AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖ್ತರ್ ಎಸೆತ ನನ್ನ ಪಕ್ಕೆಲುಬುಗಳನ್ನು ಘಾಸಿಗೊಳಿಸಿತ್ತು.. 2 ತಿಂಗಳು ನೋವಿನಿಂದ ನರಳಿದ್ದೆ; ಸಚಿನ್ ತೆಂಡೂಲ್ಕರ್

ಏಕದಿನ ಪಂದ್ಯವೊಂದರಲ್ಲಿ ಅಖ್ತರ್ ಎಸೆತ, ಬ್ಯಾಟಿಂಗ್ ಮಾಡುತ್ತಿದ್ದ ಸಚಿನ್ ಅವರ ಪಕ್ಕೆಲುಬುಗಳಿಗೆ ನೋವನ್ನುಂಟು ಮಾಡಿತ್ತು ಎಂದು ಸಚಿನ್ ಹೇಳಿದ್ದಾರೆ.

ಅಖ್ತರ್ ಎಸೆತ ನನ್ನ ಪಕ್ಕೆಲುಬುಗಳನ್ನು ಘಾಸಿಗೊಳಿಸಿತ್ತು.. 2 ತಿಂಗಳು ನೋವಿನಿಂದ ನರಳಿದ್ದೆ; ಸಚಿನ್ ತೆಂಡೂಲ್ಕರ್
ಶೋಯೆಬ್ ಅಖ್ತರ್‌ ,ಸಚಿನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on: May 17, 2021 | 5:48 PM

Share

2007 ರಲ್ಲಿ ಶೋಯೆಬ್ ಅಖ್ತರ್‌ ಘಾತಕ ಎಸೆತದಿಂದ ಆದ ಗಾಯದ ಬಗ್ಗೆ ಸಚಿನ್ ತೆಂಡೂಲ್ಕರ್ ಈಗ ಮಾತಾನಾಡಿದ್ದಾರೆ. 2007 ರಲ್ಲಿ ಪಾಕಿಸ್ತಾನದ ತಂಡವು ಭಾರತಕ್ಕೆ ಭೇಟಿ ನೀಡಿದಾಗ, ಏಕದಿನ ಪಂದ್ಯವೊಂದರಲ್ಲಿ ಅಖ್ತರ್ ಎಸೆತ, ಬ್ಯಾಟಿಂಗ್ ಮಾಡುತ್ತಿದ್ದ ಸಚಿನ್ ಅವರ ಪಕ್ಕೆಲುಬುಗಳಿಗೆ ನೋವನ್ನುಂಟು ಮಾಡಿತ್ತು ಎಂದು ಸಚಿನ್ ಹೇಳಿದ್ದಾರೆ. ಇದರಿಂದಾಗಿ ಸಚಿನ್ ತುಂಬಾ ನೋವಿನಿಂದ ನರಳಬೇಕಾಯಿತು. ಆದರೆ ನೋವಿನ ನಂತರವೂ ಸಚಿನ್ ತೆಂಡೂಲ್ಕರ್ ಮುಂದಿನ ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದರು. ಅಖ್ತರ್ ಎಸೆತ ಮಾಡಿದ್ದ ಕೆಲಸದಿಂದಾಗಿ ಸಚಿನ್ ಕೆಮ್ಮುವಾಗ ಅಥವಾ ಮಕಾಡೆ ಮಲಗುವಾಗ ಬರೋಬ್ಬರಿ ಎರಡು ತಿಂಗಳ ಕಾಲ ನೋವಿನಿಂದ ಬಳಲಿದ್ದರಂತೆ.

ಚೆಂಡು ನನ್ನ ಪಕ್ಕೆಲುಬುಗಳಿಗೆ ಬಿದ್ದಿತ್ತು ಈ ಬಗ್ಗೆ ಮಾತಾನಾಡಿದ ಸಚಿನ್ ತೆಂಡೂಲ್ಕರ್, 2007 ರಲ್ಲಿ ನನ್ನ ಪಕ್ಕೆಲುಬುಗಳು ಚೆಂಡಿನ ಹೊಡೆತದಿಂದ ನೋವಿಗೆ ಒಳಗಾಗಿದ್ದವು. ನಾವು ಭಾರತದಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯ ಆಡುತ್ತಿದ್ದೆವು. ಈ ವೇಳೆ ಮೊದಲ ಓವರ್‌ನಲ್ಲಿಯೇ ಶೋಯೆಬ್ ಅಖ್ತರ್ ಅವರು ಎಸೆದ ಚೆಂಡು ನನ್ನ ಪಕ್ಕೆಲುಬುಗಳಿಗೆ ಬಿದ್ದಿತ್ತು. ಇದರಿಂದ ಸಾಕಷ್ಟು ನೋವು ಅನುಭವಿಸಬೇಕಾಯಿತು. ಎರಡು ತಿಂಗಳವರೆಗೆ ನನಗೆ ಕೆಮ್ಮಲು ಅಥವಾ ಮಲಗಲು ಸಾಧ್ಯವಾಗಲಿಲ್ಲ. ಆದರೆ ನಾನು ನಿರಂತರವಾಗಿ ಆಟವಾಡುತ್ತಿದ್ದೆ. ಜೊತೆಗೆ ಉಳಿದ ನಾಲ್ಕು ಏಕದಿನ ಮತ್ತು ಟೆಸ್ಟ್ ಸರಣಿಯಲ್ಲೂ ಆಡಿದ್ದೇನೆ.

ಗಾಯದ ಸ್ಕ್ಯಾನ್ ಮಾಡಿದಾಗ ಪಕ್ಕೆಲುಬು ಗಾಯ ಪತ್ತೆ 2007 ರಲ್ಲಿ, ಪಾಕಿಸ್ತಾನ ವಿರುದ್ಧ ಮೂರು ಟೆಸ್ಟ್ ಮತ್ತು ಐದು ಏಕದಿನ ಪಂದ್ಯಗಳ ನಂತರ, ಭಾರತ ನಾಲ್ಕು ಟೆಸ್ಟ್ ಸರಣಿಗಳಿಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತು. ಈ ಸರಣಿಯಲ್ಲಿ ಶ್ರೀಲಂಕಾ ತಂಡವು ಒಂದು ಬಾಗವಾಗಿತ್ತು. ಈ ಅವಧಿಯಲ್ಲಿ ಸಚಿನ್ ತಂಡದಲ್ಲಿದ್ದರು. ಆದಾಗ್ಯೂ, ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಅವರಿಗೆ ಸ್ನಾಯು ಸೆಳೆತದ ತೊಂದರೆ ಕಾಣಿಸಿಕೊಂಡಿತ್ತು. ಸಚಿನ್ ಭಾರತಕ್ಕೆ ಹಿಂದಿರುಗಿದ ನಂತರ, ಪೂರ್ಣ ದೇಹ ತಪಾಸಣೆ ಮಾಡಿದರು. ಆ ಸಮಯದಲ್ಲಿ, ವೈದ್ಯರು ಸಚಿನ್ ಅವರ ಪಕ್ಕೆಲುಬಿನಲ್ಲಿ ಗಾಯವಾಗಿದೆ ಎಂದು ಹೇಳಿದ್ದರು.

ಪಕ್ಕೆಲುಬು ಕೂಡ ಮುರಿದು ಹೋಗಿರಬಹುದು ಆದರೆ ನಾನು ವೈದ್ಯರನ್ನು ಪಕ್ಕೆಲುಬಿನ ಬಗ್ಗೆ ಕೇಳಲಿಲ್ಲ. ಕೇವಲ ಸ್ನಾಯು ಸೆಳೆತದ ಗಾಯದ ಬಗ್ಗೆ ನಾನು ಚಿಂತೆ ಮಾಡುತ್ತಿದ್ದೆ. ಏಕೆಂದರೆ ಐಪಿಎಲ್ ಇನ್ನೇನೂ ಪ್ರಾರಂಭವಾಗಲಿತ್ತು. ಆದರೆ ನಾನು ಐಪಿಎಲ್‌ನ ಮೊದಲ ಏಳು ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. ಜೊತೆಗೆ ಬೇರೆ ಸ್ಥಳದಲ್ಲಿ ಗಾಯವಾಗಿದೆ ಎಂದು ವೈದ್ಯರು ಹೇಳಿದ್ದರು. ಬಹುಶಃ ನಿಮ್ಮ ಪಕ್ಕೆಲುಬು ಕೂಡ ಮುರಿದು ಹೋಗಿರಬಹುದು ಎಂದು ವೈದ್ಯರು ಹೇಳಿದ್ದರು. ಆದರೆ ಅಖ್ತರ್ ಎಸೆದ ಎಸೆತ ನನ್ನನ್ನು ಎರಡು ತಿಂಗಳಿಂದ ಕಾಡುತ್ತಿತ್ತು ಎಂದಿದ್ದಾರೆ.

ಇದನ್ನೂ ಓದಿ:ಮೊದಲ ಭೇಟಿಯಲ್ಲಿ ಸಚಿನ್ ಕಾಲಿಗೆ ಬಿದ್ದಿದ್ದ ಕೊಹ್ಲಿ; ಯುವಿ, ಬಜ್ಜಿ, ಪಠಾಣ್ ಕುಚೇಷ್ಟೆಗೆ ಬಲಿಯಾಗಿದ್ದ ವಿರಾಟ್

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ