AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಕ್ರಿಕೆಟ್ ನಿವೃತ್ತಿ: ಮಹೀ ಭಾಯ್ ಜೊತೆ ಊಟಕ್ಕೆ ಕುಳಿತ್ತಿದ್ದ ನಮಗೆ ಶಾಕ್ ಆಗಿತ್ತು; ರುತುರಾಜ್ ಗಾಯಕ್ವಾಡ್

MS Dhoni: ಸಂಜೆ 7 ಗಂಟೆಗೆ ಮಹೀ ಭಾಯ್ ಸೇರಿದಂತೆ ಎಲ್ಲರೂ ಊಟ ಮಾಡಲು ಕುಳಿತರು. ಆಗ ಇದ್ದಕ್ಕಿದ್ದಂತೆ ಯಾರೋ ಒಬ್ಬರು ಇನ್ಸ್ಟಾಗ್ರಾಮ್ನಲ್ಲಿ ಮಹಿ ಭಾಯ್ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಿದರು.

ಧೋನಿ ಕ್ರಿಕೆಟ್ ನಿವೃತ್ತಿ: ಮಹೀ ಭಾಯ್ ಜೊತೆ ಊಟಕ್ಕೆ ಕುಳಿತ್ತಿದ್ದ ನಮಗೆ ಶಾಕ್ ಆಗಿತ್ತು; ರುತುರಾಜ್ ಗಾಯಕ್ವಾಡ್
ಎಂ ಎಸ್ ಧೋನಿ
Follow us
ಪೃಥ್ವಿಶಂಕರ
|

Updated on: Jun 04, 2021 | 4:43 PM

ವಿರಾಟ್ ಕೊಹ್ಲಿ ಅವರ ನೇತೃತ್ವದಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಐದು ಟೆಸ್ಟ್ ಸರಣಿಯ ಫೈನಲ್ ಪಂದ್ಯಗಳನ್ನು ಆಡಲು ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ತಲುಪಿದೆ. ಶೀರ್ಷಿಕೆ ಪಂದ್ಯವು ಜೂನ್ 18 ರಿಂದ ಸೌತಾಂಪ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿದ್ದು, ನಂತರ ಟೀಮ್ ಇಂಡಿಯಾ ಕೂಡ ಆತಿಥೇಯ ತಂಡದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ. ಏತನ್ಮಧ್ಯೆ, ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಮನೆಯಲ್ಲಿ ಕುಟುಂಬದ ಜೊತೆಗ ಸಮಯವನ್ನು ಕಳೆಯುತ್ತಿದ್ದಾರೆ. ಕೆಲವು ದಿನಗಳ ನಂತರ ಅವರು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಉಳಿದ ಪಂದ್ಯಗಳಿಗೆ ತಯಾರಿ ನಡೆಸಬೇಕಾಗಿದೆ. ಆದರೆ, ಈಗ ಚೆನ್ನೈ ಸೂಪರ್‌ಕಿಂಗ್ಸ್ ಓಪನರ್ ಸಿಎಸ್‌ಕೆ ನಾಯಕ ಧೋನಿ ನಿವೃತ್ತಿಯ ದಿನ ಅಂದು ಏನಾಯಿತು ಎಂಬುದನ್ನು ವಿವರವಾಗಿ ಹೇಳಿದ್ದಾರೆ.

ವಾಸ್ತವವಾಗಿ, ಎಂಎಸ್ ಧೋನಿ ಕಳೆದ ವರ್ಷ ಅಂದರೆ 15 ಆಗಸ್ಟ್ 2020 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. ಈ ಸಮಯದಲ್ಲಿ ಅವರು ಐಪಿಎಲ್‌ನ 13 ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದೊಂದಿಗೆ ಇದ್ದರು. ಅಂದು ಏನಾಯಿತು ಎಂಬುದನ್ನು ಚೆನ್ನೈ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಧೋನಿ ನಿವೃತ್ತಿಯ ಬಗ್ಗೆ ಪ್ರಮುಖ ವಿಷಯಗಳನ್ನು ಹೇಳಿದ್ದಾರೆ. ಧೋನಿ ನಿವೃತ್ತಿಯಾದ ಸುಮಾರು 10 ತಿಂಗಳ ನಂತರ, ಗೈಕ್ವಾಡ್ ಆ ಸಮಯದಲ್ಲಿ ತಂಡದ ವಾತಾವರಣದ ಬಗ್ಗೆ ಅನೇಕ ವಿಷಯಗಳನ್ನು ಹೇಳಿದ್ದಾರೆ. ಗಾಯಕ್ವಾಡ್ ಪ್ರಕಾರ, ಧೋನಿ ತನ್ನ ನಿರ್ಧಾರದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲವಂತೆ.

ಆ ದಿನ ಸಂಜೆ 7 ಗಂಟೆಗೆ ಧೋನಿ ಊಟಕ್ಕೆ ಕುಳಿತಿದ್ದರು ಆ ದಿನ ದುಬೈಗೆ ತೆರಳುವ ಮುನ್ನ 10 ರಿಂದ 15 ಆಟಗಾರರು ಚೆನ್ನೈನಲ್ಲಿ ಧೋನಿಯೊಂದಿಗೆ ಅಭ್ಯಾಸ ಮಾಡುತ್ತಿದ್ದರು ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ. ಆದರೆ ಯಾವುದೇ ಆಟಗಾರರಿಗೂ ಇದರ ಬಗ್ಗೆ ಸುಳಿವು ಸಹ ಇರಲಿಲ್ಲ. ಆಗಸ್ಟ್ 15 ರ ಆ ದಿನವು ಉಳಿದ ಸಾಮಾನ್ಯ ದಿನಗಳಂತೆ ಇತ್ತು. ಸಿಎಸ್ಕೆ ಆಟಗಾರರು ನಿವೃತ್ತಿಯ ಸುದ್ದಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿದುಕೊಂಡೆವು. ಈ ಬಗ್ಗೆ ನನಗೆ ಏನೂ ತಿಳಿದಿರಲಿಲ್ಲ. ಸಂಜೆ 6.30 ರ ಸುಮಾರಿಗೆ ಅಭ್ಯಾಸ ಕೊನೆಗೊಂಡಿತು. ಸಂಜೆ 7 ಗಂಟೆಗೆ ಮಹೀ ಭಾಯ್ ಸೇರಿದಂತೆ ಎಲ್ಲರೂ ಊಟ ಮಾಡಲು ಕುಳಿತರು. ಆಗ ಇದ್ದಕ್ಕಿದ್ದಂತೆ ಯಾರೋ ಒಬ್ಬರು ಇನ್ಸ್ಟಾಗ್ರಾಮ್ನಲ್ಲಿ ಮಹಿ ಭಾಯ್ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಿದರು.

ಆ ಸಮಯದಲ್ಲಿ ಏನೂ ಭಿನ್ನವಾಗಿ ಕಾಣಲಿಲ್ಲ. ಚರ್ಚೆಯಿಲ್ಲ. ಇದೆಲ್ಲವೂ ಆಗಲಿದೆ ಎಂಬುದಕ್ಕೆ ಯಾವುದೇ ಸೂಚನೆಗಳಿಲ್ಲ. ಆದ್ದರಿಂದ ನೀವು ಅವರೊಂದಿಗೆ ಏನನ್ನೂ ಊಹಿಸಲು ಸಾಧ್ಯವಿಲ್ಲ ಎಂದರು. ನಾನು ಧೋನಿ ಅವರ ನಿವೃತ್ತಿಯ ಬಗ್ಗೆ ತಿಳಿದಾಗ, ಅವರೊಂದಿಗೆ ಮಾತನಾಡಲು ಧೈರ್ಯ ಮಾಡಲಿಲ್ಲ. ಇದ್ದಕ್ಕಿದ್ದಂತೆ ಈ ಆಲೋಚನೆ ಮನಸ್ಸಿಗೆ ಬಂದಿತು, ಈಗ ಅವರು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಡುವುದನ್ನು ನೋಡಲು ನಮಗೆ ಸಾಧ್ಯವಾಗುವುದಿಲ್ಲ. ಇದನ್ನು ಅರಗಿಸಿಕೊಳ್ಳಲು ನನಗೆ ತುಂಬಾ ಸಮಯ ತೆಗೆದುಕೊಂಡಿತು. ಮಹೀ ಭಾಯ್ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ ಎಂದು ಅರ್ಥಮಾಡಿಕೊಳ್ಳಲು ಮೂರು ದಿನಗಳು ಬೇಕಾದವು.ಇದು ನನ್ನೊಬ್ಬನಿಗೆ ಮಾತ್ರವಲ್ಲ, ಅಲ್ಲಿದ್ದ ಎಲ್ಲರಿಗೂ ಈ ರೀತಿಯಾಗಿತ್ತು ಎಂದು ಅಂದಿನ ಕ್ಷಣದ ಬಗ್ಗೆ ರುತುರಾಜ್ ವಿವರಿಸಿದ್ದಾರೆ.

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ