AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ DRS ವಿರೋಧಿ, ಯಾಕೆ ಗೊತ್ತಾ?

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾರ್ಡನ್ ಕ್ರಿಕೆಟ್​ನ ಎಲ್ಲಾ ತಂತ್ರಜ್ಞಾನವನ್ನೂ ಸ್ವಾಗತಿಸಿದ ಕ್ರಿಕೆಟಿಗ. ಆದ್ರೆ DRS ವಿಚಾರದಲ್ಲಿ ಸಚಿನ್ ಅದೇಕೋ ಮೊದಲಿನಿಂದಲೂ ಅಸಮಾಧಾನ ಹೊಂದಿದ್ರು. ಆದರೆ ಈಗ ಸಚಿನ್ ತಾವ್ಯಾಕೆ DRS ಸಿಸ್ಟಮ್​ನ ವಿರೋಧಿಸ್ತಾರೆ ಅನ್ನೋ ಸಂಗತಿಯನ್ನ ಬಾಯಿಬಿಟ್ಟಿದ್ದಾರೆ. DRSಗೆ ಸಂಬಂಧಿಸಿದಂತೆ ವೆಸ್ಟ್ ಇಂಡೀಸ್‌ನ ದಿಗ್ಗಜ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಜೊತೆ ನಡೆಸಿರುವ ಸಂಭಾಷಣೆಯ ವಿಡಿಯೋವನ್ನು ಸಚಿನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸಚಿನ್ DRS ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಚೆಂಡು ಯಾವ ಶೇಕಡಾ […]

ಸಚಿನ್ DRS ವಿರೋಧಿ, ಯಾಕೆ ಗೊತ್ತಾ?
KUSHAL V
|

Updated on:Jul 14, 2020 | 3:14 PM

Share

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾರ್ಡನ್ ಕ್ರಿಕೆಟ್​ನ ಎಲ್ಲಾ ತಂತ್ರಜ್ಞಾನವನ್ನೂ ಸ್ವಾಗತಿಸಿದ ಕ್ರಿಕೆಟಿಗ. ಆದ್ರೆ DRS ವಿಚಾರದಲ್ಲಿ ಸಚಿನ್ ಅದೇಕೋ ಮೊದಲಿನಿಂದಲೂ ಅಸಮಾಧಾನ ಹೊಂದಿದ್ರು. ಆದರೆ ಈಗ ಸಚಿನ್ ತಾವ್ಯಾಕೆ DRS ಸಿಸ್ಟಮ್​ನ ವಿರೋಧಿಸ್ತಾರೆ ಅನ್ನೋ ಸಂಗತಿಯನ್ನ ಬಾಯಿಬಿಟ್ಟಿದ್ದಾರೆ.

DRSಗೆ ಸಂಬಂಧಿಸಿದಂತೆ ವೆಸ್ಟ್ ಇಂಡೀಸ್‌ನ ದಿಗ್ಗಜ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಜೊತೆ ನಡೆಸಿರುವ ಸಂಭಾಷಣೆಯ ವಿಡಿಯೋವನ್ನು ಸಚಿನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸಚಿನ್ DRS ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ.

ಚೆಂಡು ಯಾವ ಶೇಕಡಾ ಆಧಾರದಲ್ಲಿ ಸ್ಟಂಪ್​ಗೆ ಬಡಿಯಿತು ಅನ್ನೋದು ಮುಖ್ಯವಲ್ಲ. DRS​ನಲ್ಲಿ ಬಾಲ್ ಸ್ಟಂಪ್​ಗೆ ಬಡಿದಿದ್ದು ಕಂಡುಬಂದರೆ ಆನ್ ಫೀಲ್ಡ್ ಅಂಪೈರ್ DRS ತೆಗೆದುಕೊಳ್ಳದೆ ಬ್ಯಾಟ್ಸ್​ಮನ್ ಔಟ್ ಆಗಿದ್ದಾನೆ ಎಂದು ತೀರ್ಪು ನೀಡಬೇಕು. DRS​ನಲ್ಲಿ ಈ ಬದಲಾವಣೆಯನ್ನು ತಂದರೆ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿದಂತಾಗುತ್ತದೆ. ಮನುಷ್ಯರಂತೆ ತಂತ್ರಜ್ಞಾನವೂ ಯಾವಾಗಲೂ ಕರೆಕ್ಟ್​​​ ಆಗಿರಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ. ಈ ಪರಿಕಲ್ಪನೆ ದೋಷಪೂರಿತವಾಗಿದೆ ಎಂದಿದ್ದಾರೆ. ICCಯೊಂದಿಗೆ ನಾನು ಒಪ್ಪದ ವಿಷಯದಲ್ಲಿ ಅದೂ ಇದೆ ಎಂದು ಬ್ರಿಯಾನ್ ಲಾರಾ ಬಳಿ ಸಚಿನ್ ತೆಂಡೂಲ್ಕರ್ ಹಂಚಿಕೊಂಡಿದ್ದಾರೆ.

ಈ DRS ಅಂದ್ರೆ ಏನು? DRS ಅಂದ್ರೆ ಡಿಸೀಷನ್ ರಿವ್ಯೂ ಸಿಸ್ಟಮ್. ಬ್ಯಾಟ್ಸ್​ಮನ್​ ಔಟ್​ ಆಗಿದ್ದಾನೋ ಅನ್ನೋ ಅನುಮಾನವನ್ನ ಪರಿಹರಿಸಿಕೊಳ್ಳೋದಕ್ಕೆ ಈ ತಂತ್ರಜ್ಞಾನವನ್ನ ಬಳಸಿಕೊಳ್ಳಲಾಗುತ್ತೆ. LBW ಸಮಯದಲ್ಲಿ ಬಾಲ್ ಶೇಕಡಾ 50ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸ್ಟಂಪ್​ಗೆ ಬಡಿದಿದ್ರೆ, ಆಗ ಡಿಸೀಷನ್ ರಿವ್ಯೂ ಸಿಸ್ಟಮ್ ಅನ್ನ ಬಳಸಿಕೊಳ್ಳಲಾಗುತ್ತೆ. ಆದ್ರೆ ಇದರಿಂದ ಅನರ್ಥಗಳಾಗೋದೇ ಹೆಚ್ಚು ಅನ್ನೋದು ಸಚಿನ್ ವಾದ. ಸಚಿನ್ ಹೇಳಿರೋದ್ರಲ್ಲಿ ತಪ್ಪೇನು ಇಲ್ಲ. ಆಗಾಗ DRSಬಳಸಿ ಉಂಟಾಗೋ ಲೋಪಗಳಿಂದ ಮ್ಯಾಚ್​​ಗಳಲ್ಲಿ ವಿವಾದಗಳು ಆಗ್ತಾನೇ ಇರುತ್ತೆ.

Published On - 3:13 pm, Tue, 14 July 20

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್