AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್

ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದ ಆಟದಲ್ಲಿ 'ಅಂಪೈರ್ಸ್ ಕಾಲ್' ಆಸೀಸ್ ಆಟಗಾರರನ್ನ ಎರಡು ಬಾರಿ ರಕ್ಷಿಸಿತು. ಹೀಗಾಗಿ ಅಂಪೈರ್ಸ್ ಕಾಲ್ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಸಚಿನ್​ ಟ್ವಿಟ್​ ಮಾಡುವ ಮೂಲಕ ತಮ್ಮ ಅಸಮಾದಾನ ಹೊರಹಾಕಿದ್ದಾರೆ.

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್
ಔಟಾದ ನಿರಾಶೆಯಲ್ಲಿ ಸಚಿನ್​ ತೆಂಡೂಲ್ಕರ್​
ಪೃಥ್ವಿಶಂಕರ
|

Updated on:Dec 28, 2020 | 12:39 PM

Share

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) DRS ( Decision Review System )ನ್ನು ಮರು ಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಭಾರತದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ DRS ನಲ್ಲಿರುವ ನ್ಯೂನತೆಗೆಳ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಆನ್-ಫೀಲ್ಡ್ ಅಂಪೈರ್ ನಿರ್ಧಾರಗಳಿಂದ ಹೆಚ್ಚು ಸಂತ್ರಸ್ತರಾಗಿರುವ ತೆಂಡೂಲ್ಕರ್! ಈ ವಿಚಾರದ ಬಗ್ಗೆ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಸ್ಟರ್​ ಬ್ಲಾಸ್ಟರ್​, ಆಟಗಾರರು DRS ಆರಿಸಿಕೊಳ್ಳಲು ಕಾರಣವೆಂದರೆ, ಅವರು ಆನ್-ಫೀಲ್ಡ್ ಅಂಪೈರ್ ತೆಗೆದುಕೊಂಡ ನಿರ್ಧಾರದ ಬಗ್ಗೆ ಅಸಮಾಧಾನ ಹೊಂದಿರುತ್ತಾರೆ. ಹೀಗಾಗಿ ಡಿಆರ್​ಎಸ್ ವ್ಯವಸ್ಥೆಯನ್ನು, ಐಸಿಸಿ ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ. ವಿಶೇಷವಾಗಿ ‘ಅಂಪೈರ್ಸ್ ಕರೆ’ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕೆಂದು ಕೇಳಿಕೊಂಡಿದ್ದಾರೆ.

ಆನ್-ಫೀಲ್ಡ್ ಅಂಪೈರ್ ನಿರ್ಧಾರಗಳಿಂದ ಸಚಿನ್ ತೆಂಡೂಲ್ಕರ್ ಹೆಚ್ಚು ಸಂತ್ರಸ್ತರಾಗಿರುವುದು ಸತ್ಯದ ಮಾತು! ಅದರಲ್ಲೂ ತಾವು ಅದ್ಭುತ ಫಾರಂನಲ್ಲಿದ್ದು ಬ್ಯಾಟ್​ ಮಾಡುತ್ತಿದ್ದಾಗ  90s ನಲ್ಲಿ ಅಂಪೈರುಗಳ ಕೆಟ್ಟ ನಿರ್ಧಾರಗಳಿಂದ ಸಚಿನ್ ತೆಂಡೂಲ್ಕರ್ ಔಟ್​ ಆಗುತ್ತಿದ್ದ ಸಂದರ್ಭಗಳು ಅನೇಕವಿವೆ. ಇಲ್ಲವಾದಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯಲ್ಲಿ ಇನ್ನೂ ಅನೇಕ ಶತಕಗಳು ಸೇರ್ಪಡೆಯಾಗುತ್ತಿದ್ದವು.

ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದ ಆಟದಲ್ಲಿ ‘ಅಂಪೈರ್ಸ್ ಕಾಲ್’ ಆಸೀಸ್ ಆಟಗಾರರನ್ನ ಎರಡು ಬಾರಿ ರಕ್ಷಿಸಿತು. ಹೀಗಾಗಿ ಅಂಪೈರ್ಸ್ ಕಾಲ್ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಸಚಿನ್​ ಟ್ವಿಟ್​ ಮಾಡುವ ಮೂಲಕ ತಮ್ಮ ಅಸಮಾದಾನ ಹೊರಹಾಕಿದ್ದಾರೆ.

ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಜಸ್ಪ್ರಿತ್ ಬುಮ್ರಾ ಅವರ ಯಾರ್ಕರ್‌ ಎಸೆತವನ್ನು ಎದುರಿಸಿದ ಜೋ ಬರ್ನ್ಸ್, ಆ ಬಾಲನ್ನು ತಮ್ಮ ಕಾಲಿಗೆ ತಗುಲಿಸಿಕೊಂಡರು. ಹೀಗಾಗಿ ಟೀಂ ಇಂಡಿಯಾ ಔಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಿತು. ಆದರೆ ಅಂಪೈರ್ ಅದನ್ನು ನಾಟ್ ಔಟ್​ ಎಂದು ತೀರ್ಪು ನೀಡಿದರು. ಬಳಿಕ ಭಾರತ DRS ತೆಗೆದುಕೊಂಡಿತು. DRSನಲ್ಲಿ ಜೋ ಬರ್ನ್ಸ್ ಔಟ್​ ಎಂಬುದು ಸಾಬೀತಾಗಿತ್ತು. ಆದರೆ ಅದು ಅಂಪೈರ್ಸ್ ಕಾಲ್ ಆಗಿದ್ದರಿಂದ ಜೋ ಬರ್ನ್ಸ್ ನಾಟ್​ಔಟಾಗಿ ಉಳಿದರು.

ಹಾಗೆಯೇ ಮಾರ್ನಸ್ ಲಾಬುಸ್ಚಾಗ್ನೆ ಕೂಡ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಔಟಾಗಿದ್ದರು. ಆದರೆ ಅಂಪೈರ್ ಅದನ್ನು ನಾಟ್ ಔಟ್​ ಎಂದು ಸಾರಿದರು. ಹೀಗಾಗಿ DRS ನಲ್ಲಿ ಔಟಾಗಿರುವುದು ಸ್ಪಷ್ಟವಾಗಿದ್ದರೂ, ಅದು ಅಂಪೈರ್​ ಕಾಲ್ ಆಗಿದ್ದರಿಂದ ಮಾರ್ನಸ್ ಲಾಬುಸ್ಚಾಗ್ನೆ ಜೀವದಾನ ಸಿಕ್ಕಿತು! ಅದು ಸಚಿನ್ ತೆಂಡೂಲ್ಕರ್ ಅವರ ಕೋಪಕ್ಕೆ ನೀರೆರೆಯಿತು.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

Published On - 12:17 pm, Mon, 28 December 20

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​