AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021; RCB 2 ಆಟಗಾರರಿಗೆ ಖರ್ಚು ಮಾಡಿದ್ದು ಬರೋಬ್ಬರಿ 30 ಕೋಟಿ ರೂಪಾಯಿ!

Royal Challengers Bangalore: ಕಳೆದ ಬಾರಿ ಪಂಜಾಬ್​ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್​ವೆಲ್​ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ.

IPL Auction 2021; RCB 2 ಆಟಗಾರರಿಗೆ ಖರ್ಚು ಮಾಡಿದ್ದು ಬರೋಬ್ಬರಿ 30 ಕೋಟಿ ರೂಪಾಯಿ!
ಗ್ಲೆನ್​ ಮ್ಯಾಕ್ಸ್​ವೆಲ್​ - ಕೈಲ್‌ ಜೇಮಿಸ್ಸನ್
ರಾಜೇಶ್ ದುಗ್ಗುಮನೆ
| Edited By: |

Updated on:Feb 18, 2021 | 7:48 PM

Share

ಇಂದಿನ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಎಲ್ಲಾ ತಂಡಗಳು ತಮ್ಮ ತಂಡಕ್ಕೆ ಸೂಕ್ತ ಎನಿಸಿಕೊಳ್ಳುವಂಥ ಆಟಗಾರರನ್ನು ತೆಗೆದುಕೊಳ್ಳುತ್ತಿದೆ. ಕೆಲ ಆಟಗಾರರು ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಮೊತ್ತಕ್ಕೆ ಹರಾಜಾಗಿದ್ದಾರೆ. ಇನ್ನೂ ಕೆಲ ಆಟಗಾರರು ಹರಾಜಾಗದೆ ಹೊರಗೆ ಉಳಿದಿದ್ದಾರೆ. ಇನ್ನು, ಆರ್​ಸಿಬಿ ಸದ್ಯ, 2 ಆಟಗಾರರನ್ನು ಮಾತ್ರ ಖರೀದಿ ಮಾಡಿದೆ. ಆದರೆ, ಈ ಇಬ್ಬರು ಆಟಗಾರರಿಗೆ ಬೆಂಗಳೂರು ತಂಡ ಖರ್ಚು ಮಾಡಿದ್ದು ಸರಿಸುಮಾರು 30 ಕೋಟಿ ರೂಪಾಯಿ.

ಆರ್​ಸಿಬಿ ಜೇಬಿನಲ್ಲಿ ಈ ಬಾರಿ 35.90 ಕೋಟಿ ರೂಪಾಯಿ ಇದೆ. ಆದರೆ, ಎರಡೇ ಆಟಗಾರರಿಗೆ ದೊಡ್ಡ ಮೊತ್ತದ ಹಣವನ್ನು ಆರ್​ಸಿಬಿ ಖರ್ಚು ಮಾಡಿದೆ. ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಯಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ಗ್ಲೆನ್​ ಮ್ಯಾಕ್ಸ್​ವೆಲ್​ ಮೂಲ ಬೆಲೆ 2 ಕೋಟಿ ರೂಪಾಯಿ ಇತ್ತು. ಇವರನ್ನು ಖರೀದಿ ಮಾಡಲು ಚೆನ್ನೈ ಹಾಗೂ ಬೆಂಗಳೂರು ನಡುವೆ ಭಾರೀ ಕಾಂಪಿಟೇಷನ್​ ಇತ್ತು. ಕೊನೆಗೆ, 14.25 ಕೋಟಿ ರೂಪಾಯಿಗೆ ರಾಯಲ್​ ಚಾಲೆಂಜರ್ಸ್​ ತಂಡದ ಪಾಲಾಗಿದ್ದಾರೆ.

ಕಳೆದ ಬಾರಿ ಪಂಜಾಬ್​ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್​ವೆಲ್​ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ. ಸ್ವತಃ ಮ್ಯಾಕ್ಸ್​ವೆಲ್​​ ಆರ್​ಸಿಬಿ ತಂಡದ ಪರ ಆಡುವ ಆಸೆ ವ್ಯಕ್ತಪಡಿಸಿದ್ದರಿಂದ ಅವರನ್ನು ಬೆಂಗಳೂರು ತಂಡ ಖರೀದಿಸಬಹುದು ಎಂಬ ಮಾತುಗಳು ಹರಿದಾಡುತ್ತಿದ್ದವು. ಕಳೆದ ಬಾರಿ 10.75 ಕೋಟಿಗೆ ಪಂಜಾಬ್​ ತಂಡದ ಪಾಲಾಗಿದ್ದರು.

ಇನ್ನು, ನ್ಯೂಜಿಲೆಂಡ್​ನ ಕೈಲ್‌ ಜೇಮಿಸ್ಸನ್ ಅವರನ್ನು 15 ಕೋಟಿ ರೂಪಾಯಿಗೆ ಆರ್​ಸಿಬಿ ಖರೀದಿಸಿದೆ. ಪಂಜಾಬ್ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ತಂಡದ ನಡುವೆ ಬಿಡ್ಡಿಂಗ್‌ ವಾರ್‌ ನಡೆಸಿದ ಆರ್‌ಸಿಬಿ ಭಾರಿ ಪೈಪೋಟಿ ಕೊಟ್ಟು ‌ಕೈಲ್‌ ಜೇಮಿಸ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

Published On - 7:24 pm, Thu, 18 February 21

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ