AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

WTC Final: ಪಂದ್ಯದ ಕೊನೆಯ ದಿನದಂದು ಭಾರತ ತಂಡವು ಉತ್ತಮ ಜೊತೆಯಾಟ ಆಡುವಲ್ಲಿ ವಿಫಲವಾಯ್ತು. ಅದಕ್ಕಾಗಿಯೇ ತಂಡ ಸೋಲನುಭವಿಸಬೇಕಾಯಿತು.

WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on: Jun 27, 2021 | 6:11 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ ನಿರೀಕ್ಷೆಯಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಮತ್ತು ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್‌ಗಳ ಸೋಲು ಅನುಭವಿಸಿತು. ಭಾರತದ ಮಾಜಿ ನಾಯಕ ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್, ಪಂದ್ಯದ ಕೊನೆಯ ದಿನದಂದು ಭಾರತ ತಂಡವು ಉತ್ತಮ ಜೊತೆಯಾಟ ಆಡುವಲ್ಲಿ ವಿಫಲವಾಯ್ತು. ಅದಕ್ಕಾಗಿಯೇ ತಂಡ ಸೋಲನುಭವಿಸಬೇಕಾಯಿತು. ಭಾರತವು ಕೊನೆಯ ದಿನವನ್ನು ಎರಡು ವಿಕೆಟ್‌ಗಳ ನಷ್ಟಕ್ಕೆ 64 ರನ್‌ಗಳೊಂದಿಗೆ ಪ್ರಾರಂಭಿಸಿತು ಆದರೆ ಶೀಘ್ರದಲ್ಲೇ ಇಡೀ ತಂಡವು 170 ರನ್‌ಗಳಿಗೆ ಆಲೌಟ್ ಆಗಿತ್ತು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.

ವಿಕೆಟ್‌ ಬೇಗಬೇಗ ಬಿದ್ದವು ಆರಂಭದಲ್ಲಿ ಭಾರತ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡ ನಂತರ ಅಜಿಂಕ್ಯ ರಹಾನೆ ಕಳಪೆ ರೀತಿಯಲ್ಲಿ ಔಟ್ ಆದರು. ಆಗ ಭಾರತದ ಬ್ಯಾಟ್ಸ್‌ಮನ್‌ಗಳು ವಿಕೆಟ್‌ಗಳನ್ನು ಉಳಿಸಿಕೊಳ್ಳುವ ಅಗತ್ಯವಿತ್ತು ಎಂದು ಸಚಿನ್ ಹೇಳಿದ್ದಾರೆ. ಮೊದಲ 10-12 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದಿರುವುದು ಬಹಳ ಮುಖ್ಯ, ಆದರೆ ಇಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಯಿತು. ಇದರ ಫಲವಾಗಿ ಅವರು ಕೊಹ್ಲಿ-ಪೂಜಾರ ವಿಕೆಟ್‌ಗಳನ್ನು ಪಡೆದರು. ರಹಾನೆ ಸಹ ಹೊರಬಂದರು, ಇದು ಭಾರತದ ಮೇಲೆ ಒತ್ತಡ ಹೇರಿತು. ಇದರಿಂದ ಉಳಿದ ಬ್ಯಾಟ್ಸ್​ಮನ್​ಗಳು ಬಹುಬೇಗನೇ ವಿಕೆಟ್ ಒಪ್ಪಿಸಿದರು.

ಪಂತ್ ಪ್ರಯತ್ನಕ್ಕೆ ಶ್ಲಾಘನೆ ಪಂತ್ ಕೆಲವು ಹೊಡೆತಗಳನ್ನು ಆಡಿ ರನ್ ಗಳಿಸಲು ಪ್ರಯತ್ನಿಸಿದ್ದನ್ನು ಸಚಿನ್ ಮೆಚ್ಚಿಕೊಂಡಿದ್ದಾರೆ. ಪಂತ್ ಕೆಲವು ಅದ್ಭುತ ಶಾಟ್​ಗಳನ್ನು ಹೊಡೆಯುವ ಮೂಲಕ ವಾತಾವರಣವನ್ನು ಬದಲಾಯಿಸಲು ಪ್ರಯತ್ನಿಸಿದರು. ನಮ್ಮ ಬೌಲರ್‌ಗಳು ಕೂಡ ಇನ್ನೂ ಕೆಲವು ಓವರ್‌ಗಳನ್ನು ಆಡಬಹುದಿತ್ತು. ಆದರೆ ಭಾರತದ ಬೌಲರ್​ಗಳು ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತ ಬಂದರು. ಇದರಿಂದಾಗಿ ಪಂದ್ಯವನ್ನು 10-15 ಓವರ್‌ಗಳಲ್ಲಿ ನಿರ್ಧರಿಸಲಾಯಿತು. ನಮ್ಮ ಕಡೆಯಿಂದ ಉತ್ತಮ ಜೊತೆಯಾಟ ಇದ್ದಿದ್ದರೆ, ನಾವು ಅವರ ಮೇಲೆ ಒತ್ತಡ ಹೇರಬಹುದಿತ್ತು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ