AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021; RCB 2 ಆಟಗಾರರಿಗೆ ಖರ್ಚು ಮಾಡಿದ್ದು ಬರೋಬ್ಬರಿ 30 ಕೋಟಿ ರೂಪಾಯಿ!

Royal Challengers Bangalore: ಕಳೆದ ಬಾರಿ ಪಂಜಾಬ್​ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್​ವೆಲ್​ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ.

IPL Auction 2021; RCB 2 ಆಟಗಾರರಿಗೆ ಖರ್ಚು ಮಾಡಿದ್ದು ಬರೋಬ್ಬರಿ 30 ಕೋಟಿ ರೂಪಾಯಿ!
ಗ್ಲೆನ್​ ಮ್ಯಾಕ್ಸ್​ವೆಲ್​ - ಕೈಲ್‌ ಜೇಮಿಸ್ಸನ್
ರಾಜೇಶ್ ದುಗ್ಗುಮನೆ
| Edited By: |

Updated on:Feb 18, 2021 | 7:48 PM

Share

ಇಂದಿನ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಎಲ್ಲಾ ತಂಡಗಳು ತಮ್ಮ ತಂಡಕ್ಕೆ ಸೂಕ್ತ ಎನಿಸಿಕೊಳ್ಳುವಂಥ ಆಟಗಾರರನ್ನು ತೆಗೆದುಕೊಳ್ಳುತ್ತಿದೆ. ಕೆಲ ಆಟಗಾರರು ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಮೊತ್ತಕ್ಕೆ ಹರಾಜಾಗಿದ್ದಾರೆ. ಇನ್ನೂ ಕೆಲ ಆಟಗಾರರು ಹರಾಜಾಗದೆ ಹೊರಗೆ ಉಳಿದಿದ್ದಾರೆ. ಇನ್ನು, ಆರ್​ಸಿಬಿ ಸದ್ಯ, 2 ಆಟಗಾರರನ್ನು ಮಾತ್ರ ಖರೀದಿ ಮಾಡಿದೆ. ಆದರೆ, ಈ ಇಬ್ಬರು ಆಟಗಾರರಿಗೆ ಬೆಂಗಳೂರು ತಂಡ ಖರ್ಚು ಮಾಡಿದ್ದು ಸರಿಸುಮಾರು 30 ಕೋಟಿ ರೂಪಾಯಿ.

ಆರ್​ಸಿಬಿ ಜೇಬಿನಲ್ಲಿ ಈ ಬಾರಿ 35.90 ಕೋಟಿ ರೂಪಾಯಿ ಇದೆ. ಆದರೆ, ಎರಡೇ ಆಟಗಾರರಿಗೆ ದೊಡ್ಡ ಮೊತ್ತದ ಹಣವನ್ನು ಆರ್​ಸಿಬಿ ಖರ್ಚು ಮಾಡಿದೆ. ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಯಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ಗ್ಲೆನ್​ ಮ್ಯಾಕ್ಸ್​ವೆಲ್​ ಮೂಲ ಬೆಲೆ 2 ಕೋಟಿ ರೂಪಾಯಿ ಇತ್ತು. ಇವರನ್ನು ಖರೀದಿ ಮಾಡಲು ಚೆನ್ನೈ ಹಾಗೂ ಬೆಂಗಳೂರು ನಡುವೆ ಭಾರೀ ಕಾಂಪಿಟೇಷನ್​ ಇತ್ತು. ಕೊನೆಗೆ, 14.25 ಕೋಟಿ ರೂಪಾಯಿಗೆ ರಾಯಲ್​ ಚಾಲೆಂಜರ್ಸ್​ ತಂಡದ ಪಾಲಾಗಿದ್ದಾರೆ.

ಕಳೆದ ಬಾರಿ ಪಂಜಾಬ್​ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್​ವೆಲ್​ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ. ಸ್ವತಃ ಮ್ಯಾಕ್ಸ್​ವೆಲ್​​ ಆರ್​ಸಿಬಿ ತಂಡದ ಪರ ಆಡುವ ಆಸೆ ವ್ಯಕ್ತಪಡಿಸಿದ್ದರಿಂದ ಅವರನ್ನು ಬೆಂಗಳೂರು ತಂಡ ಖರೀದಿಸಬಹುದು ಎಂಬ ಮಾತುಗಳು ಹರಿದಾಡುತ್ತಿದ್ದವು. ಕಳೆದ ಬಾರಿ 10.75 ಕೋಟಿಗೆ ಪಂಜಾಬ್​ ತಂಡದ ಪಾಲಾಗಿದ್ದರು.

ಇನ್ನು, ನ್ಯೂಜಿಲೆಂಡ್​ನ ಕೈಲ್‌ ಜೇಮಿಸ್ಸನ್ ಅವರನ್ನು 15 ಕೋಟಿ ರೂಪಾಯಿಗೆ ಆರ್​ಸಿಬಿ ಖರೀದಿಸಿದೆ. ಪಂಜಾಬ್ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ತಂಡದ ನಡುವೆ ಬಿಡ್ಡಿಂಗ್‌ ವಾರ್‌ ನಡೆಸಿದ ಆರ್‌ಸಿಬಿ ಭಾರಿ ಪೈಪೋಟಿ ಕೊಟ್ಟು ‌ಕೈಲ್‌ ಜೇಮಿಸ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

Published On - 7:24 pm, Thu, 18 February 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ