AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021; RCB ಸೇರಿದ ಈ ನಾಲ್ಕು ಹೊಸ ಆಟಗಾರರ ಪರಿಚಯ ನಿಮಗಿದೆಯೇ?

ಯುವ ಆಟಗಾರ ಹಾಗೂ ಕನ್ನಡಿಗ ದೇವದತ್​ ಪಡಿಕ್ಕಲ್​ ಓಪನರ್​ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಆರ್​ಸಿಬಿ ಈ ಬಾರಿ ನಾಲ್ಕು ಹೊಸ ಆಟಗಾರರನ್ನು ಖರೀದಿಸಿದೆ.

IPL Auction 2021; RCB ಸೇರಿದ ಈ ನಾಲ್ಕು ಹೊಸ ಆಟಗಾರರ ಪರಿಚಯ ನಿಮಗಿದೆಯೇ?
ಆರ್​ಸಿಬಿ ಲೋಗೋ
ರಾಜೇಶ್ ದುಗ್ಗುಮನೆ
|

Updated on: Feb 18, 2021 | 9:28 PM

Share

ಐಪಿಎಲ್​​ 2021ರ ಹರಾಜಿನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಒಟ್ಟು 7 ಆಟಗಾರರನ್ನು ಖರೀದಿಸಿದೆ. ಮೂರು ಅನುಭವಿ ಆಟಗಾರರು ಇದರಲ್ಲಿದ್ದರೆ, ನಾಲ್ಕು ಹೊಸ ಮುಖಗಗಳನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಯುವ ಆಟಗಾರ ಹಾಗೂ ಕನ್ನಡಿಗ ದೇವದತ್​ ಪಡಿಕ್ಕಲ್​ ಓಪನರ್​ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಆರ್​ಸಿಬಿ ಈ ಬಾರಿ ನಾಲ್ಕು ಹೊಸ ಆಟಗಾರರನ್ನು ಖರೀದಿಸಿದೆ. ಇವರ ಪರಿಚಯ ನಿಮ್ಮ ಮುಂದೆ. 

ಮೊಹಮ್ಮದ್​ ಅಜರುದ್ದೀನ್​: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ವಿರುದ್ಧ 137 ರನ್​ ಸಿಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದವರು ಕೇರಳದ ಮೊಹಮ್ಮದ್ ಅಜರುದ್ದೀನ್​. ಮಧ್ಯಮ ಕ್ರಮಾಂಕದಲ್ಲಿ ಆಡುವ ಚಾಕಚಕ್ಯತೆ ಮೊಹಮ್ಮದ್ ಅಜರುದ್ದೀನ್​ಗೆ ಇದೆ. ಹೀಗಾಗಿ, ಸಂಕಷ್ಟದ ಸಮಯದಲ್ಲಿ ಆಟದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಮೊಹಮ್ಮದ್​ಗೆ ಇದೆ. ಇವರನ್ನು ಆರ್​ಸಿಬಿ 20 ಲಕ್ಷ ರೂಪಾಯಿಗೆ ಕೊಂಡುಕೊಂಡಿದೆ.

ಸುಯಶ್​ ಪ್ರಭುದೇಸಾಯಿ: 1997ರಲ್ಲಿ ಜನಿಸಿದ ಸುಯಶ್​ ಪ್ರಭುದೇಸಾಯಿ 2017ರಲ್ಲಿ ವಿಜಯ್​ ಹಜಾರೆ ಟ್ರೋಫಿಯಲ್ಲಿ ಗೋವಾ ಪರವಾಗಿ ಆಡಿದ್ದರು. 2018-19ರಲ್ಲಿ ರಣಜಿ ಟ್ರೋಫಿ ಆಡಿದ್ದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಪಾದಾರ್ಪಣೆ ಮಾಡಿದ್ದರು. ಇಂಡು ನಡೆದ ಹರಾಜಿನಲ್ಲಿ, ಪ್ರಭುದೇಸಾಯಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಲಕ್ಷ ರೂಪಾಯಿಗೆ ಖರೀದಿಸಿತು.

ಕೆ.ಎಸ್.​ಭರತ್​: ಆಂಧ್ರ ಪ್ರದೇಶ ಕ್ರಿಕೆಟ್​ ತಂಡವನ್ನು ಪ್ರತಿನಿಧಿಸುತ್ತಿರುವ ಕೆ.ಎಸ್​. ಭರತ್​ ಅವರನ್ನು ಆರ್​ಸಿಬಿ ಖರೀದಿಸಿದೆ. ರಣಜಿ ಟ್ರೋಫಿಯಲ್ಲಿ ತ್ರಿಶತಕ ಬಾರಿಸಿದ ಖ್ಯಾತಿ ಇವರಿಗಿದೆ. ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೆ ಭಾರತದ ಸ್ಟ್ಯಾಂಡ್​ ಬೈ ಆಟಗಾರರಾಗಿ ಕೆ.ಎಸ್.​ ಭರತ್ ಆಯ್ಕೆಯಾಗಿದ್ದಾರೆ.

ಸಚಿನ್​ ಬೇಬಿ: ಸಚಿನ್​ ಬೇಬಿ ಅವರನ್ನು 20 ಲಕ್ಷ ರೂಪಾಯಿಗೆ ಆರ್​ಸಿಬಿ ಖರೀದಿಸಿದೆ. ವಿವಿಧ ಟೂರ್ನಿಗಳಲ್ಲಿ ಕೇರಳ ತಂಡದ ಪರವಾಗಿ​ ಆಡುತ್ತಿರುವ ಇವರು ಉತ್ತಮ ದಾಖಲೆ ಹೊಂದಿದ್ದಾರೆ. ರಾಜಸ್ಥಾನ್​ ರಾಯಲ್ಸ್​ 2013ರಲ್ಲಿ ಇವರನ್ನು ಖರೀದಿ ಮಾಡಿತ್ತು. ಆದರೆ, ಒಂದು ಪಂದ್ಯ ಆಡಲು ಮಾತ್ರ ಅವಕಾಶ ಸಿಕ್ಕಿತ್ತು. 2016ರಲ್ಲಿ ಆರ್​ಸಿಬಿ ಇವರನ್ನು ಖರೀದಿಸಿತ್ತು. 2018ರಲ್ಲಿ ಹೈದರಾಬಾದ್​ ಖರೀದಿಸಿದರೆ, ಈ ವರ್ಷ ಮತ್ತೆ ಆರ್​ಸಿಬಿ ಇವರನ್ನು ಪಡೆದುಕೊಂಡಿದೆ.

ಇದನ್ನೂ ಓದಿ: IPL 2021 Auction: RCB ಖರೀದಿಸಿದ 7 ಆಟಗಾರರು ಇವರೇ..

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ