀದಿಸಿತ್ತು. 2018ರಲ್ಲಿ ಹೈದರಾಬಾದ್​ ಖರೀದಿಸಿದರೆ, ಈ ವರ್ಷ ಮತ್ತೆ ಆರ್​ಸಿಬಿ ಇವರನ್ನು ಪಡೆದುಕೊಂಡಿದೆ.

ಇದನ್ನೂ ಓದಿ: IPL Auction 2021; RCB 2 ಆಟಗಾರರಿಗೆ ಖರ್ಚು ಮಾಡಿದ್ದು ಬರೋಬ್ಬರಿ 30 ಕೋಟಿ ರೂಪಾಯಿ!

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ